Breaking: ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್
Recommended Video
ನವದೆಹಲಿ, ಜನವರಿ 29: ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸೈನಾ ಅವರೊಂದಿಗೆ ಅವರ ಸಹೋದರಿ ಚಂದ್ರಾನ್ಶು ಕೂಡ ಬಿಜೆಪಿ ಸೇರಿಕೊಂಡಿದ್ದಾರೆ.
ಹರಿಯಾಣದ ಹಿಸಾರ್ ಮೂಲದವರಾದ ಸೈನಾ ನೆಹ್ವಾಲ್ ಬುಧವಾರ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ತಾರಾ ಪ್ರಚಾರಕರಾಗಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.
ದೆಹಲಿ ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿಯೇ 29 ವರ್ಷದ ಸೈನಾ ಬಿಜೆಪಿ ಸೇರಿಕೊಂಡಿದ್ದಾರೆ .ಬ್ಯಾಡ್ಮಿಂಟನ್ನಲ್ಲಿ 11 ಸೂಪರ್ ಸೀರೀಸ್ ಸೇರಿದಂತೆ 24 ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಸೈನಾ, 2015ರಲ್ಲಿ ಜಗತ್ತಿನ ನಂಬರ್ ಒನ್ ಶ್ರೇಯಾಂಕದ ಆಟಗಾರ್ತಿಯೆಮಬ ಕೀರ್ತಿಗೆ ಭಾಜನರಾಗಿದ್ದರು. ಪ್ರಕಾಶ್ ಪಡುಕೋಣೆ ಬಳಿಕ ಈ ಗೌರವ ಪಡೆದ ಭಾರತದ ಎರಡನೆಯ ಕ್ರೀಡಾಪಟು ಎನಿಸಿದ್ದರು.

ಸಾಧನೆ ಪ್ರಚಾರ ಮಾಡಿದ್ದ ಸೈನಾ
2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಪಡೆದಿದ್ದರು. ಇನ್ನೂ ಕ್ರೀಡಾರಂಗದಲ್ಲಿ ಸಕ್ರಿಯರಾಗಿರುವ ಅವರು, ಈಗಲೇ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ. ನರೇಂದ್ರ ಮೋದಿ ನೇತೃತ್ವದ ಮೊದಲ ಎನ್ಡಿಎ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ತಾರಾ ಪ್ರಚಾರಕರಲ್ಲಿ ಸೈನಾ ಕೂಡ ಒಬ್ಬರಾಗಿದ್ದರು.

ಮೋದಿ ಭಾಷಣ ಶ್ಲಾಘಿಸಿದ್ದ ಸೈನಾ
ದೆಹಲಿಯ ರಾಮಲೀಲಾ ಮೈದಾನದಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಮಾವೇಶದಲ್ಲಿ ಮಾಡಿದ್ದ ಭಾಷಣವನ್ನು ಸೈನಾ ಟ್ವಿಟ್ಟರ್ನಲ್ಲಿ ಶ್ಲಾಘಿಸಿದ್ದು ಗಮನ ಸೆಳೆದಿತ್ತು. ಈ ಹಿಂದೆಯೂ ಮೋದಿ ಅವರನ್ನು ಸೈನಾ ನೆಹ್ವಾಲ್ ಭೇಟಿ ಮಾಡಿದ್ದರು.

ಅಭಿನಂದನೆ ತಿಳಿಸಿದ್ದ ಸೈನಾ
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬಳಿಕ ಸೈನಾ ನೆಹ್ವಾಲ್, ಟ್ವಿಟ್ಟರ್ನಲ್ಲಿ ಅಭಿನಂದನೆ ತಿಳಿಸಿದ್ದರು. 'ಮತ್ತೊಮ್ಮೆ ಮೋದಿ ಸರ್ಕಾರ. ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು' ಎಂದಿದ್ದ ಸೈನಾ, 'ಬಿಜೆಪಿಯ ಗೆಲುವಿಗೆ ಕಾರಣರಾಗಿದ್ದ ಅಮಿತ್ ಶಾ ಅವರಿಗೆ ಅಭಿನಂದನೆ ತಿಳಿಸುತ್ತೇನೆ' ಎಂದು ಮತ್ತೊಂದು ಟ್ವೀಟ್ ಮಾಡಿದ್ದರು.

ಅಮಿತ್ ಶಾ-ಸೈನಾ ಭೇಟಿ
2018ರ ಜೂನ್ನಲ್ಲಿ ಆಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ, ತೆಲಂಗಾಣದಲ್ಲಿರುವ ಸೈನಾ ನೆಹ್ವಾಲ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. 'ನನ್ನ ಮನೆಯಲ್ಲಿ ಅಮಿತ್ ಶಾ ಸರ್ ಅವರನ್ನು ಭೇಟಿ ಮಾಡಿರುವುದು ನನಗೆ ಗೌರವ ತಂದಿದೆ. ನಿಮ್ಮ ಪ್ರೋತ್ಸಾಹದಾಯಕ ಮಾತುಗಳಿಗೆ ಧನ್ಯವಾದಗಳು. ಬಿಜೆಪಿ ಸರ್ಕಾರದ ವಿಭಿನ್ನ ಪ್ರಯತ್ನಗಳ ಬಗ್ಗೆ ನಾನು ಸಾಕಷ್ಟು ತಿಳಿದೆ' ಎಂದು ಸೈನಾ ಹೇಳಿದ್ದರು.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications