Get Updates
Get notified of breaking news, exclusive insights, and must-see stories!

ಧಗಧಗ ಹೊತ್ತಿ ಉರಿಯುತ್ತಿದೆ ಉತ್ತರ ಪ್ರದೇಶ, ಗುಂಡಿನ ಸದ್ದು ಯಾಕೆ

ಉತ್ತರಪ್ರದೇಶದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಹಿಂಸಾಚಾರ ಹೆಚ್ಚಳವಾಗಿದೆ. ಉತ್ತರ ಪ್ರದೇಶ ರಾಜ್ಯವು ಕಳೆದ ಕೆಲವು ದಿನಗಳಿಂದ ಪ್ರಶಾಂತವಾಗಿ ಇತ್ತು. ಇದೀಗ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಭಾರೀ ಹಿಂಸಾಚಾರ ನಡೆದಿದ್ದು, ಒಬ್ಬ ವ್ಯಕ್ತಿ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.

ದೇಶದಲ್ಲಿ ಹೆಚ್ಚು ಜನ ಸಂಖ್ಯೆ ಇರುವ ರಾಜ್ಯಗಳಲ್ಲಿ ಒಂದಾಗಿರುವ ಹಾಗೂ ಸೂಕ್ಷ್ಮ ಪ್ರದೇಶಗಳನ್ನು ಹೆಚ್ಚಿನ ಸಂಖ್ಯೆ ಇರುವಂತಹ ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಸಂಘರ್ಷವು. ಸೋಮವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದರಿಂದ ಉತ್ತರ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ವಿವಿಧ ಭಾಗದಲ್ಲಿ ದಸರಾ ಸಂಭ್ರಮಾಚರಣೆ ನಡೆದಿದೆ. ಆದರೆ, ಬುಧವಾರ ದುರ್ಗಾ ವಿಗ್ರಹ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹೊತ್ತಿಕೊಂಡ ಸಣ್ಣ ಕಿಡಿಯು ಭಾರೀ ಅನಾಹುತವನ್ನೇ ಸೃಷ್ಟಿ ಮಾಡಿದೆ.

Bahraich violence Heavy violence in Uttar Pradesh

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಭಾನುವಾರ ಹಿಂದೂ ಧರ್ಮೀಯರು ದುರ್ಗಾ ವಿಗ್ರಹವನ್ನು ವಿಸರ್ಜನೆ ಮಾಡಲು ಮೆರವಣಿಗೆ ಸಾಗಿದ್ದರು. ಆದರೆ, ಎರಡು ಗುಂಪುಗಳ ನಡುವೆ ಭಾರೀ ಮಾತಿನ ಚಕಮಕಿ ನಡೆದ ನಂತರ ಪ್ರತಿಭಟನೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಇದರ ನಡುವೆ ಹಿಂದೂವೊಬ್ಬರನ್ನು ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಈ ಬೆಳವಣಿಗೆಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೂ ಕೊಲೆ; ಪ್ರತಿಭಟನೆ: ಹಿಂದೂ ವ್ಯಕ್ತಿಯನ್ನು ಭಾನುವಾರ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಸೋಮವಾರ ಪ್ರತಿಭಟನೆ ನಡೆದಿದೆ. ಸೋಮವಾರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರದೆ ಇದ್ದಾಗ ಅಶ್ರುವಾಯು ಶೆಲ್‌ ಬಳಸಲಾಗಿದೆ.

ಪರಿಸ್ಥಿತಿ ವಿಕೋಪಕ್ಕೆ: ಉತ್ತರ ಪ್ರದೇಶದಲ್ಲಿ ಎರಡು ಕೋಮುಗಳ ನಡುವೆ ನಡೆದ ಸಂಘರ್ಷವು ಇದೀಗ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆ ಹಲವು ಪ್ರದೇಶಗಳಿಗೆ ಹಬ್ಬಿದೆ. ಇಲ್ಲಿನ ದುರ್ಗಾ ವಿಗ್ರಹ ವಿಸರ್ಜನೆ ಮಾಡಲು ಮೆರವಣಿಗೆ ಸಾಗಿತ್ತು. ಆ ಸಂದರ್ಭದಲ್ಲಿ ಬಹ್ರೈಚ್‌ನ ಮಹಾಸಿ ಎನ್ನುವಲ್ಲಿ ಹಿಂಸಾಚಾರ ವ್ಯಾಪಕವಾಗಿದೆ. ಮೊದಲು ಎರಡು ಕೋಮುಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.

Bahraich violence Heavy violence in Uttar Pradesh

ಸೋಮವಾರ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕೆಲವು ಕಿಡಿಗೇಡಿಗಳು ಇಲ್ಲಿನ ಅಂಗಡಿಗಳು, ಆಸ್ಪತ್ರೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಪೊಲೀಸರು ಬಹ್ರೈಚ್‌ ಜಿಲ್ಲೆಯಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೋಮುಗಲಭೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ 30 ಜನ ಆರೋಪಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಹಲವರಿಗೆ ಮುಂದುವರಿದ ಶೋಧ: ಇನ್ನು ಉತ್ತರ ಪ್ರದೇಶದ ಗಲಭೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು 30 ಜನರನ್ನು ಇಲ್ಲಿಯವರೆಗೆ ಬಂಧಿಸಿದ್ದಾರೆ. ಸಂಘರ್ಷಕ್ಕೆ ಪ್ರಚೋದನೆ ನೀಡಿದವರು ಹಾಗೂ ಗಲಭೆಯಲ್ಲಿ ಭಾಗಿಯಾಗಿದ್ದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೆ ಒಟ್ಟಾರೆ ಉತ್ತರ ಪ್ರದೇಶ ಇನ್ನೂ ಬೂದಿ ಮುಚ್ಚಿದ ಕೆಂಡದಂತೆಯೇ ಇದೆ.

ಇದೀಗ ಈ ಬೆಳವಣಿಗೆ ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಸರ್ಕಾರದ ವೈಫಲ್ಯದಿಂದಲೇ ಈ ಘಟನೆ ನಡೆದಿದೆ ಎಂದು ಉತ್ತರ ಪ್ರದೇಶದ ವಿರೋಧ ಪಕ್ಷಗಳು ಆರೋಪ ಮಾಡಿವೆ.

ಯೋಗಿ ಆದಿತ್ಯನಾಥ್ ಎಚ್ಚರಿಕೆ

ಇನ್ನು ಉತ್ತರ ಪ್ರದೇಶದಲ್ಲಿನ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಹ್ರೈಚ್‌ ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಹಾಳು ಮಾಡಲು ಯಾರಾದರೂ ಪ್ರಯತ್ನಿಸಿದರೆ ಸುಮ್ಮನಿರುವುದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿನ ಎಲ್ಲರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಗಲಭೆಕೋರರು ಹಾಗೂ ಈ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+