ಹಿಂದೂಗಳನ್ನು ರಕ್ಷಿಸಲು ಬಜರಂಗದಳ ಶಸ್ತ್ರಾಸ್ತ್ರ ತರಬೇತಿ!
ರಾಜಘಡ, ಮೇ 27: ಹಿಂದೂಗಳ ರಕ್ಷಣೆಯ ಸಲುವಾಗಿ ಮಧ್ಯಪ್ರದೇಶದ ಬಜರಂಗದಳ ಘಟಕವು ಈ ತಿಂಗಳ ಆರಂಭದಲ್ಲಿ ರಹಸ್ಯವಾಗಿ ಶಸ್ತ್ರಾಸ್ತ್ರ ಮತ್ತು ಇತರೆ ಆಯುಧಗಳ ತರಬೇತಿ ನೀಡಿದೆ.
ರಾಜಗಡ ಜಿಲ್ಲೆಯ ಬವಾರಾದಲ್ಲಿ ಮೇ 3ರಿಂದ 11ರವರೆಗೆ 32 ಜಿಲ್ಲೆಗಳ ಆಯ್ದ ಯುವಕರಿಗೆ ತರಬೇತಿ ಶಿಬಿರ ನಡೆಸಲಾಗಿದೆ. ದೇಶವಿರೋಧಿಗಳು ಮತ್ತು ಲವ್ ಜಿಹಾದ್ನಂತಹ ಘಟನೆಗಳನ್ನು ಹತ್ತಿಕ್ಕಲು ರೈಫಲ್ಗಳು, ಕತ್ತಿ ಮತ್ತು ಲಾಠಿಗಳ ಬಳಕೆಯ ತರಬೇತಿ ನೀಡಲಾಗಿದೆ.
ಶೂಟಿಂಗ್, ಕರಾಟೆ, ಹಗ್ಗ ಅಥವಾ ಟವೆಲ್ ಸಹಾಯದಿಂದ ಮರ ಹತ್ತುವುದು, ಎತ್ತರ ಜಿಗಿತ ಮುಂತಾದ ತರಬೇತಿಗಳನ್ನು 24 ಗಂಟೆಯೂ ನೀಡಲಾಗಿದೆ.

ಒಮ್ಮೆ ಒಳ ಪ್ರವೇಶ ಪಡೆದ ಯುವಕರನ್ನು ಎಂತಹ ಸನ್ನಿವೇಶ ಎದುರಾದರೂ ಶಿಬಿರದಿಂದ ಹೊರಕಳುಹಿಸಲು ಅವಕಾಶವಿರಲಿಲ್ಲ. ಬೆಳಿಗ್ಗೆ 4 ರಿಂದ ರಾತ್ರಿ 11ರವರೆಗೆ ಅವರ ಯೋಗಕ್ಷೇಮ ನೋಡಿಕೊಳ್ಳಲು ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.
ತರಬೇತಿ ಅವಧಿಗೆ ಸಂಬಂಧಿಸಿದ ಫೋಟೊಗಳಿಂದ ಈ ಶಿಬಿರದ ಕುರಿತು ಮಾಹಿತಿ ಬಹಿರಂಗವಾಗಿದೆ.
'ದೇಶ ವಿರೋಧಿಗಳು, ಲವ್ ಜಿಹಾದ್ನಂತಹ ಪ್ರಕರಣಗಳನ್ನು ಎದುರಿಸಲು ನಾವು ಪ್ರತಿ ವರ್ಷ ಈ ರೀತಿಯ ತರಬೇತಿ ನೀಡುತ್ತೇವೆ. 1984ರಲ್ಲಿಯೇ ಈ ತರಬೇತಿ ಆರಂಭಿಸಲಾಗಿತ್ತು ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ದೇವಿ ಸಿಂಗ್ ಸೋಂಧಿಯಾ ತಿಳಿಸಿದ್ದಾರೆ.
'ದೇಶದಲ್ಲಿ ಕಾನೂನು ಮತ್ತು ಸಂವಿಧಾನವಿದೆ. ಈ ರೀತಿ ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಸರ್ಕಾರದಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಧ್ಯಪ್ರದೇಶ ಬಿಜೆಪಿ ವಕ್ತಾರ ರಜನೀಶ್ ಅಗರ್ವಾಲ್ ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications