ರಹಸ್ಯ ಟೇಪ್ : ಏರ್ ಸ್ಟ್ರೈಕ್ ನಂತರ ಉಗ್ರರ ದೇಹ ಸುಟ್ಟು ನದಿಯಲ್ಲಿ ಎಸೆಯಲಾಯಿತೆ?
ನವದೆಹಲಿ, ಮಾರ್ಚ್ 16 : ಬಾಲಕೋಟ್ ಮೇಲೆ ಭಾರತೀಯ ವಾಯು ಸೇನೆ ನಡೆಸಿದ ಏರ್ ಸ್ಟ್ರೈಕ್ ಬಗ್ಗೆ ಸಾಕ್ಷ್ಯ ಸಿಗಬಾರದೆಂದು, ದಾಳಿಯಲ್ಲಿ ಸತ್ತ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ದೇಹಗಳನ್ನು ಪಾಕಿಸ್ತಾನ ಸುಟ್ಟಹಾಕಿ, ದೇಹಗಳನ್ನು ನದಿಗೆಸೆಯಿತೆ?
ಈ ಬಗ್ಗೆ ರಹಸ್ಯ ಮೂಲವೊಂದರಿಂದ ಮೂರು ನಿಮಿಷಗಳ ಆಡಿಯೋ ಸಿಕ್ಕಿದ್ದು, ಅದರಲ್ಲಿ ಪಾಕಿಸ್ತಾನದ ಗೋಸುಂಬೆ ಬಣ್ಣವೆಲ್ಲ ಬಯಲಾಗಿದೆ ಎಂದು ರಿಪಬ್ಲಿಕ್ ಟಿವಿ ವರದಿ ಮಾಡಿದೆ. ಆ ಟೇಪ್ ತನ್ನ ಬಳಿಯಿದೆ ಎಂದು ರಿಪಬ್ಲಿಕ್ ಹೇಳಿಕೊಂಡಿದೆ.
ಫೆಬ್ರವರಿ 26ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮೇಲೆ ಭಾರತೀಯ ವಾಯು ಸೇನೆ ದಾಳಿ ನಡೆಸಿ, ಉಗ್ರ ಸಂಘಟನೆತ ತರಬೇತಿ ನೆಲೆಗಳನ್ನೆಲ್ಲ ಧ್ವಂಸ ಮಾಡಿತ್ತು. ದಾಳಿ ಯಶಸ್ವಿಯಾಗಿದೆ ಎಂದು ಐಎಎಫ್ ಹೇಳಿದ್ದರೂ ಭಾರತದ ವಿರೋಧ ಪಕ್ಷಗಳು ಸಾಕ್ಷ್ಯ ಕೇಳುತ್ತಿದ್ದವು.

ಆ ದಾಳಿಯಲ್ಲಿ ಇನ್ನೂರಕ್ಕೂ ಹೆಚ್ಚು ಉಗ್ರರು ಹತರಾಗಿರುವುದಕ್ಕೆ ಮೊದಲ ಸಾಕ್ಷ್ಯ ಸಿಕ್ಕಿದ್ದು ಮೊಬೈಲ್ ಸಿಗ್ನಲ್ ಟ್ರಾಕ್ ಮಾಡುವ ಮೂಲಕ. ಎರಡನೇ ಸಾಕ್ಷ್ಯ ಸಿಕ್ಕಿದ್ದು, ಇನ್ನೂರಕ್ಕೂ ಹೆಚ್ಚು ದೇಹಗಳನ್ನು ಸ್ಥಳಾಂತರಿಸಿದ ಬಗ್ಗೆ ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾಗಿ ಅಮೆರಿಕದ ಚಳವಳಿಗಾರ ಹೇಳಿದ್ದರು.
ಬಾಲಕೋಟ್ ದಾಳಿಯ ಪ್ರತ್ಯಕ್ಷದರ್ಶಿಯ ಹೇಳಿಕೆ ಹೀಗಿದೆ :
* ಆ ದಾಳಿಯಲ್ಲಿ ಎಷ್ಟು ಜನ ಸತ್ತರು ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಕೂಡಲೆ ಆ ಪ್ರದೇಶವನ್ನು ಆಕ್ರಮಿಸಿಕೊಂಡ ಪಾಕ್ ಸೇನೆ, ಸ್ಥಳೀಯರ ಬಾಯಿಮುಚ್ಚಿ, ಬಲವಂತವಾಗಿ ಅವರ ಮೊಬೈಲುಗಳನ್ನೆಲ್ಲ ಕಿತ್ತುಕೊಂಡಿತು.
* ಅಲ್ಲಿ ತೆಗೆಯಲಾದ ಮೃತದೇಹಗಳ ಚಿತ್ರಗಳು ಮತ್ತು ವಿಡಿಯೋಗಳು ಹಂಚಿಕೊಳ್ಳಬಾರದು ಎಂಬ ಉದ್ದೇಶದಿಂದ ಬಾಲಕೋಟ್ ನಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕೂಡಲೆ ಕಟ್ ಮಾಡಲಾಯಿತು. ಆದರೂ ಕೆಲವೆಡೆ ಈ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.
* ಗಾಯಗೊಂಡ ಯಾವುದೇ ಉಗ್ರರಿಗೆ ಚಿಕಿತ್ಸೆ ನೀಡದಂತೆ ವೈದ್ಯರಿಗೆ ನಿರ್ಬಂಧ ಹೇರಲಾಯಿತು.
* ಕಾರುಗಳಿಂದ ಪೆಟ್ರೋಲ್ ತರಿಸಿಕೊಂಡು ಭಾರೀ ಪ್ರಮಾಣದಲ್ಲಿ ದೇಹಗಳ ಮೇಲೆ ಸುರಿದು ಸುಟ್ಟುಹಾಕಲಾಯಿತು.
* ಎಲ್ಲ ಸಾಕ್ಷ್ಯಗಳು ನಾಶವಾಗುವಂತೆ ಹಲವಾರು ದೇಹಗಳನ್ನು ಹತ್ತಿರದ ಕುನ್ಹಾರ್ ನದಿಯಲ್ಲಿ ಎಸೆಯಲಾಯಿತು.
* ಈ ದಾಳಿಯಲ್ಲಿ ಸತ್ತ ಬಹುತೇಕರ ದೇಹಗಳು ಜೈಷ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ್ದು.
* ಐಎಎಫ್ ದಾಳಿಯಲ್ಲಿ ಬದುಕುಳಿದವರನ್ನು ವಾಜಿರಿಸ್ತಾನ್-ಅಫ್ಘಾನಿಸ್ತಾನದ ಗಡಿಗೆ ಕಳುಹಿಸಲಾಗಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications