ಡಬ್ಬಿಂಗ್ ತಡೆಯಲು ಯತ್ನಿಸುವವರು ಶಿಕ್ಷಾರ್ಹರು : ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪೊಂದನ್ನು ನೀಡಿದ್ದು, ಡಬ್ ಮಾಡಲ್ಪಟ್ಟ ಚಲನಚಿತ್ರಗಳನ್ನು ಅಥವಾ ಟಿವಿ ಧಾರಾವಾಹಿಗಳ ಪ್ರದರ್ಶನವನ್ನು ತಡೆಯಲು ಯತ್ನಿಸುವವರು ಶಿಕ್ಷಾರ್ಹರು ಎಂದಿದೆ.
ನವದೆಹಲಿ, ಮಾರ್ಚ್ 17: ಡಬ್ಬಿಂಗ್ ಪರ ವಿರೋಧ ಚರ್ಚೆ ತಾರಕಕ್ಕೇರುತ್ತಿರುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಶುಕ್ರವಾರದಂದು ಮಹತ್ವದ ತೀರ್ಪೊಂದನ್ನು ನೀಡಿದೆ. ಡಬ್ ಮಾಡಲ್ಪಟ್ಟ ಚಲನಚಿತ್ರಗಳನ್ನು ಅಥವಾ ಟಿವಿ ಧಾರಾವಾಹಿಗಳ ಪ್ರದರ್ಶನವನ್ನು ತಡೆಯಲು ಯತ್ನಿಸುವರನ್ನು 2002ರ ಸ್ಪರ್ಧಾ ಕಾಯ್ದೆಯ ಉಲ್ಲಂಘನೆಗಾಗಿ ತಪ್ಪಿತಸ್ಥರೆಂಬುದಾಗಿ ಪರಿಗಣಿಸಲಾಗುವುದು ಹಾಗೂ ಶಿಕ್ಷಾರ್ಹ ಅಪರಾಧ ಎಂದಿದೆ.
ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳ ಪ್ರದರ್ಶನದ ವಿರುದ್ಧ ನಡೆಯುತ್ತಿರುವ ಚಳವಳಿಯ ಮೇಲೂ ಸುಪ್ರೀಂಕೋರ್ಟ್ನ ಈ ಆದೇಶವು, ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

ಹಿಂದಿಯಿಂದ ಬಂಗಾಳಿಗೆ ಡಬ್ ಮಾಡಲಾದ ಮಹಾಭಾರತ ಟಿವಿ ಧಾರಾವಾಹಿಯನ್ನು , ಪ.ಬಂಗಾಳದ ವಿವಿಧ ಟಿವಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದನ್ನು ಪ.ಬಂಗಾಳದ ಕಲಾವಿದರು ಹಾಗೂ ತಂತ್ರಜ್ಞರ ಸಂಘ ಹಾಗೂ ಈಶಾನ್ಯಭಾರತ ಚಲನಚಿತ್ರ ಸಂಘ (ಇಐಎಂಪಿಎ) ಬಲವಾಗಿ ವಿರೋಧಿಸಿ, ಕೋರ್ಟ್ ಮೇಟ್ಟಿಲೇರಿದ್ದರು.
ಡಬ್ಬಿಂಗ್ ಹಾವಳಿಯಿಂದ ಬಂಗಾಳಿಯಲ್ಲಿ ಧಾರಾವಾಹಿಗಳ ನಿರ್ಮಾಣಕ್ಕೆ ಹಿನ್ನಡೆಯುಂಟಾಗಲಿದೆಯೆಂದು ಅವು ಆತಂಕ ವ್ಯಕ್ತಪಡಿಸಿದ್ದರು.
ಬಂಗಾಳಿ ಭಾಷೆಗೆ ಡಬ್ ಮಾಡಲಾದ ಟಿವಿ ಧಾರಾವಾಹಿಗಳನ್ನು ಪ್ರಸಾರ ಮಾಡುವ ವಾಹಿನಿಗಳನ್ನು ಬಹಿಷ್ಕರಿಸುವುದಾಗಿ ಇಐಎಂಪಿಎ ಹಾಗೂ ಸಮನ್ವಯ ಸಮಿತಿಯು ಬೆದರಿಕೆ ಹಾಕಿತ್ತು. ಆದರೆ ಟಿವಿ ವಾಹಿನಿಯೊಂದರ ಮಾಲಕರು ಈ ಬಗ್ಗ್ಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ)ಕ್ಕೆ ದೂರು ನೀಡಿದಾಗ, ಅದು ಈ ಬೆದರಿಕೆಯು ಸ್ಪರ್ಧಾ ವಿರೋಧಿಯೆಂದು ಅಭಿಪ್ರಾಯಿಸಿತ್ತು.
ನ್ಯಾಯಾಧೀಕರಣವು ಡಬ್ಬಿಂಗ್ ವಿರೋಧದಿಂದ ಸ್ಪರ್ಧಾತ್ಮಕತೆಗೆ ಹಾನಿಯಿಲ್ಲವೆಂದು ವಾದಿಸಿತ್ತು. ಆನಂತರ ನ್ಯಾಯಾಧೀಕರಣದ ನಿರ್ಧಾರವನ್ನು ಪ್ರಶ್ನಿಸಿಸಿ ಸಿಸಿಐ ಸುಪ್ರೀಂಕೋರ್ಟ್ ಮೆಟ್ಟಲೇರಿತ್ತು.
ಡಬ್ಬಿಂಗ್ ಧಾರಾವಾಹಿಗಳನ್ನು ಪ್ರಸಾರ ಮಾಡಿರುವ ಟಿವಿ ವಾಹಿನಿಗಳ್ನು ಬಹಿಷ್ಕರಿಸುವ ಬೆದರಿಕೆಯು, ಅವು ತಮ್ಮ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವುದಕ್ಕೆ ತಡೆಯೊಡ್ಡುವ ಉದ್ದೇಶದಿಂದ ಕೂಡಿರುವುದಾಗಿ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಹಾಗೂ ಎ.ಎಂ. ಸಪ್ರೆ ಅವರಿದ್ದ ನ್ಯಾಯಪೀಠ ತಿಳಿಸಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications