ಮಧ್ಯಪ್ರದೇಶ : ಬಿಡುಗಡೆಗೆ ಮುನ್ನವೇ 'ಪದ್ಮಾವತಿ'ಗೆ ನಿಷೇಧ
ಮಧ್ಯಪ್ರದೇಶ, ನವೆಂಬರ್ 20 : ಪದ್ಮಾವತಿ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಸ್ವತಃ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುಡುಗಿದ್ದಾರೆ.
'ಪದ್ಮಾವತಿ' ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಘನತೆಗೆ ಧಕ್ಕೆ ಬರುವಂತಹಾ ಅಂಶಗಳು ಇವೆ ಹಾಗಾಗಿ ಆ ಚಿತ್ರವನ್ನು ಮಧ್ಯಪ್ರದೇಶದ ಪುಣ್ಯ ಭೂಮಿಯಲ್ಲಿ ಬಿಡುಗಡೆ ಆಗುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಈ ಮೂಲಕ ಪದ್ಮಾವತಿ ಚಿತ್ರ ಬಿಡುಗಡೆಗೆ ಮೊದಲ ಸರ್ಕಾರಿ ನಿಷೇಧ ಹೇರಿಕೆಯಾಗಿದೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿರುವ ಪದ್ಮಾವತಿ ಚಿತ್ರಕ್ಕೆ ಅಡ್ಡಿಗಳು ದಿನೇ ದಿನೇ ಹೆಚ್ಚಾಗುತ್ತಲೆ ಇವೆ. ರಜಪೂತ ಕರ್ನಿ ಸಂಘಟನೆಯು ಪದ್ಮಾವತಿ ಚಿತ್ರದ ತೀರ್ವ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಚಿತ್ರದ ಬಿಡುಗಡೆಯನ್ನು ತೀರ್ವವಾಗಿ ವಿರೋಧಿಸುತ್ತಿದೆ. ಚಿತ್ರ ಬಿಡುಗಡೆ ಬಗ್ಗೆ ದೇಶದಲ್ಲಿ ಪರ ವಿರೋಧ ಧ್ವನಿಗಳು ಸಮಾನವಾಗಿ ಕೇಳಿಬರುತ್ತಿವೆ.
ಇತ್ತೀಚೆಗಷ್ಟೆ ಹರಿಯಾಣದ ಬಿಜೆಪಿಯ ರಾಜ್ಯ ಮುಖಂಡನೊಬ್ಬ ಪದ್ಮಾವತಿ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಿರುವ ದೀಪಿಕಾ ಪಡುಕೋಣೆ ಅವರ ತಲೆ ಕಡಿದವರಿಗೆ 10 ಕೋಟಿ ನೀಡುವುದಾಗಿ ಹೇಳಿಕೆ ನೀಡಿದ್ದರು.
ವಿವಾದ ಹೆಚ್ಚಾಗುತ್ತಿರುವ ಕಾರಣ ಚಿತ್ರತಂಡವು ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿದೆ. ಆದರೆ ಈಗ ಮಧ್ಯಪ್ರದೇಶದ ಮುಖ್ಯಮಂತ್ರಿಗಳೆ ಚಿತ್ರದ ಬಿಡುಗಡೆಗೆ ಅನುಮತಿ ನೀಡುವುದಿಲ್ಲ ಎಂದಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ.
Etihaisik tathyon se khilwaad kar agar #Padmavati ji ke samman ke khilaaf film mein drishya dikhaye gaye hain, uss Film ka pradharshan Madhya Pradesh ki dharti par nahi hoga: CM Shivraj Singh Chouhan pic.twitter.com/vaVOxBmrUM
— ANI (@ANI) November 20, 2017
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕೂಡ ಪದ್ಮಾವತಿ ಚಿತ್ರದ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು. ಹಾಗಾಗಿ ಉತ್ತರ ಪ್ರದೇಶದಲ್ಲೂ ಚಿತ್ರ ಬಿಡುಗಡೆಗೆ ಅನುಮತಿ ನಿರಾಕರಿಸುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.
ಬಹುತೇಕ ಬಿ.ಜೆ.ಪಿ ಪಕ್ಷದ ಮುಖಂಡರು, ರಾಜಕಾರಣಿಗಳು ಪದ್ಮಾವತಿ ಚಿತ್ರದ ವಿರುದ್ಧ ಮಾತನಾಡುತ್ತಿದ್ದು, ಶಶಿ ತರೂರ್, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರ ಪದ್ಮಾವತಿ ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ. ಪದ್ಮಾವತಿ ಚಿತ್ರ ರಾಜಕೀಯ ಮೇಲಾಟಕ್ಕೆ ಧಾಳವಾಗಿಯೂ ಬಳಕೆಯಾಗುತ್ತಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications