ಭಾರತದಲ್ಲಿ ಪೋರ್ನ್ ವಿಡಿಯೋ ವೀಕ್ಷಣೆ ನಿಷೇಧ: ಸುಪ್ರೀಂ ಕೋರ್ಟ್ ಹೇಳಿದ್ದೇನು ?
ಭಾರತದಲ್ಲಿ ಪೋರ್ನ್ / ಅಶ್ಲೀಲ ವಿಡಿಯೋ ವೀಕ್ಷಣೆ ತಡೆಗೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆದಿದೆ. ದೇಶದಲ್ಲಿ ಪೋರ್ನ್ ವೀಕ್ಷಣೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಕಠಿಣ ನಿಯಮಗಳನ್ನು ರೂಪಿಸಲಾಗಿದೆ. ಇದೀಗ ನೇಪಾಳದ Gen Z Protests ಬಗ್ಗೆ ಉಲ್ಲೇಖಿಸಿ, ಪೋರ್ನ್ ವಿಡಿಯೋ ವೀಕ್ಷಣೆ ನಿಷೇಧದ ಬಗ್ಗೆ ಉಲ್ಲೇಖಿಸಲಾಗಿದೆ. ಅದೇನು ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿ ನೋಡೋಣ.
ಈಚೆಗೆ ದೇಶದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆಯನ್ನು ತಡೆಯಲು ರಾಷ್ಟ್ರೀಯ ನೀತಿ ಜಾರಿ ಮಾಡಬೇಕು ಎಂದು ಕೋರಿ ಸಲ್ಲಿಕೆ ಮಾಡಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ ನಡೆಸಿದ್ದು, ಈ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ನೇಪಾಳದಲ್ಲಿ ಈಚೆಗೆ ನಡೆದಿರುವ ಬೃಹತ್ Gen Z ಪ್ರತಿಭಟನೆಯನ್ನು ಉಲ್ಲೇಖ ಮಾಡಿದೆ. ನೇಪಾಳದಲ್ಲಿ ಈಚೆಗೆ ಏನಾಗಿತ್ತು ಎನ್ನುವುದು ಗೊತ್ತಿದೆ ಅಲ್ಲವೇ ಎಂದು ಪ್ರಶ್ನೆ ಮಾಡಿದೆ ಎಂದು ಹೇಳಲಾಗಿದೆ.

ಸುಪ್ರೀಂ ಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನೇಪಾಳದಲ್ಲಿ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲಾಗಿತ್ತು. ಅದರ ಪರಿಣಾಮ ಏನಾಯಿತು, ಮುಂದೆ ಏನೆಲ್ಲಾ ಪರಿಣಾಮ ಬೀರಿತು ಹಾಗೂ ಅದರ ಫಲಿತಾಂಶ ಏನಾಯಿತು ಎನ್ನುವುದನ್ನು ಎಲ್ಲರೂ ನೋಡಿದ್ದೀರಿ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ವಿಶೇಷವಾಗಿ ಅಪ್ರಾಪ್ತ ವಯಸ್ಕರಲ್ಲಿ ಅಶ್ಲೀಲ ಚಿತ್ರಗಳನ್ನು ನೋಡುವುದನ್ನು ತಡೆಯಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ನೋಡುವುದನ್ನು ನಿಷೇಧಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು. ಅಲ್ಲದೇ ಕ್ರಿಯಾ ಯೋಜನೆಯನ್ನು ರೂಪಿಸಲು ನಿರ್ದೇಶನಗಳನ್ನು ಪಿಐಎಲ್ ಮೂಲಕ ಕೊರಲಾಗಿತ್ತು.
ಕಂಪ್ಯೂಟರ್ಗಳ ಮೂಲಕ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರವು ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಅಧಿಕಾರವನ್ನು ಹೊಂದಿದೆ. ಆದರೆ, ಅಶ್ಲೀಲ ಬಳಕೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಪರಿಹರಿಸಲು ವಿಫಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ವಿಚಾರಣೆಯನ್ನು ಮುಂದೂಡಿದ ಪೀಠವು, ನಾಲ್ಕು ವಾರಗಳ ನಂತರ ವಿಷಯವನ್ನು ಪಟ್ಟಿ ಮಾಡುವಂತೆ ನಿರ್ದೇಶಿಸಿತು. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಅಧಿಕಾರಾವಧಿಯು ನವೆಂಬರ್ 23 ರಂದು ಮುಕ್ತಾಯವಾಗಲಿದೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ನಲ್ಲಿ ನಡೆಸಲಿದೆ.
ನೇಪಾಳದ ಉಲ್ಲೇಖವೇಕೆ ?
ಇನ್ನು ನೇಪಾಳದಲ್ಲಿ ಈಚೆಗೆ ಸೋಷಿಯಲ್ ಮೀಡಿಯಾ ಬ್ಯಾನ್ ವಿರೋಧಿಸಿ Gen Z ಸಮುದಾಯವು ಬೀದಿಗೆ ಇಳಿದಿತ್ತು. ಅಲ್ಲದೇ ಸೋಷಿಯಲ್ ಮೀಡಿಯಾ ಬ್ಯಾನ್ ಹಾಗೂ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತವನ್ನು ವಿರೋಧಿಸಿ ಯುವ ಸಮೂಹ ಬೀದಿಗೆ ಇಳಿದು ಪ್ರತಿಭಟನೆ ಮಾಡಿತ್ತು. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ನೇಪಾಳದಲ್ಲಿ ನಡೆದ ಜನರಲ್ ಝಡ್ ಪ್ರತಿಭಟನೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಆರ್ಥಿಕ ಸಂಕಷ್ಟ ಮತ್ತು ಯುವ ನಿರುದ್ಯೋಗವನ್ನು ಪರಿಹರಿಸುವಲ್ಲಿ ಸರ್ಕಾರದ ವೈಫಲ್ಯದ ಬಗ್ಗೆ ಆಕ್ರೋಶವನ್ನು ಹೊರ ಹಾಕಿತ್ತು. 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ವ್ಯಾಪಕವಾದ ಸರ್ಕಾರದ ನಿಷೇಧ ಹೇರಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications