ಬೆಂಗಳೂರು ರೈಲಿಗೆ ಬೆಂಕಿ: ಶಾಸಕರ ಸಂಬಂಧಿ ಸಾವು

ಬೆಂಗಳೂರಿನಿಂದ ಹೊರಟು ಮಹಾರಾಷ್ಟ್ರದ ನಾಂದೆಡ್ ಗೆ ತಲುಪಬೇಕಿದ್ದ Bangalore-Nanded express ರೈಲು ಅನಂತಪುರ ಬಳಿ ಶನಿವಾರ ಮುಂಜಾನೆ ಮೂರೂವರೆ ಗಂಟೆಯಲ್ಲಿ ದುರಂತಕ್ಕೀಡಾಗಿದೆ. ಮಾರ್ಗ ಮಧ್ಯೆಯ ಸಣ್ಣ ರೈಲು ನಿಲ್ದಾಣವಾದ ಕೊತ್ತಚೆರುವು ರೈಲ್ವೆ ನಿಲ್ದಾಣದಲ್ಲಿ D1 AC coach ಬೋಗಿ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ರೈಲು ಶುಕ್ರವಾರ ರಾತ್ರಿ 10.45ಕ್ಕೆ ಬೆಂಗಳೂರಿನಿಂದ ಹೊರಟಿತ್ತು.
ಪಕ್ಕದ ಬೋಗಿಗೂ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಪ್ರಮಾದ ಸಂಭವಿಸಿರಬಹುದು ಎನ್ನಲಾಗಿದೆ. ಹವಾನಿಯಂತ್ರಿತ ಎಸಿ ಕೋಚ್ ಇದಾಗಿದ್ದು, ಸುಮಾರು 57 ಮಂದಿ ಪ್ರಯಾಣಿಕರು ಬೋಗಿಯಲ್ಲಿದ್ದರು. ಸದ್ಯದ ಮಾಹಿತಿ ಪ್ರಕಾರ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ಮೊದಲೇ ಧನುರ್ಮಾಸದ ಚಳಿಗಾಲ. ನಿದ್ದೆ ತುಸು ಹೆಚ್ಚೇ. ಹಾಗಾಗಿ ನಿದ್ದೆಯಲ್ಲಿದ್ದಾಗಲೇ ಅಷ್ಟೂ ಮಂದಿ ಅಗ್ನಿಗಾಹುತಿಯಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿವೆ. ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಸಾವು ನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಪುಟ್ಟಪರ್ತಿ ಸಾಯಿಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕರ ಸಂಬಂಧಿ ಸಾವು: ಗುಲ್ಬರ್ಗಾದ ಸೇಡಂ ತಾಲೂಕಿನ ಅಡಕಿ ಜಿಪಂ ಕ್ಷೇತ್ರದ ಮಾಜಿ ಸದಸ್ಯ ಭೀಮಯ್ಯ ಅವರು ರೈಲು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಇವರು ರಾಯಚೂರು ಜಿಲ್ಲೆ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಸಮೀಪ ಸಂಬಂಧಿ.
ರೈಲ್ವೆ ಸಚಿವ ಖರ್ಗೆ ಪರಿಹಾರ ಘೋಷಣೆ: ಅಗ್ನಿ ದುರಂತಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸಾವಿಗೀಡಾದವರ ವಿವರ ಇನ್ನೂ ಲಭ್ಯವಾಗಿಲ್ಲ. ದುರಂತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಇದೊಂದು ದುರ್ದೈವ ಸಂಗತಿ ಎಂದಿದ್ದಾರೆ. ತಕ್ಷಣಕ್ಕೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಸಚಿವ ಖರ್ಗೆ ಅವರು ಗುಲ್ಬರ್ಗಾದಲ್ಲಿ ಘೋಷಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Helpline numbers:
ಬೆಂಗಳೂರು: 080-22354108, 22259271, 22156554
ಪುಟ್ಟಪರ್ತಿ: 08555-280125
Prasanti Nilayam station number 08555280125
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications