ಪದಚ್ಯುತ ಪ್ರಧಾನಿ ಮೇಲಿನ ಆರೋಪ ಸಾಬೀತು: ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಮಾನವ ಹಕ್ಕು ಉಲ್ಲಂಘಿಸಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಮೇಲಿನ ಆರೋಪಗಳು ಸಾಬೀತಾಗಿವೆ. ಮಾನವೀಯತೆ ವಿರುದ್ಧದ ಅವರ ನಿರ್ಧಾರಗಳು ಇಂದು ಅವರಿಗೆ ಮುಳ್ಳಾಗಿವೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT BD) ದೋಷಿ ಎಂದಿದೆ. ಶೇಖ್ ಹಸೀನಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಬಾಂಗ್ಲಾದಲ್ಲಿ ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ವ್ಯಾಪಕವಾಗಿ ದಂಗೆಗಳು ಭುಗಿಲೆದ್ದಿದ್ದವು. ಈ ದಂಗೆ ಮೇಲಿನ ದಮನ, ತಡೆಯಲು ನೇರವಾಗಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಸೂಚನೆ ನೀಡಿದ್ದರು. ಅವರ ಮುಂದಾಳತ್ವ, ಅರಿವು ಸೂಚನೆ ಮೇರೆಗೆ ಸಾಕಷ್ಟು ಹಿಂಸಾಚಾರ ನಡೆಯಿತು. ನೂರಾರು ಪ್ರಜೆಗಳು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಗಳನ್ನು ಹೊತ್ತಿದ್ದ ಹಸೀನಾಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT BD) ತ್ರಿಸದಸ್ಯ ಪೀಠವು ಈ ಪ್ರಕರಣವನ್ನು ತಿಂಗಳುಗಳ ಕಾಲ ವಿಚಾರಣೆ ನಡೆಸಿತು. ಅವರ ಅಪರಾಧ ಸಾಭೀತಾಗಿದ್ದು, ಗರಿಷ್ಠ ಶಿಕ್ಷೆಗೆ ಅರ್ಹರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ. ಶಿಕ್ಷೆ ಆದೇಶ ನೋಡಿದ ಜನರು ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶೇಖ್ ಹಸೀನಾ ಮಾತ್ರವಲ್ಲದೇ ಅವರ ಆಪ್ತರಾದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಹಾಗೂ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಪ್ರಕರಣದಲ್ಲಿ ಕೋರ್ಟ್ ದೋಷಿ ಎಂದು ಉಲ್ಲೇಖಿಸಿ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
2024ರ ಜುಲೈನಲ್ಲಿ ದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಸರ್ಕಾರದ ವಿರುದ್ಧದ ಪ್ರತಿಭಟನೆಗಳನ್ನು ಇದೇ ಶೇಖ್ ಹಸೀನಾ ಅವರು ಹತ್ತಿಕ್ಕಲು ಆದೇಶ ನೀಡಿದ್ದರು. ಭದ್ರತಾ ಪಡೆಗೆ ಅತೀಯಾದ ಬಲ ಪ್ರಯೋಗಕ್ಕೆ ಸೂಚನೆ ನೀಡಿದ್ದರಿಂದ ಹಿಂಸಾಚಾರಗಳೂ ನಡೆದವು. ಈ ವೇಳೆ ಅನೇಕ ವಿದ್ಯಾರ್ಥಿಗಳು, ನಾಗರಿಕರು ಪ್ರಾಣಬಿಟ್ಟರು. ಇದು ವಿಶ್ವವ್ಯಾಪಿ ಆಕ್ರೋಶಕ್ಕೆ ಕಾರಣವಾಗಿಯಿತು. ವಿಚಾರಣೆಯಲ್ಲೂ ಸಹ ಶೇಖ್ ಹಸೀನಾ ಅವರ ಪಾತ್ರ ಇರುವುದನ್ನು ತನಿಖಾಧಿಕಾರಿಗಳು ಬಯಲು ಮಾಡಿದ್ದಾರೆ. ಮಾನವೀಯತೆ ವಿರುದ್ಧ ಅವರು ಮಾಡಿದ ಅಪರಾಧ ಸಾಬೀತಾಗುದೆ. ವಿಚಾರಣೆ ಪೂರ್ಣಗೊಂಡಿದ್ದು, ಇದೀಗ ಶೇಖ್ ಹಸೀನಾರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications