ಗ್ರಾಹಕರೇ ಎಚ್ಚರ! ಮಾರ್ಚ್ ತಿಂಗಳಿನಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ
ಬೆಂಗಳೂರು, ಮಾರ್ಚ್ 2 : ಮಾರ್ಚ್ ತಿಂಗಳಿನಲ್ಲಿ ಸಾಲು ಸಾಲು ರಜೆಗಳಿದ್ದು, ಬ್ಯಾಂಕಿಂಗ್ ವ್ಯವಹಾರದಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆಯಿದೆ. ಈ ವರ್ಷದ ಫೆಬ್ರವರಿಯಲ್ಲಿ 29 ದಿನಗಳಿತ್ತು. 2 ಮತ್ತು 4ನೇ ಶನಿವಾರ, ಭಾನುವಾರ ಸೇರಿ ಬ್ಯಾಂಕ್ಗಳಿಗೆ ಹಲವು ರಜೆಗಳಿತ್ತು. ಕಳೆದ ತಿಂಗಳ ಮೊದಲ ದಿನವೇ ಬ್ಯಾಂಕ್ ಸಿಬ್ಬಂದಿ ಮುಷ್ಕರದಿಂದಾಗಿ ಬ್ಯಾಂಕ್ ವ್ಯವಹಾರ ಬಂದ್ ಆಗಿತ್ತು. ಒಟ್ಟಾರೆ, ಕಳೆದ ತಿಂಗಳು ಬ್ಯಾಂಕ್ ಸಿಬ್ಬಂದಿಗಳಿಗೆ ಒಟ್ಟು 10 ರಜೆಗಳು ಸಿಕ್ಕಿದಂತೆ ಆಗುತ್ತದೆ. 4 ಭಾನುವಾರ, 2 ಮತ್ತು 4ನೇ ಶನಿವಾರ ಎಂದಿನಂತೆ ಬ್ಯಾಂಕ್ ರಜೆ ಸಿಕ್ಕಿತ್ತು.
Recommended Video
ಬ್ಯಾಂಕ್ ಸಿಬ್ಬಂದಿಗಳಿಗೆ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ರಜಾದಿನವಿರಲಿದೆ. ಇದಲ್ಲದೆ, ಯಾವೆಲ್ಲ ದಿನಗಳಲ್ಲಿ ರಜಾ ಸಿಗಬಹುದು ಎಂಬುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಪ್ರಕಟಿಸಿದೆ. ಸಾರ್ವತ್ರಿಕ ರಜಾ ದಿನ, ನಿರ್ಬಂಧಿತ ರಜಾ ದಿನಗಳನ್ನು ಇದರಲ್ಲಿ ನೀಡಲಾಗಿದೆ. ಕೆಲವು ರಜಾ ದಿನಗಳು ಕೆಲವು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಲಿದೆ.
ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ ಎಂದು ಆರ್ ಬಿಐ ಪ್ರಕಟಿಸಿದೆ.

ಮಾರ್ಚ್ 8 ರಂದು ಭಾನುವಾರ ರಜೆ ಇದೆ. ಮಾರ್ಚ್ 10 ರಂದು ಹೋಳಿಹುಣ್ಣಿಮೆ ಪ್ರಯುಕ್ತ ರಜೆ ಇರುತ್ತದೆ. ಮಾರ್ಚ್ 11 ರಿಂದ 13 ರವರೆಗೆ 3 ದಿನಗಳ ಮುಷ್ಕರ ನಡೆದರೆ, ಮಾರ್ಚ್ 14ರಂದು ಎರಡನೇ ಶನಿವಾರ, ಮಾರ್ಚ್ 15 ಭಾನುವಾರ ರಜೆ ಸಿಗಲಿದೆ. ಸರಣಿಯಾಗಿ 6 ದಿನಗಳ ಕಾಲ ಬ್ಯಾಂಕ್ ಗಳ ಬಾಗಿಲು ಬಂದ್ ಮಾಡಿದರೆ, ಗ್ರಾಹಕರಿಗೆ ಸಮಸ್ಯೆ ಎದುರಾಗಲಿದೆ. ಹೀಗಾಗಿ, ಬಹುತೇಕ ಮಾರ್ಚ್ 2ನೇ ವಾರ ಬ್ಯಾಂಕುಗಳು ಕಾರ್ಯನಿರ್ವಹಿಸುವ ಸಾಧ್ಯತೆ ಕಡಿಮೆ. ಆದರೆ, ಮೂರು ದಿನಗಳ ಮುಷ್ಕರ ಹಿಂಪಡೆಯುವ ಸಾಧ್ಯತೆ ಹೆಚ್ಚಿರುವುದರಿಂಡ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ.
ಮಾರ್ಚ್ ತಿಂಗಳಿನಲ್ಲಿರುವ ರಜಾದಿನಗಳು:
ಮಾರ್ಚ್ 1: ಭಾನುವಾರ.
ಮಾರ್ಚ್ 5: ಬುಧವಾರ-ಪಂಚಾಯತಿ ರಾಜ್ ದಿನ(ಒಡಿಶಾ)
ಮಾರ್ಚ್ 6: ಶುಕ್ರವಾರ- ಮಿಜೋರಾಂನಲ್ಲಿ ಛಾಪ್ಚುರ್ ಕುತ್ ಹಬ್ಬ
ಮಾರ್ಚ್ 8: ಭಾನುವಾರ
ಮಾರ್ಚ್ 9: ಸೋಮವಾರ-ಉತ್ತರಪ್ರದೇಶದಲ್ಲಿ ಹಜರತ್ ಅಲಿ ವಾರ್ಷಿಕೋತ್ಸವ
ಮಾರ್ಚ್ 10: ಹೋಳಿ
ಮಾರ್ಚ್ 14: ಎರಡನೇ ಶನಿವಾರ
ಮಾರ್ಚ್ 15: ಭಾನುವಾರ
ಮಾರ್ಚ್ 22: ಭಾನುವಾರ
ಮಾರ್ಚ್ 23: ಸೋಮವಾರ-ಹರ್ಯಾಣದಲ್ಲಿ ಶಹೀದ್ ಭಗತ್ ಸಿಂಗ್ ದಿನ
ಮಾರ್ಚ್ 25: ಬುಧವಾರ- ಕರ್ನಾಟಕ, ಆಂಧ್ರಪ್ರದೇಶದಲ್ಲಿ ಯುಗಾದಿ, ಮಹಾರಾಷ್ಟ್ರದಲ್ಲಿ ಗುಡಿ ಪಡ್ವಾ, ಮಣಿಪುರದಲ್ಲಿ ಸಜಿಬು ನೊಗ್ಮಾಪನ್ಬಾ, ಜಮ್ಮು ಮತ್ತು ಕಾಶ್ಮೀರದಲ್ಲಿ ನವರಾತ್ರಾ.
ಮಾರ್ಚ್ 26: ಗುರುವಾರ-ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ್ ರಾಜ್ಯಗಳಲ್ಲಿ ಛೇತಿ ಚಾಂದ್ ವಾರ್ಷಿಕೋತ್ಸವ.
ಮಾರ್ಚ್ 27: ಶುಕ್ರವಾರ- ಜಾರ್ಖಂಡ್ ರಾಜ್ಯದಲ್ಲಿ ಸಾರ್ಹುಲ್ ಹಬ್ಬ.
ಮಾರ್ಚ್ 28: ನಾಲ್ಕನೇ ಶನಿವಾರ.
ಮಾರ್ಚ್ 29: ಭಾನುವಾರ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications