₹12,000 ಸಾಲ ಕೊಡಿಸುವ ನೆಪದಲ್ಲಿ ₹39,000 ಮೌಲ್ಯದ ಕೋಳಿ ಮಾಂಸ ತಿಂದು ತೇಗಿದ ಬ್ಯಾಂಕ್ ಮ್ಯಾನೇಜರ್; ಮುಂದೇನಾಯ್ತು?
ಛತ್ತೀಸ್ಗಢ, ಡಿಸೆಂಬರ್, 11: ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅದರಲ್ಲೂ ಅಧಿಕಾರಿಗಳೇ ಜನರ ಬಳಿ ಇಲ್ಲಸಲ್ಲದ ಭರವಸೆಗಳನ್ನು ನೀಡಿ ಹಣ ಪೀಕಿರುವ ಘಟನೆಗಳು ನಡೆದಿವೆ. ಆದರೆ ಇದೀಗ ವಿಚಿತ್ರ ಎಂಬಂತೆ ಬ್ಯಾಂಕ್ ಮ್ಯಾನೇಜರ್ ಸಾಲ ಕೊಡಿಸುವುದಾಗಿ ದೊಡ್ಡ ವಂಚನೆ ಮಾಡಿರುವ ಘಟನೆಯೊಂದು ಬೆಳಕಿದೆ ಬಂದಿದೆ.
ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಬಿಡುತ್ತವೆ. ಹಾಗೆಯೇ ಬ್ಯಾಂಕ್ ಮ್ಯಾನೇಜರ್ವೊಬ್ಬ ಸಾಲ ಕೊಡಿಸುವುಸಾಗಿ ನಂಬಿಸಿ ಸುಮಾರು 39,000 ರೂಪಾಯಿ ಮೌಲ್ಯದ ಕೋಳಿ ಮಾಂಸ ಹೊಟ್ಟಿಗಿಳಿಸಿ ಮೋಸ ಮಾಡಿದ ಘಟನೆ ನಡೆದಿದೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಹಾಗಾದರೆ ಈ ಘಟನೆ ವಿವರವನ್ನು ಇಲ್ಲಿ ತಿಳಿಯಿರಿ.
ಕೋಳಿ ಫಾರಂ ತೆರೆಯಲು ಏನುಲ್ಲ ಅಂದರೂ 12,00,000 ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಮ್ಯಾನೇಜರ್ ಮೋಸ ಮಾಡಿರುವ ಘಟನೆ ಛತ್ತೀಸ್ಗಢ ರಾಜ್ಯದ ಬಿಲಾಸ್ಪುರ ಜಿಲ್ಲೆಯ ಮಸ್ತೂರಿ ಪಟ್ಟಣದಲ್ಲಿ ನಡೆದಿದೆ. ಸಾಲ ಕೊಡಿಸುವ ಭರವಸೆ ನೀಡಿದ್ದ ಮ್ಯಾನೇಜರ್ಗೆರೆ ಪ್ರತಿದಿನ ಕೋಳಿ ಮಾಂಸ ತಂದುಕೊಡುತ್ತಿದ್ದ ರೈತನಿಗೆ ಇದೀಗ ಮೋಸದ ಬಗ್ಗೆ ತಿಳಿದಿದ್ದು, ಮ್ಯಾನೇಜರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಸ್ತೂರಿ ಪಟ್ಟಣದ ರೈತ ರೂಪಚಂದ್ ಮನ್ಹರ್ ಎಂಬಾತ ಕೋಳಿ ಫಾರಂ ಹೊಂದಿದ್ದಾನೆ. ತನ್ನ ವ್ಯವಹಾರವನ್ನು ಮತ್ತಷ್ಟು ವಿಸ್ತರಣೆ ಮಾಡಸಲು ಬಯಸಿದ ರೈತ ಸ್ಥಳೀಯ ಎಸ್ಬಿಐ ಶಾಖೆಯ ವ್ಯವಸ್ಥಾಪಕರನ್ನು ಸಂಪರ್ಕಿಸಿ 12 ಲಕ್ಷ ರೂಪಾಯಿ ಸಾಲ ಕೇಳಿದ್ದಾನೆ. ಆಗ ಸಾಲ ನೀಡುವುದಾಗಿ ಭರವಸೆ ನೀಡಿದ್ದ ಮ್ಯಾನೇಜರ್ ಪ್ರತೀ ದಿನ ಬ್ಯಾಂಕ್ಗೆ ಕೋಳಿ ಮಾಂಸ ತಂದುಕೊಡುವಂತೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇನ್ನು ರೈತ ಸಾಲ ಸಿಗುತ್ತದೆಂಬ ನಿರೀಕ್ಷೆಯಲ್ಲಿ ಪ್ರತಿದಿನ ಬ್ಯಾಂಕ್ ಮ್ಯಾನೇಜರ್ಗೆ ಕೋಳಿ ಮಾಂಸ ತಂದುಕೊಡುತ್ತಿದ್ದ. ಜೊತೆಗೆ ರೈತ ಸಾಲಕ್ಕೆ 10% ಕಮಿಷನ್ ಕೂಡ ನೀಡಿದ್ದರು. ಈ ರೈತ ಸಾಲ ಪಡೆಯಲು ಪ್ರತಿ ಶನಿವಾರ ಬೇರೆ ಕಡೆಯಿಂದ ಕೋಳಿ ಖರೀದಿಸುತ್ತಿದ್ದರು. ಹೀಗೆ ಮ್ಯಾನೇಜರ್ 39,000 ರೂಪಾಯಿ ಮೌಲ್ಯದ ಕೋಳಿ ಮಾಂಸ ತಿಂದ ಘಟನೆ ನಡೆದಿದೆ.
ಕೊನೆಗೂ ಬ್ಯಾಂಕ್ ಮ್ಯಾನೇಜರ್ ಸಾಲ ಕೊಡದೆ, ಮೋಸ ಮಾಡಿರುವುದನ್ನ ತಿಳಿಸದ ರೈತ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಎಸ್ಬಿಐ ಶಾಖೆ ಎದುರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ಆದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
-
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications