Narayanan Vaghul Death: ಬ್ಯಾಂಕರ್ ನಾರಾಯಣನ್ ವಘುಲ್ ನಿಧನ
Narayanan Vaghul Death: ಭಾರತದಲ್ಲಿ ದೈತ್ಯ ಐಸಿಐಸಿಐ ಅನ್ನು ಸ್ಥಾಪನೆ ಮಾಡಿದ ಬ್ಯಾಂಕರ್ ನಾರಾಯಣನ್ ವಘುಲ್ (88) ಅವರು ಇಂದು (ಮೇ 18) ಚೆನ್ನೈನಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕಳೆದ ಎರಡು ದಿನಗಳಿಂದ ವೆಂಟಿಲೇಟರ್ನಲ್ಲಿದ್ದರು. ಬಿದ್ದು ಪ್ರಜ್ಞಾಹೀನರಾಗಿದ್ದ ನಂತರ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ನಾರಾಯಣನ್ ವಘುಲ್ ಅವರು ಪತ್ನಿ ಪದ್ಮಾ ವಘುಲ್, ಮಕ್ಕಳಾದ ಮೋಹನ್ ಮತ್ತು ಸುಧಾ ಹಾಗೂ ಮೊಮ್ಮಕ್ಕಳಾದ ಸಂಜಯ್, ಕಾವ್ಯ, ಅನುವ್ ಮತ್ತು ಸಂತೋಷ್ ಅವರನ್ನು ಅಗಲಿದ್ದಾರೆ. ಇನ್ನು ಇವರಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಅಲ್ಲದೆ, ಐಸಿಐಸಿಐ ಬ್ಯಾಂಕ್ ನಿರ್ಮಿಸಲು ಮುಖ್ಯ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.
ನಾರಾಯಣನ್ ವಘುಲ್ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1936ರಲ್ಲಿ ದಕ್ಷಿಣ ಭಾರತದ ಗ್ರಾಮೀಣ ಪ್ರದೇಶವೊಂದರಲ್ಲಿ ಜನಿಸಿದರು. ಅವರ ಕುಟುಂಬವು ಚೆನ್ನೈಗೆ ಸ್ಥಳಾಂತರಗೊಂಡಿತು, ಅಲ್ಲಿ ಅವರು ಪ್ರಸಿದ್ಧ ಲೊಯೊಲಾ ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದು, ವೃತ್ತಿಯಲ್ಲಿ ವಘುಲ್ ಅವರ ಮೊದಲ ಆಯ್ಕೆ ಬ್ಯಾಂಕಿಂಗ್ ಆಗಿರಲಿಲ್ಲ. ಅವರು ಆರಂಭದಲ್ಲಿ ನಾಗರಿಕ ಸೇವೆಗಳಿಗೆ ಸೇರಲು ಬಯಸಿದ್ದರು.
ಆದರೂ, ಅವರು ಆಗ ಹೊಸದಾಗಿ ಸ್ಥಾಪನೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರವೇಶ ಪಡೆಯಲು ಪರೀಕ್ಷೆಯಲ್ಲಿ ತೇರ್ಗಡೆಯಾದರು. ನಂತರ ಅವರ ತಂದೆ ಎಸ್ಬಿಐ ಕೆಲಸಕ್ಕೆ ಸೇರುವಂತೆ ಒತ್ತಾಯಿಸಿದ್ದು, ಅವರು 1955ರಲ್ಲಿ ಬ್ಯಾಂಕ್ಗೆ ಕೆಲಸಕ್ಕೆ ಸೇರಿದರು. ನಂತರ ತೀವ್ರ ಒತ್ತಡದಿಂದಾಗಿ ಅವರು ಎಸ್ಬಿಐ ತೊರೆದರು ಎನ್ನಲಾಗಿದೆ.
ಎಸ್ಬಿಐ ನಂತರ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್ಮೆಂಟ್ಗೆ ಸೇರಿ ಅದರ ನಿರ್ದೇಶಕರಾದರು. 39ನೇ ವಯಸ್ಸಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯನ್ನು ನೀಡಲಾಯಿತು. ಆಗ ಅವರು ವೃತ್ತಿಯಲ್ಲಿ ಸಾಧನೆ ಮಾಡುತ್ತಾ ಎತ್ತರಕ್ಕೆ ಬೆಳೆದರು.
1981ರಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದರು. 44ನೇ ವಯಸ್ಸಿನಲ್ಲಿ ಅವರು ಸಾರ್ವಜನಿಕ ವಲಯದ ಬ್ಯಾಂಕ್ನ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದರು.
1981 ಮತ್ತು 1985ರ ನಡುವೆ ಅವರು ಡೆವಲಪ್ಮೆಂಟ್ ಬ್ಯಾಂಕ್ ICICI Ltdನ ಮುಖ್ಯಸ್ಥರಾಗಿದ್ದರು. ಅವರ ನೇತೃತ್ವದಲ್ಲಿ ಐಸಿಐಸಿಐ ಬ್ಯಾಂಕ್ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾ ಹೋಯಿತು. ನಂತರ ಭಾರತದ ಎರಡನೇ ಅತಿದೊಡ್ಡ ಖಾಸಗಿ ವಲಯದ ವಾಣಿಜ್ಯ ಬ್ಯಾಂಕ್ ಎಂಬ ಹೆಗ್ಗಳಿಕೆಯನ್ನು ಪಡೆಯಿತು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ











Click it and Unblock the Notifications