Narayanan Vaghul Death: ಬ್ಯಾಂಕರ್ ನಾರಾಯಣನ್ ವಘುಲ್ ನಿಧನ
Narayanan Vaghul Death: ಭಾರತದಲ್ಲಿ ದೈತ್ಯ ಐಸಿಐಸಿಐ ಅನ್ನು ಸ್ಥಾಪನೆ ಮಾಡಿದ ಬ್ಯಾಂಕರ್ ನಾರಾಯಣನ್ ವಘುಲ್ (88) ಅವರು ಇಂದು (ಮೇ 18) ಚೆನ್ನೈನಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕಳೆದ ಎರಡು ದಿನಗಳಿಂದ ವೆಂಟಿಲೇಟರ್ನಲ್ಲಿದ್ದರು. ಬಿದ್ದು ಪ್ರಜ್ಞಾಹೀನರಾಗಿದ್ದ ನಂತರ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ನಾರಾಯಣನ್ ವಘುಲ್ ಅವರು ಪತ್ನಿ ಪದ್ಮಾ ವಘುಲ್, ಮಕ್ಕಳಾದ ಮೋಹನ್ ಮತ್ತು ಸುಧಾ ಹಾಗೂ ಮೊಮ್ಮಕ್ಕಳಾದ ಸಂಜಯ್, ಕಾವ್ಯ, ಅನುವ್ ಮತ್ತು ಸಂತೋಷ್ ಅವರನ್ನು ಅಗಲಿದ್ದಾರೆ. ಇನ್ನು ಇವರಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಅಲ್ಲದೆ, ಐಸಿಐಸಿಐ ಬ್ಯಾಂಕ್ ನಿರ್ಮಿಸಲು ಮುಖ್ಯ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.
ನಾರಾಯಣನ್ ವಘುಲ್ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1936ರಲ್ಲಿ ದಕ್ಷಿಣ ಭಾರತದ ಗ್ರಾಮೀಣ ಪ್ರದೇಶವೊಂದರಲ್ಲಿ ಜನಿಸಿದರು. ಅವರ ಕುಟುಂಬವು ಚೆನ್ನೈಗೆ ಸ್ಥಳಾಂತರಗೊಂಡಿತು, ಅಲ್ಲಿ ಅವರು ಪ್ರಸಿದ್ಧ ಲೊಯೊಲಾ ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದು, ವೃತ್ತಿಯಲ್ಲಿ ವಘುಲ್ ಅವರ ಮೊದಲ ಆಯ್ಕೆ ಬ್ಯಾಂಕಿಂಗ್ ಆಗಿರಲಿಲ್ಲ. ಅವರು ಆರಂಭದಲ್ಲಿ ನಾಗರಿಕ ಸೇವೆಗಳಿಗೆ ಸೇರಲು ಬಯಸಿದ್ದರು.
ಆದರೂ, ಅವರು ಆಗ ಹೊಸದಾಗಿ ಸ್ಥಾಪನೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರವೇಶ ಪಡೆಯಲು ಪರೀಕ್ಷೆಯಲ್ಲಿ ತೇರ್ಗಡೆಯಾದರು. ನಂತರ ಅವರ ತಂದೆ ಎಸ್ಬಿಐ ಕೆಲಸಕ್ಕೆ ಸೇರುವಂತೆ ಒತ್ತಾಯಿಸಿದ್ದು, ಅವರು 1955ರಲ್ಲಿ ಬ್ಯಾಂಕ್ಗೆ ಕೆಲಸಕ್ಕೆ ಸೇರಿದರು. ನಂತರ ತೀವ್ರ ಒತ್ತಡದಿಂದಾಗಿ ಅವರು ಎಸ್ಬಿಐ ತೊರೆದರು ಎನ್ನಲಾಗಿದೆ.
ಎಸ್ಬಿಐ ನಂತರ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್ಮೆಂಟ್ಗೆ ಸೇರಿ ಅದರ ನಿರ್ದೇಶಕರಾದರು. 39ನೇ ವಯಸ್ಸಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯನ್ನು ನೀಡಲಾಯಿತು. ಆಗ ಅವರು ವೃತ್ತಿಯಲ್ಲಿ ಸಾಧನೆ ಮಾಡುತ್ತಾ ಎತ್ತರಕ್ಕೆ ಬೆಳೆದರು.
1981ರಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದರು. 44ನೇ ವಯಸ್ಸಿನಲ್ಲಿ ಅವರು ಸಾರ್ವಜನಿಕ ವಲಯದ ಬ್ಯಾಂಕ್ನ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದರು.
1981 ಮತ್ತು 1985ರ ನಡುವೆ ಅವರು ಡೆವಲಪ್ಮೆಂಟ್ ಬ್ಯಾಂಕ್ ICICI Ltdನ ಮುಖ್ಯಸ್ಥರಾಗಿದ್ದರು. ಅವರ ನೇತೃತ್ವದಲ್ಲಿ ಐಸಿಐಸಿಐ ಬ್ಯಾಂಕ್ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾ ಹೋಯಿತು. ನಂತರ ಭಾರತದ ಎರಡನೇ ಅತಿದೊಡ್ಡ ಖಾಸಗಿ ವಲಯದ ವಾಣಿಜ್ಯ ಬ್ಯಾಂಕ್ ಎಂಬ ಹೆಗ್ಗಳಿಕೆಯನ್ನು ಪಡೆಯಿತು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications