ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮೇ 12: ಕೇಂದ್ರ ಸರ್ಕಾರದ ಹಲವು ನಿರ್ಧಾರಗಳಿಂದ ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ ನಷ್ಟವಾಗುತ್ತಿದೆ. ಸರ್ಕಾರದ ನೀತಿಗಳನ್ನು ಖಂಡಿಸಿ ಜುಲೈ 29ರಂದು ಸುಮಾರು 10 ಲಕ್ಷ ಮಂದಿ ಬ್ಯಾಂಕ್ ನೌಕರರು ಮುಷ್ಕರ ಹೂಡಲು ನಿರ್ಧರಿಸಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.
ಎಐಬಿಎಇ, ಎಐಬಿಒಸಿ, ಎನ್ಸಿಬಿಇ, ಎಐಬಿಒಎ, ಬಿಇಎಫ್ಐ, ಐಎನ್ಬಿಇಎಫ್, ಐಎನ್ಬಿಒಸಿ, ಎನ್ಒಬಿಡಬ್ಲ್ಯೂ, ಎನ್ಒಬಿಒ ಸಂಘಟನೆಗಳು ಯುಎಫ್ಬಿಯು ಅಂಗ ಸಂಸ್ಥೆಗಳ ಪ್ರತಿನಿಧಿಗಳು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ಸಭೆಯಲ್ಲಿ ಭಾಗವಹಿಸಿ ಈ ನಿರ್ಧಾರ ಕೈಗೊಂಡಿವೆ. [ಪಾಸ್ ಪೋರ್ಟ್ ಕಳೆದುಕೊಂಡ ಮಲ್ಯ ಮುಂದಿರುವ ಆಯ್ಕೆಗಳು?]

ಪ್ರಾದೇಶಿಕ ಬ್ಯಾಂಕುಗಳಲ್ಲಿ ಹೆಚ್ಚು ಖಾಸಗಿ ಬಂಡವಾಳಕ್ಕೆ ಅನುಮತಿ ನೀಡುವ ಮೂಲಕ ಬ್ಯಾಂಕಿಂಗ್ ನಲ್ಲಿ ಅಸಮತೋಲನ ಉಂಟಾಗುತ್ತಿದೆ.ವಸೂಲಿಯಾಗದ ಸಾಲದ ಪ್ರಮಾಣ 10 ಲಕ್ಷ ಕೋಟಿ ರೂಪಾಯಿಗಳನ್ನು ಮೀರಿದೆ. ಸುಸ್ತಿದಾರರ ವಿರುದ್ಧ ಕ್ರಮ ಇಲ್ಲ ಎಂದು ವೆಂಕಟಾಚಲಂ ಹೇಳಿದರು.
ಉದ್ದೇಶಪೂರ್ವಕ ಸುಸ್ತಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದರೂ ಯಾವುದೇ ಕ್ರಮ ಇದುವರೆವಿಗೂ ಜರುಗಿಸಲು ಆಗಿಲ್ಲ. ಉದ್ಯಮಿ ವಿಜಯ್ ಮಲ್ಯ ಸೇರಿದಂತೆ ದೇಶದಲ್ಲಿ ಸರಿ ಸುಮಾರು 7,000 ಉದ್ದೇಶ ಪೂರ್ವಕ ಸುಸ್ತಿದಾರರಿದ್ದು ಒಟ್ಟು 60,000 ಕೋಟಿ ರು ಗೂ ಅಧಿಕ ಮೊತ್ತ ಬ್ಯಾಂಕುಗಳಿಗೆ ಸೇರಬೇಕಿದೆ ಎಂದು ವಿವರಿಸಿದರು (ಐಎಎನ್ಎಸ್)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications