ದಿನಕರನ್ ಶಾಸಕರು ತಂಗಿದ್ದ ಕೂರ್ಗ್ ರೆಸಾರ್ಟ್ ಮೇಲೆ ಪೊಲೀಸ್ ದಾಳಿ
ಕೊಡಗು, ಸೆಪ್ಟೆಂಬರ್ 12: ಎಐಎಡಿಎಂಕೆಯ ಉಪ ಮಹಾಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿತ ಶಾಸಕರು ತಂಗಿದ್ದ ಪ್ಯಾಡಿಂಗ್ಟನ್ ರೆಸಾರ್ಟ್ ಮೇಲೆ ತಮಿಳುನಾಡು ಪೊಲೀಸರು ಸೋಮವಾರ ಮಧ್ಯಾಹ್ನ ರೈಡ್ ಮಾಡಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಜನರು ರೆಸಾರ್ಟ್ ಅನ್ನು ಸುತ್ತುವರಿದಿದ್ದು, ಶಾಸಕರನ್ನು ಬಂಧಿಸಲು ಮುಂದಾಗಿರುವುದಾಗಿ ಸ್ಥಳೀಯ ಮೂಲಗಳು ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಸೋಮವಾರ ನಡೆದ ಎಐಎಡಿಎಂಕೆ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಲಾಯಿತು. ಇದರ ಬೆನ್ನಲ್ಲೇ ಕೊಡಗಿನಲ್ಲಿರುವ ರೆಸಾರ್ಟ್ ನ ಮೇಲೆ ಪೊಲೀಸ್ ದಾಳಿಯಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
Tamil Nadu policemen reach Paddington Resort in Karnataka's Kodagu, where TTV Dhinakaran faction MLAs are staying pic.twitter.com/te3d3xFRI1
— ANI (@ANI) September 12, 2017
ಕೆಲ ದಿನಗಳ ಹಿಂದೆ, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಸರ್ಕಾರವನ್ನು ಉರುಳಿಸುವುದಾಗಿ ಪಣ ತೊಟ್ಟಿದ್ದ ಟಿಟಿವಿ ದಿನಕರನ್ (ಶಶಿಕಲಾ ಸಂಬಂಧಿ) ಅವರನ್ನು ಬೆಂಬಲಿಸುವ ಸುಮಾರು 17 ಶಾಸಕರು, ರೆಸಾರ್ಟ್ ರಾಜಕೀಯ ಆರಂಭಿಸಿದ್ದರು.

ಶಶಿಕಲಾ ವಿರೋಧಿಯಾಗಿರುವ ಪನ್ನೀರ್ ಸೆಲ್ವಂ ಅವರೊಂದಿಗೆ ಪಳನಿಸ್ವಾಮಿ ಕೈಜೋಡಿಸಿದ್ದರಿಂದಾಗಿ ಪಕ್ಷಕ್ಕೆ ಅಪಚಾರವಾಗಿದ್ದು, ಪಳನಿಸ್ವಾಮಿಗೆ ತಾವು ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಈ ಶಾಸಕರು ತಮಿಳುನಾಡು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
ಹೀಗೆ ಆರಂಭಗೊಂಡಿದ್ದ ರೆಸಾರ್ಟ್ ರಾಜಕೀಯ, ಆರಂಭದಲ್ಲಿ ಅವರು ಮಹಾಬಲಿಪುರಂ ನ ರೆಸಾರ್ಟ್ ನಲ್ಲಿ ಮುಂದುವರಿದಿತ್ತು. ಇತ್ತೀಚೆಗೆ, ಅದು ಕೊಡಗಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ ಗೆ ಶಿಫ್ಟ್ ಆಗಿತ್ತೆಂದು ಹೇಳಲಾಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications