ದಿನಕರನ್ ಶಾಸಕರು ತಂಗಿದ್ದ ಕೂರ್ಗ್ ರೆಸಾರ್ಟ್ ಮೇಲೆ ಪೊಲೀಸ್ ದಾಳಿ
ಕೊಡಗು, ಸೆಪ್ಟೆಂಬರ್ 12: ಎಐಎಡಿಎಂಕೆಯ ಉಪ ಮಹಾಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿತ ಶಾಸಕರು ತಂಗಿದ್ದ ಪ್ಯಾಡಿಂಗ್ಟನ್ ರೆಸಾರ್ಟ್ ಮೇಲೆ ತಮಿಳುನಾಡು ಪೊಲೀಸರು ಸೋಮವಾರ ಮಧ್ಯಾಹ್ನ ರೈಡ್ ಮಾಡಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಜನರು ರೆಸಾರ್ಟ್ ಅನ್ನು ಸುತ್ತುವರಿದಿದ್ದು, ಶಾಸಕರನ್ನು ಬಂಧಿಸಲು ಮುಂದಾಗಿರುವುದಾಗಿ ಸ್ಥಳೀಯ ಮೂಲಗಳು ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಸೋಮವಾರ ನಡೆದ ಎಐಎಡಿಎಂಕೆ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಲಾಯಿತು. ಇದರ ಬೆನ್ನಲ್ಲೇ ಕೊಡಗಿನಲ್ಲಿರುವ ರೆಸಾರ್ಟ್ ನ ಮೇಲೆ ಪೊಲೀಸ್ ದಾಳಿಯಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
Tamil Nadu policemen reach Paddington Resort in Karnataka's Kodagu, where TTV Dhinakaran faction MLAs are staying pic.twitter.com/te3d3xFRI1
— ANI (@ANI) September 12, 2017
ಕೆಲ ದಿನಗಳ ಹಿಂದೆ, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಸರ್ಕಾರವನ್ನು ಉರುಳಿಸುವುದಾಗಿ ಪಣ ತೊಟ್ಟಿದ್ದ ಟಿಟಿವಿ ದಿನಕರನ್ (ಶಶಿಕಲಾ ಸಂಬಂಧಿ) ಅವರನ್ನು ಬೆಂಬಲಿಸುವ ಸುಮಾರು 17 ಶಾಸಕರು, ರೆಸಾರ್ಟ್ ರಾಜಕೀಯ ಆರಂಭಿಸಿದ್ದರು.

ಶಶಿಕಲಾ ವಿರೋಧಿಯಾಗಿರುವ ಪನ್ನೀರ್ ಸೆಲ್ವಂ ಅವರೊಂದಿಗೆ ಪಳನಿಸ್ವಾಮಿ ಕೈಜೋಡಿಸಿದ್ದರಿಂದಾಗಿ ಪಕ್ಷಕ್ಕೆ ಅಪಚಾರವಾಗಿದ್ದು, ಪಳನಿಸ್ವಾಮಿಗೆ ತಾವು ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಈ ಶಾಸಕರು ತಮಿಳುನಾಡು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
ಹೀಗೆ ಆರಂಭಗೊಂಡಿದ್ದ ರೆಸಾರ್ಟ್ ರಾಜಕೀಯ, ಆರಂಭದಲ್ಲಿ ಅವರು ಮಹಾಬಲಿಪುರಂ ನ ರೆಸಾರ್ಟ್ ನಲ್ಲಿ ಮುಂದುವರಿದಿತ್ತು. ಇತ್ತೀಚೆಗೆ, ಅದು ಕೊಡಗಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ ಗೆ ಶಿಫ್ಟ್ ಆಗಿತ್ತೆಂದು ಹೇಳಲಾಗಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications