ಮೋದಿ ಸಾಕ್ಷ್ಯಚಿತ್ರ ವಿವಾದದ ಬೆನ್ನಲೇ ಐಟಿ ದಾಳಿ: ಪ್ರತಿಕ್ರಿಯೆ ನೀಡಿದ ಬಿಬಿಸಿ
‘ಇಂಡಿಯಾ: ದಿ ಮೋದಿ ಕ್ವೆಶ್ಶನ್’ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರವು ಭಾರತದಲ್ಲಿ ನಿರ್ಬಂಧಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ.
ನವದೆಹಲಿ, ಫೆಬ್ರವರಿ. 14: ಆದಾಯ ತೆರಿಗೆ ಇಲಾಖೆ ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ 'ಸಮೀಕ್ಷೆ' ನಡೆಸುತ್ತಿರುವುದಕ್ಕೆ ಬಿಬಿಸಿ ಪ್ರತಿಕ್ರಿಯಿಸಿದೆ.
"ಆದಾಯ ತೆರಿಗೆ ಅಧಿಕಾರಿಗಳು ಪ್ರಸ್ತುತ ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿದ್ದಾರೆ. ಅವರಿಗೆ ನಾವು ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ" ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಮಂಗಳವಾರ ಟ್ವೀಟ್ ಮಾಡಿದೆ. "ಈ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ" ಎಂದು ತಿಳಿಸಿದೆ.
ಮೂಲಗಳ ಪ್ರಕಾರ ಕಚೇರಿಯಲ್ಲಿ ಹಾಜರಿದ್ದ ಉದ್ಯೋಗಿಗಳ ಫೋನ್ಗಳನ್ನು ತೆಗೆದುಕೊಂಡು ಹೋಗಲಾಗಿಲ್ಲ. ಆದರೆ ಪ್ರಸ್ತುತ ವಿಚಾರಣೆ ನಡೆಯುತ್ತಿದೆ. 'ಇಂಡಿಯಾ: ದಿ ಮೋದಿ ಕ್ವೆಶ್ಶನ್' ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರವು ಭಾರತದಲ್ಲಿ ನಿರ್ಬಂಧಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ.

ಈ ಸಾಕ್ಷ್ಯಚಿತ್ರದ ಮೊದಲ ಭಾಗದಲ್ಲಿ 2002 ರ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ವೇಳೆ ನಡೆದ ಗುಜರಾತ್ ಗಲಭೆಗಳ ಬಗ್ಗೆ ಇದೆ. ಎರಡನೆಯದರಲ್ಲಿ 2014 ರಲ್ಲಿ ಪ್ರಧಾನಿಯಾದ ನಂತರ ಅಲ್ಪಸಂಖ್ಯಾತರಿಗೆ ತರಲಾಗಿರುವ ಅವರ ಸರ್ಕಾರದ ನೀತಿಗಳ ಬಗ್ಗೆ ವಿವರಿಸುತ್ತದೆ. ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ಮತ್ತು ಬಿಜೆಪಿಯ ವಕ್ತಾರರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸಾಕ್ಷ್ಯಚಿತ್ರ ಬಿಡುಗಡೆಯಾದ ಕೂಡಲೇ, ಸಾಕ್ಷ್ಯಚಿತ್ರದ ಲಿಂಕ್ ಅನ್ನು ಹಂಚಿಕೊಳ್ಳುವ ವಿಡಿಯೋಗಳು ಮತ್ತು ಪೋಸ್ಟ್ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರವು ಯೂಟ್ಯೂಬ್ ಮತ್ತು ಟ್ವಿಟರ್ಗೆ ನಿರ್ದೇಶನಗಳನ್ನು ನೀಡಿತು. ಐಟಿ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಜನವರಿ 20 ರಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಆದೇಶ ಹೊರಡಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಾಕ್ಷ್ಯಚಿತ್ರವನ್ನು ಪ್ರಚಾರದ ತುಣುಕು ಎಂದು ಕರೆದಿದೆ.
ಇನ್ನು, ವರ್ಗಾವಣೆ ಬೆಲೆ ನಿಯಮಗಳ ಉದ್ದೇಶಪೂರ್ವಕ ಅನುಸರಣೆ ಮತ್ತು ಅದರ ಲಾಭದ ಅಗಾಧ ತಿರುವು ಈ ಸಮೀಕ್ಷೆಗೆ ಕಾರಣ ಎಂದು ಆದಾಯ ತೆರಿಗೆ ಮೂಲಗಳು ತಿಳಿಸಿವೆ. ಅಂತಹ ಸಮೀಕ್ಷೆಗಳನ್ನು ವಾಡಿಕೆಯಂತೆ ನಡೆಸಲಾಗುತ್ತದೆ. ಅನಗತ್ಯ ಗೊಂದಲಕ್ಕೀಡಾಗಬಾರದು ಎಂದು ಅವರು ಹೇಳಿದ್ದಾರೆ.

"ಬಿಬಿಸಿಯ ವಿಷಯದಲ್ಲಿ, ಮೇಲೆ ತಿಳಿಸಿದ ನಿಯಮಗಳನ್ನು ವರ್ಷಗಳಿಂದಲೂ ನಿರಂತರವಾಗಿ ಉಲ್ಲೇಖಿಸುತ್ತಿದೆ. ಇದರ ಪರಿಣಾಮವಾಗಿ, ಬಿಬಿಸಿಗೆ ಹಲವಾರು ನೋಟಿಸ್ಗಳನ್ನು ನೀಡಲಾಗಿದೆ. ಆದರೂ ಬಿಬಿಸಿ ನಿರಂತರವಾಗಿ ಧಿಕ್ಕರಿಸಿದೆ. ತನ್ನ ಲಾಭವನ್ನು ಗಮನಾರ್ಹವಾಗಿ ಬೇರೆಡೆಗೆ ತಿರುಗಿಸಿದೆ," ಎಂದು ತಿಳಿಸಿದೆ.
ಬಿಬಿಸಿ ಮೇಲಿನ ಸಮೀಕ್ಷೆ ಹೆಸರಿನ ದಾಳಿಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಕಳವಳ ವ್ಯಕ್ತಪಡಿಸಿದೆ. "2002 ರಲ್ಲಿ ಗುಜರಾತ್ನಲ್ಲಿ ನಡೆದ ಹಿಂಸಾಚಾರ ಮತ್ತು ಭಾರತದಲ್ಲಿನ ಅಲ್ಪಸಂಖ್ಯಾತರ ಪ್ರಸ್ತುತ ಸ್ಥಿತಿಯ ಕುರಿತು ಬಿಬಿಸಿ ಎರಡು ಸಾಕ್ಷ್ಯಚಿತ್ರಗಳನ್ನು ಬಿಡುಗಡೆ ಮಾಡಿದ ಕೂಡಲೇ ಈ ದಾಳಿ ನಡೆದಿದೆ. ಇದು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರವೃತ್ತಿಯಾಗಿದೆ. ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಹಕ್ಕುಗಳನ್ನು ದುರ್ಬಲಗೊಳಿಸದಂತೆ ಇಂತಹ ತನಿಖೆಗಳಲ್ಲಿ ಹೆಚ್ಚಿನ ಕಾಳಜಿ ಮತ್ತು ಸೂಕ್ಷ್ಮತೆಯನ್ನು ತೋರಿಸಬೇಕು" ಎಂದು ಎಡಿಟರ್ಸ್ ಗಿಲ್ಡ್ ಒತ್ತಾಯಿಸಿದೆ.
ಕಳೆದ ಶುಕ್ರವಾರ, ಸುಪ್ರೀಂ ಕೋರ್ಟ್ ಭಾರತದಲ್ಲಿ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಶನ್ (ಬಿಬಿಸಿ) ಸಾಕ್ಷ್ಯಚಿತ್ರವನ್ನು ಸಂಪೂರ್ಣ ನಿಷೇಧವನ್ನು ಕೋರುವ ಅರ್ಜಿಯನ್ನು ವಜಾಗೊಳಿಸಿತ್ತು. ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ಮುಜಾಫರ್ಪುರ ನಿವಾಸಿ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ನಿರಾಕರಿಸಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications