ಗೋಹತ್ಯೆ ನಿಷೇಧದ ವಿರುದ್ಧ ಗೋಮಾಂಸ ಭಕ್ಷಣೆ ಉತ್ಸವ
ತಿರುವನಂತಪುರಂ, ಮೇ 27 : ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ ಅತೀಹೆಚ್ಚು ಗೋಮಾಂಸ ಭಕ್ಷಣೆ ಮಾಡುವ ರಾಜ್ಯ ಕೇರಳ. ಗೋವುಗಳ ಮಾರಾಟವನ್ನು ಕೇಂದ್ರ ಸರಕಾರ ನಿಷೇಧಿಸಿರುವುದನ್ನು ವಿರೋಧಿಸಿ ಶನಿವಾರ ಭಾರೀ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇರಳದಲ್ಲಿ ಶೇಕಡಾ 25ಕ್ಕೂ ಹೆಚ್ಚು ಜನರು ಗೋಮಾಂಸ ಭಕ್ಷಿಸುತ್ತಾರೆ. ಇನ್ನು ಗೋವುಗಳ ಮಾರಾಟವನ್ನು ನಿಷೇಧಿಸಿದರೆ ಸುಮ್ಮನಿರುತ್ತಾರಾ? ಕೇಂದ್ರದ ನೀತಿಯನ್ನು ವಿರೋಧಿಸಿ ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ ಗೋಮಾಂಸ ಭಕ್ಷಣೆಯ ಉತ್ಸವವನ್ನೇ ಶನಿವಾರ ಇಡೀ ರಾಜ್ಯಾದ್ಯಂತ ಹಮ್ಮಿಕೊಂಡಿದ್ದಾರೆ.[ದಾನವಾಗಿ ಪಡೆದಿದ್ದ ಹಸುವನ್ನು ಹಿಂದಿರುಗಿಸಿದ ಅಜಂಖಾನ್]

ದಾದ್ರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಹತ್ಯೆಗೈದ ನಂತರ ಹಲವಾರು ಗೋಭಕ್ಷಣೆ ಉತ್ಸವಗಳು ನಡೆದಿದ್ದರೂ, ಪ್ರಸ್ತುವ ನಡೆಸುತ್ತಿರುವ ಉತ್ಸವ ಎಲ್ಲಕ್ಕಿಂತ ದೊಡ್ಡದಾಗಿದೆ. ರಾಜ್ಯದಲ್ಲಿ 210 ಕೇಂದ್ರಗಳಲ್ಲಿ ಗೋಭಕ್ಷಣೆ ಉತ್ಸವವನ್ನು ನಡೆಸಲಾಗುತ್ತಿದೆ.
ನಾವು ಏನನ್ನು ತಿನ್ನಬೇಕೆಂದು ನಿರ್ಧರಿಸುವವರು ಅವರು (ಕೇಂದ್ರ) ಯಾರು? ಜನರಿಗೆ ತಿನ್ನಲು ಸಾಕಷ್ಟು ಇದೆಯಾ, ಅವರಿಗೆ ಪೌಷ್ಟಿಕಾಂಶ ಯುಕ್ತ ಆಹಾರ ದೊರೆಯುತ್ತಿದೆಯಾ ಎಂದು ಮಾತ್ರ ನೋಡಬೇಕು. ದೇಶದಲ್ಲಿನ ಬಡತನ ನಿವಾರಿಸಲು ಅವರು ನಿಯಮ ತರುತ್ತಾರಾ? ಎಂದು ಸಂಘಟಕರೊಬ್ಬರು ಕೇಂದ್ರವನ್ನು ಪ್ರಶ್ನಿಸಿದ್ದಾರೆ.[ಗೋಹತ್ಯೆ ನಿಷೇಧಕ್ಕೆ ಕಾನೂನು ರೂಪಿಸಿ: ಮೋಹನ್ ಭಾಗವತ್]
ಈ ವೃತ್ತಿಯನ್ನೇ ನಂಬಿರುವ ಹಲವರ ಹೊಟ್ಟೆಯ ಮೇಲೆ ಹೊಡೆದಂತಾಗಿದೆ. ಗೋವುಗಳನ್ನು ಉಳಿಸಬೇಕಿದ್ದರೆ ಕೃಷಿ ಚುಟುವಟಿಕೆಯನ್ನು ಇನ್ನಷ್ಟು ಸುಭದ್ರಗೊಳಿಸಬೇಕು. ಅದು ಬಿಟ್ಟು ಗೋವು ಮಾರಾಟ ನಿಲ್ಲಿಸಿದರೆ ಹೇಗೆ? ಇದು ಸಾಧ್ಯವಿಲ್ಲ, ನಾವು ಗೋಮಾಂಸ ತಿಂದೇ ತಿನ್ನುತ್ತೇವೆ, ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ವಿಜಿನ್ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋವುಗಳ ಮಾರಾಟ ನಿಷೇಧಿಸಿದ್ದಕೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ಕೂಡ, ಸಂಘ ಪರಿವಾರದ ರೀತಿನೀತಿಗಳನ್ನು ದೇಶದ ಮೇಲೆ ಬಿಜೆಪಿ ಹೇರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನಿಯಮದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಅವರು ಹೇಳಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications