ರಾಜಕೀಯ ಗಲಭೆ : ಬಿಜೆಪಿ ನಾಯಕಿ ರೂಪಾ ಗಂಗೂಲಿ ತಲೆಗೆ ಪೆಟ್ಟು
ಕೋಲ್ಕತ್ತಾ, ಮೇ 23: ಪಶ್ಚಿಮ ಬಂಗಾಳದಲ್ಲಿ ಅಸೆಂಭ್ಲಿ ಚುನಾವಣೆ ನಂತರ ಎಂದಿನಂತೆ ಹಿಂಸಾಚಾರ, ರಾಜಕೀಯ ಪ್ರೇರಿತ ಗಲಭೆಗಳು ಮೊದಲಾಗಿವೆ. ರಾಜಕಾರಣಿಗಳನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡುವುದು ಮುಂದುವರೆದಿದ್ದು, ಭಾನುವಾರ ನಟಿ ಹಾಗೂ ಬಿಜೆಪಿ ನಾಯಕಿ ರೂಪಾ ಗಂಗೂಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.
ರೂಪಾ ಗಂಗೂಲಿ ಅವರಿದ್ದ ವಾಹನ ಹಾಗೂ ಬೆಂಗಾವಲಿನ ವಾಹನ ಮೇಲೆ ಕೋಲ್ಕತ್ತಾದ ಡೈಮಂಡ್ ಹಾರ್ಬರ್ ಬಳಿ ದಾಳಿ ಹಲ್ಲೆ ನಡೆದಿದ್ದು, ಗಂಗೂಲಿ ಅವರ ತಲೆಗೆ ಏಟು ಬಿದ್ದಿದೆ. ಅವರನ್ನು ಖಾಸಗಿ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. [ಹಗರಣಗಳ ನಡುವೆಯೂ ಗಹಗಹಿಸಿದ ಮಮತಾ ಬ್ಯಾನರ್ಜಿ]

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದರು ಎಂದು ಗಂಗೂಲಿ ಅವರು ಆಪಾದಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರೂಪಾ ಸೋಲುಂಡಿದ್ದರು. ಮಾಜಿ ಕ್ರಿಕೆಟರ್ ತೃಣಮೂಲ ಕಾಂಗ್ರೆಸ್ಸಿನ ಲಕ್ಷ್ಮಿ ರತನ್ ಶುಕ್ಲಾ ವಿರುದ್ಧ ಪರಾಭವಗೊಂಡರು.[ರೀಲ್ ನಿಂದ ರಿಯಲ್ ಮಹಾಭಾರತಕ್ಕೆ ರೂಪಾ ಗಂಗೂಲಿ]
ರೂಪಾ ಗಂಗೂಲಿ ಅವರು ದಕ್ಷಿಣ 24 ಪರಗಣ ಜಿಲ್ಲೆಯ ಕೊಕ್ಡದ್ವೀಪದಿಂದ ವಾಪಾಸಾಗುತ್ತಿದ್ದಾಗ ಈ ಹಲ್ಲೆ ನಡೆದಿದೆ. ರೂಪಾ ಅವರು ರಾಜಕೀಯ ದಾಳಿ ಸಂತ್ರಸ್ಥರನ್ನು ಭೇಟಿ ಮಾಡಲು 24 ಪರಗಣ ಜಿಲ್ಲೆಗೆ ಭೇಟಿ ನೀಡಿದ್ದರು. [ದ್ರೌಪತಿ ಮೇಲೆ ಕೌರವ ಕಾರ್ಯಕರ್ತರ ಹಲ್ಲೆ - ಆರೋಪ]
ಪಶ್ಚಿಮ ಬಂಗಾಲದ ಸಿಎಂ ಆಗಿ ಮತ್ತೊಮ್ಮೆ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಅರುಣ್ ಜೇಟ್ಲಿರಂಥ ಹಿರಿಯ ನಾಯಕರನ್ನು ಆಹ್ವಾನಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications