Rameshwaram Cafe Blast: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭೀಕರ ಸ್ಫೋಟ: 8 ಜನರ...
ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಹೋಟೆಲ್ಗಳಲ್ಲಿ ದುರಂತಗಳು ಸಂಭವಿಸುತ್ತಿವೆ. ಅದ್ರಲ್ಲೂ ಕಳೆದ ಕೆಲವು ತಿಂಗಳಿಂದ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದ್ದು ಗ್ರಾಹಕರಲ್ಲಿ ಕೂಡ ಭಯ ಹುಟ್ಟಿಸಿದೆ. ಇಂದು ಕೂಡ ಇಂತಹದ್ದೇ ಘಟನೆ ನಡೆದಿದೆ. ಈ ಘಟನೆ ನಡೆದಿರುವುದು ಎಚ್ಎಎಲ್ (HAL) ಸಮೀಪದ ಕುಂದಲಹಳ್ಳಿ ಗೇಟ್ ಬಳಿ. ಇನ್ನು ಈ ಭೀಕರ ಸ್ಫೋಟಕ್ಕೆ ಕಾರಣ ಏನು ಗೊತ್ತೆ? ಬನ್ನಿ ತಿಳಿಯೋಣ.
ಬೆಂಗಳೂರು ನಗರದ ಕುಂದಲಹಳ್ಳಿ ಬಳಿಯ ಹೋಟೆಲ್ ಒಂದರಲ್ಲಿ ಸ್ಪೋಟವು ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹೋಟೆಲ್ ಒಳಗೆ ಭೀಕರ ಹಾನಿಯಾಗಿದ್ದು, ಹೋಟೆಲ್ ಒಳಾಂಗಣವೆ ಛಿದ್ರ ಛಿದ್ರವಾಗಿ ಹೋಗಿದೆ. ಸುದ್ದಿ ತಿಳಿದ ತಕ್ಷಣ ಎಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿಯ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳೀಯರು ಸ್ಪೋಟ ತೀವ್ರತೆಗೆ ಗಾಬರಿ ಆಗಿದ್ದಾರೆ. ಬೆಂಕಿ ಅವಘಡ ನಡೆದಿಲ್ಲ ಅನ್ನೋದು ಸ್ಪಷ್ಟವಾಗಿದ್ದು. ಬಾಯಿಲರ್ ಸ್ಪೋಟದಿಂದ ಈ ಅವಘಢ ಸಂಭವಿಸಿರಬಹುದು ಅಂತಾ ಮೇಲ್ನೋಟಕ್ಕೆ ಇದೀಗ ಹೇಳಲಾಗುತ್ತಿದೆ ಆದರೂ, ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

ಅಕ್ಕಪಕ್ಕದ ಮನೆಗಳ ಕಥೆ ಏನು?
ಇನ್ನು ಈ ಕುರಿತು ಸ್ಥಳೀಯರೊಬ್ಬರು ಮಾತನಾಡಿ, 'ರಾಮೇಶ್ವರಂ ಕೆಫೆಯಲ್ಲಿ ಐಟಿಪಿಎಲ್ ಮೇನ್ ರೋಡ್ ಹತ್ತಿರ ಈ ಘಟನೆ ನಡೆದಿದೆ. ಇಲ್ಲಿ ತುಂಬಾ ಜನ ಇದ್ದರು. ಎಂಟರಿಂದ ಹತ್ತು ಜನ ಗಾಯಗೊಂಡಿದ್ದಾರೆ. ಒಬ್ಬ ಮಹಿಳೆ ಬಟ್ಟೆ ಸುಟ್ಟು ಹೋಗಿತ್ತು. ಇದಕ್ಕೆ ಕಾರಣ ತಿಳಿದಿಲ್ಲ' ಅಂತಾ ಹೇಳಿದ್ದಾರೆ. ಇದೀಗ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ಹೀಗಾಗಿ ಪೊಲೀಸರು & ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ ಬೆಂಕಿ ಇದೀಗ, ಸಂಪೂರ್ಣ ಹಿಡಿತಕ್ಕೆ ಬಂದಿದ್ದು. ಅಕ್ಕಪಕ್ಕದ ಮನೆಗಳು ಸುರಕ್ಷಿತವಾಗಿವೆ ಎನ್ನಲಾಗಿದೆ.
ಕೋರಮಂಗಲದಲ್ಲಿ ಬೆಂಕಿ ದುರಂತ
ಬೆಂಗಳೂರಿನ ಹೋಟೆಲ್ಗಳಲ್ಲಿ ಸುರಕ್ಷಿತ ಕ್ರಮಗಳ ಬಗ್ಗೆ ಆಗಾಗ ಚರ್ಚೆ ಎದುರಾಗುತ್ತಿದ್ದು, ಇಂತಹ ಅಗ್ನಿ ದುರಂತಗಳು ಭಯ ಹುಟ್ಟಿಸುತ್ತಿವೆ. ಇನ್ನು ಕೆಲವು ತಿಂಗಳ ಹಿಂದೆ ನಗರದ ಕೋರಮಂಗಲ ಪ್ರದೇಶದಲ್ಲಿ ಬೆಂಕಿ ದುರಂತ ಸಂಭವಿಸಿ, ಹಲವರು ಗಾಯಗೊಂಡರು. ಈ ಘಟನೆ ಬಳಿಕ ಬಿಬಿಎಂಪಿ ಕೂಡ ಅಲರ್ಟ್ ಆಗಿ ಕ್ರಮ ಕೈಗೊಂಡಿತ್ತು. ಅದ್ರಲ್ಲೂ ಮಹಡಿ ಮೇಲಿಂದ ಒಬ್ಬ ವ್ಯಕ್ತಿ ಜಿಗಿಯುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ನಲ್ಲಿ ಇಂತಹ ಘಟನೆ ಸಂಭವಿಸಿರುವುದು ಆತಂಕ ಹುಟ್ಟಿಸಿದೆ. ಆದರೆ ಈ ಘಟನೆಗೆ ಕಾರಣ ಏನು? ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications