ಬೆಂಗಳೂರಿನ ಜನರಿಗೆ ದಿಢೀರ್ ಚಳಿಯ ಆಘಾತ, ಚಳಿಗಾಲದಲ್ಲಿ ಹಿಮಾಲಯ ಆಗಲಿದೆಯಾ ರಾಜಧಾನಿ? Bengaluru Weather
ಚಳಿ.. ಚಳಿ.. ಹೀಗೆ ಚಳಿಗಾಲದಲ್ಲಿ ಜನರು ಪರದಾಡುತ್ತಿದ್ದು, ಯಾವಾಗ ಚಳಿಗಾಲ ಮುಗಿದು ಬೇಸಿಗೆ ಬರುತ್ತೋ ಅಂತಾ ಕಾಯುತ್ತಿದ್ದಾರೆ. ಇನ್ನು ಬೇಸಿಗೆ ಬಂದಾಗ ತುಂಬಾ ಸೆಕೆ ಅನ್ನೋದು ಕೂಡ ಇದೇ ಜನರು. ಹೀಗೆ ಎಲ್ಲಾ ವಾತಾವರಣ ಅತಿಯಾದರೆ ಮನುಷ್ಯರಿಗೆ ಇಷ್ಟ ಆಗೋದಿಲ್ಲ. ಇಷ್ಟೆಲ್ಲಾ ಪರದಾಟಗಳ ನಡುವೆ ಇದೀಗ ನಮ್ಮ ಬೆಂಗಳೂರಿನಲ್ಲಿ ಚಳಿಯ ಅಬ್ಬರ ಹೆಚ್ಚಾಗುವ & ಚಳಿಯಲ್ಲಿ ಇಡೀ ರಾಜಧಾನಿ ನಡುಗುವ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕನ್ನಡಿಗರ ರಾಜಧಾನಿ ಬೆಂಗಳೂರಿನ ಜನರಿಗೆ ಮುಂಬರುವ ದಿನಗಳಲ್ಲಿ ಚಳಿಯ ಆಘಾತ ಗ್ಯಾರಂಟಿ ಆಗಿದೆ. ದಕ್ಷಿಣ ಕರ್ನಾಟಕ ಇದೀಗ ಚಳಿಯ ಹೊಡೆತಕ್ಕೆ ಸಿಲುಕುವ ಮುನ್ಸೂಚನೆ ನೀಡಲಾಗಿದ್ದು, ಕನಿಷ್ಠ ತಾಪಮಾನ ಕಡಿಮೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ರಾತ್ರಿಯ ತಾಪಮಾನದಲ್ಲಿ ಮತ್ತಷ್ಟು ಕುಸಿತ ಎದುರಾಗುವುದು ಗ್ಯಾರಂಟಿ ಆಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತಲ ಪ್ರದೇಶ ಸೇರಿ ಇಡೀ ದಕ್ಷಿಣ ಕರ್ನಾಟಕ ಭಾಗದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿತ ಕಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಚಳಿಯ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.

ವಿಮಾನ ನಿಲ್ದಾಣ ಸಮೀಪ ಚಳಿ.. ಚಳಿ...
ಬೆಂಗಳೂರು ಚಳಿಯ ಬಗ್ಗೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಮಹಾನಗರಿ ಬೆಂಗಳೂರಿನಲ್ಲಿ 14.5 ಡಿಗ್ರಿ ಸೆಲ್ಸಿಯಸ್ನಿಂದ 16.4 ಡಿಗ್ರಿ ಸೆಲ್ಸಿಯಸ್ ತನಕ ಕನಿಷ್ಠ ತಾಪಮಾನ ಕುಸಿಯುವ ಆತಂಕ ಈಗ ಆವರಿಸಿದೆ. ಆದರೆ ಇದೇ ಸಮಯದಲ್ಲಿ KIAL ಅಂದರೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ 9.6 ಡಿಗ್ರಿ ಸೆಲ್ಸಿಯಸ್ನಿಂದ 14 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಕುಸಿತ ಕಾಣಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಮೂಲಕ ಬೆಂಗಳೂರು ಹೊರ ವಲಯದಲ್ಲಿ ತಾಪಮಾನ ಕುಸಿತ ಹೊಸ ಸಮಸ್ಯೆ ತರುವ ಆತಂಕ ಆವರಿಸಿದೆ.
ಮುಂದಿನ 48 ಗಂಟೆಗಳಲ್ಲಿ ಹೇಗಿರಲಿದೆ ವಾತಾವರಣ?
ಕರ್ನಾಟಕ ರಾಜ್ಯಾದ್ಯಂತ, ದಕ್ಷಿಣ ಕರ್ನಾಟಕದ ಕೆಲವು ಸ್ಥಳಗಳಲ್ಲಿ ತಾಪಮಾನ ಗಮನಾರ್ಹವಾಗಿ ಕುಸಿಯುವ ಮುನ್ಸೂಚನೆ ಮಧ್ಯೆ ಕರ್ನಾಟಕದ ಒಳಭಾಗದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕುಸಿತ ಕಂಡಿದೆ. ಅದರಲ್ಲೂ ಬೆಳಗಿನ ಸಮಯದಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಕರ್ನಾಟಕದ ಬಯಲು ಸೀಮೆ ಭಾಗದಲ್ಲಿ 12.4 ಡಿಗ್ರಿ ಸೆಲ್ಸಿಯಸ್ಗೆ ತಾಪಮಾನ ಕುಸಿದಿದೆ. ಮುಂದಿನ 48 ಗಂಟೆಗಳಲ್ಲಿ ಮೋಡ ರಹಿತ ಆಕಾಶ ಇದ್ದರೂ ಚಳಿ ಆರ್ಭಟ ಮಾತ್ರ ಕಡಿಮೆ ಆಗುವುದಿಲ್ಲ. ಹೀಗಾಗಿ ನಿಮ್ಮ ಕಂಬಳಿ & ಬ್ಲಾಂಕೆಟ್ ರೆಡಿ ಮಾಡಿಕೊಂಡರೆ ಈಗಿನ ಪರಿಸ್ಥಿತಿಯಲ್ಲಿ ಉತ್ತಮ!
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications