‘ಕೊರೊನಾ’ ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ: ಹೀಗೆ ಹೇಳಿದ್ದು ಯಾರು?
ಎಲ್ಲೆಲ್ಲೂ ಕೊರೊನಾ ಭಯ ಆವರಿಸಿದೆ, ಕೋವಿಡ್-19 ವೈರಸ್ ಉಪತಳಿ ಹರಡುತ್ತಿರುವ ರೀತಿ ನೋಡಿದರೆ ಎಂತಹವರಿಗೂ ಭಯ ಆಗುತ್ತದೆ. ಆದರೆ ಈ ಸಮಯದಲ್ಲಿ ಭಯ ಬೇಡ ಆದರೆ ಮುನ್ನೆಚ್ಚರಿಕೆ ಅಗತ್ಯ ಅನ್ನೋ ಸಲಹೆಯನ್ನ ತಜ್ಞರು ನೀಡುತ್ತಿದ್ದಾರೆ. ಇದೇ ರೀತಿ, ಕೊರೊನಾ ಬಗ್ಗೆ ಭಯ ಬೇಡ ಅಂತಿದ್ದಾರೆ ಇವರು.
ಬೆಂಗಳೂರು ಜಿಲ್ಲೆಯಲ್ಲಿ ಜನರು ಕೋವಿಡ್ ಕುರಿತು ಭಯ ಪಡದೆ ಸರ್ಕಾರದಿಂದ ನೀಡಲಾಗುವ ಮಾರ್ಗಸೂಚಿ ಪಾಲಿಸಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ, ಎಂದು ಅಪರ ಜಿಲ್ಲಾಧಿಕಾರಿಗಳಾದ ಟಿ.ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ. ಅವರು ರಾಜಧಾನಿ ಬೆಂಗಳೂರಿನ, ಡಿಸಿ ಕಚೇರಿಯ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ, ಕೊರೊನಾ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ
ಅಂದಹಾಗೆ ಈಗ ಕೊರೊನಾ ಕಂಟ್ರೋಲ್ಗೆ ಟಫ್ ರೂಲ್ಸ್ ಅತ್ಯಗತ್ಯ. ಹೀಗಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ, 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ಗರ್ಭಿಣಿಯರು ಹಾಗೂ ಮಕ್ಕಳಿಗೆ ಹಾಲುಣಿಸುವ ತಯಾಂದಿರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ & ಹೆಚ್ಚು ಜನ ಸೇರುವ ಪ್ರದೇಶದಲ್ಲಿ ಅನಗತ್ಯ ಓಡಾಟ ಮಾಡಬೇಡಿ ಎಂದು ಸಲಹೆ ನೀಡಿದರು.
ಉಪಕರಣಗಳನ್ನು ಸಿದ್ಧಮಾಡಿ ಇಟ್ಟುಕೊಳ್ಳಿ
ಹಾಗೇ ಕೋವಿಡ್ ಪರೀಕ್ಷೆ ಬಗ್ಗೆಯೂ ತಿಳಿಸಿದ ಅವರು ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಪ್ರತಿದಿನ, ಕೋವಿಡ್ ಪರೀಕ್ಷೆ ನಡೆಸಲು ಗುರಿಯನ್ನ ನಿಗದಿ ಮಾಡಲಾಗಿದೆ. SARI (severe acute respiratory infection) ತೀವ್ರ ಉಸಿರಾಟ ಸೋಂಕು ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದು ತಿಳಿಸಿದರು. ಅಗತ್ಯ ಸಿದ್ಧತೆ ಮಾಡಿಕೊಳ್ಳಿ, ಕೊರೊನಾ ಪರೀಕ್ಷೆಗೆ ಬೇಕಿರುವ ಸಲಕರಣೆ, ಸೋಂಕು ಪತ್ತೆಯಾದ ನಂತರ ಚಿಕಿತ್ಸೆಗೆ ಬೇಕಿರುವ ಬೆಡ್ ವ್ಯವಸ್ಥೆ, ಔಷಧ ಮತ್ತು ಕಾನ್ಟೆಕ್ಟ್ ಟ್ರೆಸಿಂಗ್ಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದ್ರು.

ತಾಲೂಕು ಮಟ್ಟದ ವೈದ್ಯಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಯ ನಡೆಸಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ. ಹೊರ ರಾಜ್ಯ & ಹೊರ ದೇಶಗಳಿಗೆ ಪ್ರಯಾಣ ನಡೆಸಿ ಹಿಂದುರಿಗಿದ ನಂತರ ಅವರಿಗೂ ಕೋವಿಡ್ ಲಕ್ಷಣ ಇದ್ದಲ್ಲಿ ಪರೀಕ್ಷೆಗೆ ಒಳಪಡಿಸಿ ಎಂದರು. ಸಾರ್ವಜನಿಕರು ಶೀತ, ಜ್ವರ, ಕೆಮ್ಮು ಲಕ್ಷಣ ಇದ್ರೆ ಮಾಸ್ಕ್ ಧರಿಸಿ, ಸಾರ್ವಜನಿಕ ಸ್ಥಳದಿಂದ ದೂರವಿರಿ ಎಂದು ಸಲಹೆ ನೀಡಿದರು. ಈ ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರವೀಂದ್ರ ಮೀಟಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಶರತ್ ಬಾಬು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications