Bengaluru: ಮಣಿಪುರದ 100 ವಿದ್ಯಾರ್ಥಿಗಳಿಗೆ ಉಚಿತ ಐಎಎಸ್ ತರಬೇತಿ: ಇನ್ಸೈಟ್ ಅಕಾಡೆಮಿ
ಬೆಂಗಳೂರು, ಆಗಸ್ಟ್ 01: ಮಣಿಪುರದಲ್ಲಿ ತಿಂಗಳುಗಳಿಂದ ನಡೆಯುತ್ತಿರುವ ಹಿಂಸಾಚಾರ, ಗಲಭೆ, ಸಾವು ನೋವುಗಳು ದೇಶಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿವೆ. ಇದರಿಂದ ಆ ರಾಜ್ಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ತೊಂದರೆ ಉಂಟಾಗಿದೆ. ಇದನ್ನು ಅರಿತಿರುವ ಇನ್ಸೈಟ್ ಐಎಎಸ್ ಅಕಾಡೆಮಿ ಮಣಿಪುರದ 100 ಮಂದಿ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್ ನೀಡಲು ನಿರ್ಧರಿಸಿದೆ.
ಮಣಿಪುರದ ಗಲಾಟೆಗಳಿಂದ ವಿದ್ಯಾರ್ಥಿಗಳಿಗೆ, ಐಎಎಸ್ ಅಭ್ಯರ್ಥಿಗಳಿಗೆ ತೊಂದರೆ ಆಗಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಐಎಎಸ್ UPSE ಆಕಾಂಕ್ಷಿಗಳಿಗೆ ಉಚಿತವಾಗಿ ಮತ್ತು ವಿಧ್ಯಾರ್ಥಿ ವೇತನ ಸಹಿ ಒಟ್ಟು 100 ಮಂದಿಗೆ ಕೋಚಿಂಗ್ ನೀಡಲು ಸಂಸ್ಥೆಯ ಸಂಸ್ಥಾಪಕ ಮತ್ತು ನಿರ್ದೇಶಕ ವಿನಯ್ ಕುಮಾರ್ ಜಿಬಿ ಅವರು ನಿರ್ಧರಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಅವರಿಗೆ ಉದ್ಯೋಗಕಾಶ ದೊರೆಯಲು ಸಹಾಯ ಮಾಡಿದಂತಾಗುತ್ತದೆ.

ಅಕಾಡೆಮಿಯು ಇಂಟಿಗ್ರೇಟೆಡ್ ಫೌಂಡೇಶನ್ ಪ್ರೋಗ್ರಾಂ ನಡಿ ಆಫ್ಲೈನ್ ಮತ್ತು ಆನ್ಲೈನ್ ಮಾರ್ಗದರ್ಶನ ಮಾಡಲಿದ್ದು, ಅದರಲ್ಲಿ ಒಟ್ಟು ನೂರು ಮಂದಿ ಮಣಿಪುರದ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿದೆ. ಅವರಿಗೆ ವಿದ್ಯಾರ್ಥಿ ವೇತನ ಸಹ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮಣಿಪುರದಲ್ಲಿ ಪ್ರತಿಯೊಂದು ವರ್ಗವು ಅಲ್ಲಿನ ಹಿಂಸಾಚಾರದಿಂದ ತುತ್ತಾಗಿದೆ. ನಾಗರಿಕರಾಗಿ ನಾವು ಅವರೊಂದಿಗೆ ಒಗ್ಗಟ್ಟನ್ನು ತೋರಿಸಬೇಕಿದೆ. ಅವರ ಕಷ್ಟಗಳಿಗೆ ಮಿಡಿಯಬೇಕಿದೆ. ಈ ಕಾರಣದಿಂದ ಮಣಿಪುರದ ವಿದ್ಯಾರ್ಥಿಗಳಿಗೆ ಕೋಚಿಂಗ್ ನ 100 ಉಚಿತ ಸೀಟು ಮೀಸಲಿಡಲು ತೀರ್ಮಾನಿಸಿ ಅಭ್ಯರ್ಥಿಗಳನ್ನು ಆಹ್ವಾನಿಸಿದ್ದೇವೆ ಎಂದರು.
ವಿದ್ಯಾರ್ಥಿವೇತನ ಪಡೆಯಲು ಅವಕಾಶ
ಸಮುದಾಯ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆಯಲು, ಅರ್ಜಿದಾರರು ಮಣಿಪುರದ ಖಾಯಂ ನಿವಾಸಿಗಳಾಗಿರಬೇಕು ಮತ್ತು ಪದವಿ ಪೂರ್ಣಗೊಳಿಸಬೇಕು. ಕೋಚಿಂಗ್ ಪಡೆಯುಲು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.insightsonindia.com ಬೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಐಎಎಸ್ ಭಾರತದಾದ್ಯಂತ UPSC CSE ಆಕಾಂಕ್ಷಿಗಳಿಗೆ ಕೋರ್ಸ್ಗಳನ್ನು ಒದಗಿಸಲಾಗುತ್ತಿದೆ. ಈಗಾಗಲೇ ಭಾರತದ ದೆಹಲಿ, ಶ್ರೀನಗರ, ಲಕ್ನೋ ಸೇರಿದಂತೆ ಕರ್ನಾಟಕದ ಬೆಂಗಳೂರು, ಧಾರವಾಡ, ಮೈಸೂರು ಸೇರಿದಂತೆ ಒಟ್ಟು ನಗರದಲ್ಲಿ ಅಕಾಡೆಮಿ ಶಾಖೆಗಳನ್ನು ಹೊಂದಿದೆ.
ನಿಯಂತ್ರಣಕ್ಕೆ ಬಾರದ ಜನಾಂಗೀಯ ಹಿಂಸಾಚಾರ
ಜಾತಿ ಮೀಸಲಾತಿ ಕುರಿತು ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿ ತಿಂಗಳುಗಳೇ ಕಳೆದರೂ ಇನ್ನೂ ಸಹ ತಹಬದಿಗೆ ಬಂದಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ರಾಹುಲ್ ಗಾಂಧಿಯವರು ಸಹ ಮಣಿಪುರಕ್ಕೆ ಭೇಟಿ ನೀಡಿದ್ದರು.
ಇನ್ನೂ ಇತ್ತೀಚೆಗೆ ಇಬ್ಬರು ಮಹಿಳೆಯರ ನಗ್ನ ಮೆರವಣಿಗೆ ಮಾಡಿ, ಹೊಲದಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ದೇಶಾದ್ಯಂತ ಭಾರೀ ಖಂಡನೆ ವ್ಯಕ್ತವಾಯಿತು. ಈ ಘಟನೆ ನಡೆದು ಎರಡು ತಿಂಗಳೇ ಉರುಳಿದ್ದು ತಡವಾಗಿ ಬೆಳಕಿಗೆ ಬಂದಿದೆ. ವಿಡಿಯೋ ಆಧರಿಸಿ ಸಮಾರು ಏಳು ಮಂದಿ ಆರೋಪಿಗಳನ್ನು ಮಣಿಪುರ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications