ನಮ್ಮ ಮೆಟ್ರೋದಲ್ಲಿ ಭಾರಿ ಜನ: ಮುಂಬೈ ಲೋಕಲ್ ಟ್ರೈನ್ ಜೊತೆ ಹೋಲಿಕೆ
ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಪೂರ್ಣವಾಗಿ ಕಾರ್ಯಾಚರಣೆ ಆರಂಭಿಸಿದ ನಂತರ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಚಲ್ಲಘಟ್ಟದಿಂದ ವೈಟ್ಫೀಲ್ಡ್ ಮಾರ್ಗದಲ್ಲಿ ಸಾಧಾರಣವಾಗಿ ಕಚೇರಿ ಸಮಯದಲ್ಲಿ ಭಾರಿ ಜನಸಂದಣಿಯನ್ನು ನೋಡಬಹುದಾಗಿದೆ.
ಇಂಟರ್ನೆಟ್ನಲ್ಲಿ ಈಗ ಹೊಸ ವಿಡಿಯೋ ವೈರಲ್ ಆಗಿದ್ದು, ನಮ್ಮ ಮೆಟ್ರೋವನ್ನು ಕೆಲವರು ಮುಂಬೈ ಲೋಕಲ್ ಟ್ರೈನ್ಗೆ ಹೋಲಿಕೆ ಮಾಡಿದ್ದಾರೆ. 6-ಸೆಕೆಂಡ್-ಉದ್ದದ ಕ್ಲಿಪ್ನಲ್ಲಿ, ಮೆಟ್ರೋವು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವುದನ್ನು ತೋರಿಸುತ್ತದೆ. ಮೆಟ್ರೋ ರೈಲಿಗೆ ಹತ್ತಲು ದೀರ್ಘವಾದ ಸಾಲು ಕಾಣುತ್ತಿದೆ.

ವೀಡಿಯೊ ಅಪ್ಲೋಡ್ ಆದ ನಂತರ ವೈರಲ್ ಆಗಿದೆ, ವಿಡಿಯೋ ನೋಡಿ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ. ಕೆಲವು ಟ್ವಿಟರ್ ಬಳಕೆದಾರರು ಬೆಂಗಳೂರಿನ ಮೆಟ್ರೋ ಮತ್ತು ಮುಂಬೈನ ಸ್ಥಳೀಯ ರೈಲುಗಳ ನಡುವೆ ಹೋಲಿಕೆಗಳನ್ನು ಮಾಡಿದ್ದಾರೆ.
During the morning rush on #NammaMetro!
— Citizens Movement, East Bengaluru (@east_bengaluru) October 26, 2023
We're outperforming China by miles! 🚇🇮🇳 @HardeepSPuri @narendramodi @PCMohanMP @Tejasvi_Surya, what's our plan? When will China stop dictating coaches for Indian Metros? When will we get Made-In-Indian coaches?
pic.twitter.com/JPx1tNXmaN
ಮಿಶ್ರ ಪ್ರತಿಕ್ರಿಯೆ
ವೀಡಿಯೊಗೆ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ. ಕೆಲವರು ಇದನ್ನು ಸಾಪೇಕ್ಷವಾಗಿ ಮತ್ತು ಮುಂಬೈನ ಜನನಿಬಿಡ ರೈಲುಗಳನ್ನು ನೆನಪಿಸಿದರೆ, ಇತರರು ಅಸಮರ್ಪಕ ಮೂಲಸೌಕರ್ಯದಿಂದ ಎದುರಾಗುವ ಸವಾಲುಗಳ ಪ್ರತಿಬಿಂಬವೆಂದು ಹೇಳಿದ್ದಾರೆ. ಸಾಮಾನ್ಯವಾಗಿ ಭಾರತದ ಸಿಲಿಕಾನ್ ವ್ಯಾಲಿ ಎಂದು ಹೇಳಲಾಗುವ ಬೆಂಗಳೂರು, ವೇಗದ ನಗರೀಕರಣ ಮತ್ತು ಜನಸಂಖ್ಯೆಯ ಬೆಳವಣಿಗೆಯನ್ನು ಕಂಡಿದೆ, ಇದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸಿದೆ.
ನೇರಳೆ ಮಾರ್ಗದಲ್ಲಿ ಸಂಪೂರ್ಣ ಮೆಟ್ರೋ ಸಂಚಾರ ಆರಂಭವಾದ ನಂತರ ನಮ್ಮ ಮೆಟ್ರೋ ಪ್ರತಿ ದಿನ ಪ್ರಯಾಣಿಕರ ಸಂಖ್ಯೆ 7 ಲಕ್ಷ ದಾಟಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪೀಕ್ ಸಮಯದಲ್ಲಿ ಪ್ರತಿದಿನ ಹೆಚ್ಚಿನ ಜನ ದಟ್ಟಣೆಯನ್ನು ನೋಡಬಹುದಾಗಿದೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಬಳಿಕ, ಮೆಟ್ರೋ ರೈಲಿಗೆ ಕಾಯುವ ಸಮಯದ ಅಂತರವನ್ನು ಕಡಿಮೆ ಮಾಡಲು ಬಿಎಂಆರ್ ಸಿಎಲ್ ಪ್ರಯತ್ನ ಮಾಡುತ್ತಿದೆ. ಚೀನಾದಿಂದ ಮೆಟ್ರೋ ಬೋಗಿಗಳ ಪೂರೈಕೆ ತಡವಾಗಿರುವ ಕಾರಣ ಇದಕ್ಕೆ ಹಿನ್ನಡೆಯಾಗಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆ ಸರಿಪಡಿಸುವ ವಿಶ್ವಾಸದಲ್ಲಿದೆ.
2024ರ ಮಾರ್ಚ್ - ಏಪ್ರಿಲ್ ವೇಳೆಗೆ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗದ ಕೂಡ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದ್ದು, ಪ್ರತಿದಿನದ ಪ್ರಯಾಣಿಕರ ಸಂಖ್ಯೆ10 ಲಕ್ಷ ದಾಟುವ ಸಾಧ್ಯತೆ ಇದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಕೂಡ ಫೀಡರ್ ಬಸ್ಗಳ ಸೇವೆಯನ್ನು ಆರಂಭಿಸಿದ್ದು, ಸಾರ್ವಜನಿಕ ಸಾರಿಗೆಗೆ ಉತ್ತೇಜನ ಸಿಕ್ಕಂತಾಗಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications