ಮಳೆಗೆ ಬೆಂಗಳೂರು ತತ್ತರ, ಕೇರಳದಲ್ಲಿಯೂ ಆರೆಂಜ್ ಅಲರ್ಟ್
ನವದೆಹಲಿ ಆಗಸ್ಟ್ 03: ಇದೀಗ ಭಾರತದಾದ್ಯಂತ ಮಾನ್ಸೂನ್ ಮಳೆಯಾಗುತ್ತಿದೆ. ದಕ್ಷಿಣ ಭಾರತದಲ್ಲಿ ಮಳೆ ಅಬ್ಬರ ಜೋರಾಗಿದೆ. ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಬುಧವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆ ಕೇರಳದಲ್ಲಿ ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನೊಂದೆಡೆ ಉತ್ತರ ಪ್ರದೇಶ, ಬಿಹಾರ, ಕರ್ನಾಟಕ, ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Breaking: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ, ಸಹಾಯವಾಣಿ ಸಂಖ್ಯೆಗಳು
ಮಂಗಳವಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ, ಹಲವು ಪ್ರದೇಶಗಳು ಜಲಾವೃತವಾಗಿದೆ. ಜನರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬುಧವಾರವೂ ಬೆಂಗಳೂರಿನಲ್ಲಿ ಭಾರೀ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಂತುರು ಮಳೆ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಮಳೆಯಾಗುವ ಸಾಧ್ಯತೆ ಇದೆ. ಇಂದಿಗೂ, ಇಲ್ಲಿ ಗರಿಷ್ಠ ತಾಪಮಾನವು 32 ಡಿಗ್ರಿಗಳಷ್ಟು ಇದೆ. ಹಾಗಾಗಿ ಉತ್ತರಾಖಂಡ, ಹಿಮಾಚಲ ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗುಜರಾತ್-ರಾಜಸ್ಥಾನದಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ.
#WATCH | Karnataka: Severe water-logging in parts of Bengaluru amid incessant rainfall pic.twitter.com/hPJnsOUs3O
— ANI (@ANI) August 3, 2022
ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರ ಮತ್ತು ಮುಂದಿನ ಎರಡು ಗಂಟೆಗಳಲ್ಲಿ ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ, ಥೇಣಿ, ಈರೋಡ್, ನೀಲಗಿರಿ, ಧರ್ಮಪುರಿ, ಸೇಲಂ, ಕಡಲೂರು, ಧರ್ಮಪುರಿ, ತಿರುಚಿರಾಪಳ್ಳಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆ; ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಇಂದಿನಿಂದ ಮುಂದಿನ 24 ಗಂಟೆಗಳಲ್ಲಿ ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಉತ್ತರಾಖಂಡ ಮತ್ತು ಒಡಿಶಾ, ಛತ್ತೀಸ್ಗಢ, ಮಧ್ಯಪ್ರದೇಶ, ಗೋವಾ, ತಮಿಳುನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.
Recommended Video