Get Updates
Get notified of breaking news, exclusive insights, and must-see stories!

Bengaluru Second airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಭಾರೀ ಮುಖಭಂಗ, ಆಂಧ್ರಪ್ರದೇಶಕ್ಕೆ ಲಾಭ

Bengaluru Second airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಭಾರೀ ಹಿನ್ನಡೆ ಆಗಿದೆ. ಅದೇ ರೀತಿ ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಹಾಗೂ ಕರ್ನಾಟಕಕ್ಕೆ ಪೈಪೋಟಿ ನೀಡುವುದಕ್ಕೆ ಮುಂದೆ ಬಂದಿದ್ದ ತಮಿಳುನಾಡಿಗೂ ಮುಖಭಂಗವಾಗಿದೆ.

ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕನಸು ಕಾಣುತ್ತಿದ್ದ ತಮಿಳುನಾಡು ಸರ್ಕಾರಕ್ಕೆ ಭಾರೀ ಹಿನ್ನಡೆ ಆಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣೆಯು ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇರಿಸಲು ನಿರ್ಧರಿಸಿದೆ.

Bengaluru Second Airport Decision Brings Big Setback for Tamil Nadu Major Gain for Andhra Pradesh

ತಮಿಳುನಾಡಿನ ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವುದು ತಮಿಳುನಾಡು ಸರ್ಕಾರದ ಹಲವು ದಿನಗಳ ಕನಸಾಗಿದೆ. ಇದರಿಂದ ತಮಿಳುನಾಡಿನ ಕೈಗಾರಿಕೆಗೆ ಬೂಸ್ಟ್‌ ಸಿಗುವುದರೊಂದಿಗೆ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂವನ್ನು ಸಹ ಬಳಸಿಕೊಳ್ಳಬಹುದು ಎನ್ನುವ ಲೆಕ್ಕಾಚಾರದಲ್ಲಿ ತಮಿಳುನಾಡು ಇತ್ತು. ಆದರೆ ಈ ವಿಚಾರದಲ್ಲಿ ಭಾರೀ ಹಿನ್ನಡೆ ಆಗಿದೆ. ಇದೀಗ ಕರ್ನಾಟಕದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಹಾಗೂ ಹೊಸೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಕ್ರಿಯೆ ವಿಳಂಬವಾಗುತ್ತಿರುವುದರ ನಡುವೆಯೇ ನೆರೆಯ ಆಂಧ್ರಪ್ರದೇಶವು ಕುಪ್ಪಂನಲ್ಲಿ ತನ್ನದೇ ವಾಯುಯಾನ ಯೋಜನೆಗಳು ಚುರುಕು ಪಡೆದುಕೊಂಡಿವೆ.

ಈ ಮೂಲಕ ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಭಾರೀ ಪೈಪೋಟಿ ಎದುರಾಗಿತ್ತು. ಇದೀಗ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ ಎನ್ನುವಂತೆ ಆಂಧ್ರಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಗಳು ಚುರುಕು ಪಡೆದುಕೊಳ್ಳುತ್ತಿರುವುದು ವರದಿಯಾಗಿದೆ. ಕರ್ನಾಟಕ ಹಾಗೂ ತಮಿಳುನಾಡಿನ ನಷ್ಟವು ಆಂಧ್ರಪ್ರದೇಶಕ್ಕೆ ಲಾಭ ಮಾಡಿಕೊಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

ಸೋಮವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು ಅವರು ರಾಜ್ಯಸಭೆಯಲ್ಲಿ ಮಾತನಾಡಿದ್ದು, ಈ ಸಂದರ್ಭದಲ್ಲಿ ತಮಿಳುನಾಡು ಸರ್ಕಾರ ಕಳುಹಿಸಿರುವ ಹೊಸೂರು ವಿಮಾನ ನಿಲ್ದಾಣದ ಪ್ರಸ್ತಾವನೆಯನ್ನು ರಾಷ್ಟ್ರೀಯ ರಕ್ಷಣಾ ಆದ್ಯತೆಗಳನ್ನು ಉಲ್ಲೇಖಿಸಿ ಶಿಫಾರಸು ಮಾಡಿಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ದಿ ಹಿಂದೂ ವರದಿ ಮಾಡಿದೆ.

ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ತಮಿಳುನಾಡಿನ ಯೋಜನೆಯನ್ನು ಭದ್ರತಾ ಕಾರಣಗಳಿಗಾಗಿ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಆದರೆ ಆಂಧ್ರಪ್ರದೇಶ ಕುಪ್ಪಂನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೊಸೂರು ಯೋಜನೆಯು ಬೆಂಗಳೂರಿನ ಸಾಮೀಪದಲ್ಲಿರುವುದರಿಂದ ಕೈಗಾರಿಕಾವಾಗಿ ಪ್ರಮುಖವಾದ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಿಳಂಬವಾಗಿದೆ. ಅಲ್ಲದೇ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಭಾರೀ ಹಿನ್ನಡೆ ಆಗಿದೆ.

ಕೇಂದ್ರ ಸರ್ಕಾರದ ಪ್ರಕಾರ, ಹೊಸೂರಿನಲ್ಲಿ ನಾಗರಿಕ ವಿಮಾನ ಕಾರ್ಯಾಚರಣೆಗಳು ಪ್ರಸ್ತುತ ಕಾರ್ಯಸಾಧ್ಯವಿಲ್ಲ. ಏಕೆಂದರೆ ಈ ಪ್ರದೇಶವು HAL-ನಿಯಂತ್ರಿತ ವಾಯುಪ್ರದೇಶದ ಅಡಿಯಲ್ಲಿ ಬರುತ್ತದೆ. ಇದನ್ನು ಮಿಲಿಟರಿ ಕಾರ್ಯಾಚರಣೆಗಳು ಮತ್ತು ಪರೀಕ್ಷಾ ಹಾರಾಟಗಳಿಗೆ ವ್ಯಾಪಕವಾಗಿ ಬಳಸಲಾಗುತ್ತದೆ. ರಕ್ಷಣಾ ಸಚಿವಾಲಯವು ಹಲವು ಬಾರಿ ಈ ನಿಲುವನ್ನು ಪುನರುಚ್ಚರಿಸಿದೆ, ಇದು ತಮಿಳುನಾಡಿನ ಪ್ರಸ್ತಾವನೆಗೆ ಹೊಸ ಹೊಡೆತ ಕೊಟ್ಟಿದೆ.

ಹೊಸೂರು ವಿಮಾನ ನಿಲ್ದಾಣ ಹಿನ್ನೆಲೆ

ಇನ್ನು ತಮಿಳುನಾಡಿನ ಸರ್ಕಾರವು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭಾರೀ ಸರ್ಕಸ್ ನಡೆಸಿತ್ತು. ಹೊಸೂರು ವಿಮಾನ ನಿಲ್ದಾಣವನ್ನು ಬೆರಿಗೈ - ಬಾಗಲೂರು - ಶೂಲಗಿರಿ ಪ್ರದೇಶದಲ್ಲಿ ಸುಮಾರು 2,979 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಹೊಸೂರು ಮತ್ತು ಶೂಲಗಿರಿ ತಾಲ್ಲೂಕುಗಳ 12 ಹಳ್ಳಿಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. 500ಕ್ಕೂ ಹೆಚ್ಚು ದೊಡ್ಡ ಕೈಗಾರಿಕೆಗಳು ಮತ್ತು ಸುಮಾರು 3,000 MSME ಘಟಕಗಳನ್ನು ಹೊಂದಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ಕೇಂದ್ರ ಪ್ರದೇಶವಾದ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಉದ್ದೇಶಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+