Bengaluru Second Airport: ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿದ್ದ ತಮಿಳುನಾಡಿನಿಂದ ಬೆಂಗಳೂರು ಅಭಿವೃದ್ಧಿ ಜಪ!
ಬೆಂಗಳೂರು ಹಾಗೂ ಕರ್ನಾಟಕದ ವಿಚಾರದಲ್ಲಿ ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿಕೊಂಡು ಬಂದಿದ್ದ ತಮಿಳುನಾಡು ಇದೀಗ ವರಸೆ ಬದಲಾಯಿಸಿದೆ. ಬೆಂಗಳೂರು ಹಾಗೂ ಹೊಸೂರು ಎರಡೂ ನಗರಗಳ ಅಭಿವೃದ್ಧಿ ಆಗಲಿದೆ. ಹೀಗಾಗಿ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಹೇಳುತ್ತಿದೆ. ಇದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಯಾವುದೇ ಮಹತ್ವದ ಬದಲಾವಣೆ ಆಗುತ್ತಿಲ್ಲ. ಅಲ್ಲದೆ ಕೇಂದ್ರ ಸರ್ಕಾರವು ಸಹ 2033ರ ವರೆಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾರ್ಯ ಕಷ್ಟ ಎಂದು ಹೇಳಿದೆ. ಈ ರೀತಿ ಇರುವಾಗಲೇ ನೆರೆಯ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಲಾಬಿ ಮುಂದುವರಿಸಿದೆ.

ಸಿ.ಎಸ್.ಲಕ್ಷ್ಮಿಶಾ ಅವರು, ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿಕೊಂಡು ಬಂದ ತಮಿಳುನಾಡಿಗೆ ಇದ್ದಕ್ಕಿದ್ದಂತೆ ಬೆಂಗಳೂರು ಮತ್ತು ಹೊಸೂರು ಎರಡನ್ನೂ ಒಟ್ಟಿಗೆ ಬೆಳೆಸುವ ಕಾಳಜಿ ಬಂದುಬಿಟ್ಟಿದೆ. ಅದಕ್ಕಾಗಿ ಹೊಸೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕಂತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಎಂ.ಬಿ ಪಾಟೀಲ್ ಅವ ಬೇಗನೇ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮರುಜೀವ ನೀಡಿ, ನೆಲಮಂಗಲ ಪ್ರದೇಶದಲ್ಲಿ ಇನ್ನೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಬೇಕು ಎಂದಿದ್ದಾರೆ. ಇದಕ್ಕೆ ಹಲವು ಕನ್ನಡಿಗರು ದನಿಗೂಡಿಸಿದ್ದಾರೆ.
ತಮಿಳುನಾಡು ಸರ್ಕಸ್
ಇನ್ನು ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ತಮಿಳುನಾಡು ಸರ್ಕಾರವು ಮುಂದಾಗಿತ್ತು. ಅಲ್ಲದೆ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಹೊಸೂರು ಕೈಗಾರಿಕಾ ಪ್ರದೇಶಕ್ಕೆ ಅನುಕೂಲವಾಗಲಿದೆ. ಅಲ್ಲದೆ ಬೆಂಗಳೂರಿನ ಬ್ರ್ಯಾಂಡ್ ಬಳಸಿಕೊಳ್ಳಬಹುದು ಎನ್ನುವುದು ಸಹ ಇದರ ಲೆಕ್ಕಾಚಾರವಾಗಿತ್ತು. ಆದರೆ ವಾಯುಪ್ರದೇಶದ ದೃಷ್ಟಿಯಿಂದ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟವಾಗಿ ಹೇಳಿದೆ. ಆದರೆ ತಮಿಳುನಾಡು ಸರ್ಕಸ್ ಮುಂದುವರಿಸಿದೆ.
ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಕನ್ನಡಿಗರು ಹೇಳಿದ್ದೇನು
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಕರ್ನಾಟಕ ಸರ್ಕಾರ ಪ್ರಯತ್ನಿಸಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ. ಅಲ್ಲದೆ Oneindia Kannada ಬರಹವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಚರ್ಚೆ ನಡೆದಿದೆ. ಇನ್ನು ಕೆಲವರು ಬೆಂಗಳೂರಿನಲ್ಲೇ ಯಾಕೆ, ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮಸ್ಯೆಯಾದರೆ ಕರ್ನಾಟಕದ ಬೇರೆ ಜಾಗದಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಆಗ್ರಹವೂ ಕೇಳಿ ಬಂದಿದೆ.
ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿಕೊಂಡು ಬಂದ ತಮಿಳುನಾಡಿಗೆ ಇದ್ದಕ್ಕಿದ್ದಂತೆ ಬೆಂಗಳೂರು ಮತ್ತು ಹೊಸೂರು ಎರಡನ್ನೂ ಒಟ್ಟಿಗೆ ಬೆಳೆಸುವ ಕಾಳಜಿ ಬಂದುಬಿಟ್ಟಿದೆ. ಅದಕ್ಕಾಗಿ ಹೊಸೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕಂತೆ. @siddaramaiah @MBPatil ಅವರು ಬೇಗನೇ ಹೆಚ್ಎಎಲ್ ವಿಮಾನನಿಲ್ದಾಣಕ್ಕೆ ಮರುಜೀವ ನೀಡಿ, ನೆಲಮಂಗಲ…
— CSLakshmeesha (@LakshmeeshaCS) February 17, 2026
ಪ್ರಶಾಂತ್ ಕುಮಾರ್ ಎನ್ನುವವರು, ಹುಬ್ಬಳ್ಳಿಯಲ್ಲಿ ಅಥವಾ ಮಧ್ಯ ಕರ್ನಾಟಕದ ದಾವಣಗೆರೆಯಲ್ಲೋ ಏಕೆ ರಾಜ್ಯದ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬರಬಾರದು, ಎಲ್ಲವೂ ಬೆಂಗಳೂರಿನ ಸುತ್ತ ಮುತ್ತ ಏಕೆ ಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಸತತವಾಗಿ ಅಧಿಕಾರಕ್ಕೆ ಬಂದ ಸರ್ಕಾರಗಳು ಬೆಂಗಳೂರು ಕೇಂದ್ರಿತ ಅಭಿವೃದ್ಧಿಯನ್ನೇ ಬಯಸುತ್ತಿವೆ, ಈ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಒಪ್ಪಬೇಕು. ರಾಮನಗರ, ಕನಕಪುರ ಇವರ ಕಾಲದಲ್ಲಿ ಅಭಿವೃದ್ಧಿ ಕಾಣುತ್ತಿವೆ. ಕರ್ನಾಟಕ ಸರ್ವತೋಮುಖವಾಗಿ ಅಭಿವೃದ್ಧಿ ಆಗಬೇಕು. ಬೆಂಗಳೂರು ಕರ್ನಾಟಕವಲ್ಲಾ, ಉತ್ತರ ಕರ್ನಾಟಕ ಬೆಳೆಯಲಿ ಎಂದೂ ಕೆಲವು ನೆಟ್ಟಿಗರು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ













Click it and Unblock the Notifications