Bengaluru Second Airport: ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ತಮಿಳುನಾಡು ಟಕ್ಕರ್: ಹೊಸೂರು ವಿಮಾನ ನಿಲ್ದಾಣಕ್ಕೆ ಜಾಗ ಫೈನಲ್
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕ್ರಿಯೆಯು ವಿಳಂಬವಾಗುತ್ತಲ್ಲೇ ಇದೆ. ನಾಲ್ಕು ಜಾಗಗಳನ್ನು ಕೇಂದ್ರ ಅಧ್ಯಯನ ತಂಡವು ಬಂದು ಪರಿಶೀಲನೆ ಮಾಡಿ ಮೂರು ತಿಂಗಳುಗಳೇ ಕಳೆದರೂ ಇನ್ನೂ ಇಲ್ಲಿಯ ವರೆಗೆ ಅಧ್ಯಯನ ವರದಿ ಸಲ್ಲಿಕೆ ಮಾಡಿಲ್ಲ. ಆದರೆ, ತಮಿಳುನಾಡಿನ ಹೊಸೂರಿನಲ್ಲಿ ಎರಡೂ ಜಾಗಗಳನ್ನೂ ಕೇಂದ್ರ ತಂಡ ಫೈನಲ್ ಮಾಡಿದೆ. ಇದೀಗ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಬೆಂಗಳೂರಿಗೆ ಟಕ್ಕರ್ ಕೊಡುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ.
ಬೆಂಗಳೂರು ಅಭಿವೃದ್ಧಿ ಆಗುತ್ತಿದ್ದಂತೆಯೇ ನೆರೆಯ ರಾಜ್ಯಗಳ ಕಣ್ಣು ನಮ್ಮ ಮೇಲೆ ಬಿದ್ದಿದೆ. ಇಲ್ಲಿನ ಹೂಡಿಕೆ ಹಾಗೂ ಲಾಭಗಳ ಮೇಲೆ ನೆರೆಯ ರಾಜ್ಯಗಳು ಸಹ ಕಣ್ಣಿಟ್ಟಿವೆ. ಇದೊಂದು ರೀತಿ ಉದ್ಯಮ ಪೈಪೋಟಿ ಮಾದರಿಯೇ ಆಗಿದೆ. ಸ್ಪರ್ಧಾತ್ಮಕವಾದ ಪೈಪೋಟಿ ಕರ್ನಾಟಕ ಹಾಗೂ ಉಳಿದ ರಾಜ್ಯಗಳೊಂದಿಗೆ ಇದೆ. ಬೆಂಗಳೂರಿನಿಂದ ಕೆಲವೇ ಕಿ. ಮೀ ದೂರದಲ್ಲಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ. ಇದರ ಹಿಂದೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಹಾಗೂ ಸರಕು - ಸಾಗಾಣಿಕೆಯನ್ನು ಸೆಳೆಯುವ ಪ್ಲ್ಯಾನ್ ಸಹ ಇದೆ.

ಇದೀಗ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದ ಎರಡೂ ಜಾಗಗಳನ್ನೂ ಕೇಂದ್ರ ತಂಡ ಅನುಮತಿ ನೀಡಿದ್ದು. ಈ ಎರಡೂ ಜಾಗದಲ್ಲೂ ವಿಮಾನ ನಿಲ್ದಾಣ ನಿರ್ಮಾಣ ಮಾಡಬಹುದು ಎಂದು ಪ್ರಸ್ತಾವನೆ ಸಲ್ಲಿಸಿದೆ. ಇದು ಕರ್ನಾಟಕಕ್ಕೆ ಭಾರೀ ಹಿನ್ನಡೆ ಅಂತಲೇ ವಿಶ್ಲೇಷಿಸಲಾಗುತ್ತಿದೆ.
ಇದಕ್ಕೆ ಮುಖ್ಯ ಕಾರಣ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇನ್ನೂ ಜಾಗ ಅಂತಿಮವಾಗಿಲ್ಲ. ಪ್ರಾಥಮಿಕ ಹಂತದ ಪ್ರಕ್ರಿಯೆಗಳೇ ಪೂರ್ಣಗೊಂಡಿಲ್ಲ. ಆದರೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿದೆ.
ಹೊಸೂರು ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಪ್ರಾರಂಭವಾಗಿದೆ. ಗ್ರೀನ್ಫೀಲ್ಡ್ ಯೋಜನೆಗೆ ಎರಡೂ ಜಾಗಗಳೂ ಸೂಕ್ತವಾಗಿವೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ತಂಡ ವರದಿ ನೀಡಿದೆ.
ಹೊಸೂರಿನ ತನೇಜಾ ಏರೋಸ್ಪೇಸ್ ಹಾಗೂ ಏವಿಯೇಷನ್ ಲಿಮಿಟೆಡ್ (TAAL) ಒಡೆತನದ ಖಾಸಗಿ ವಿಮಾನ ನಿಲ್ದಾಣದ ಸಮೀಪದ ಗ್ರಾಮಗಳು ಮತ್ತು ಹೊಸೂರು ಬಳಿಯ ನೀಲಗಿರಿಯ ಉತ್ತರದ ಸ್ಥಳ ಆಯ್ಕೆಯಾಗಿವೆ. ಈ ಸಂಬಂಧ ಅಂತಿಮ ನಿರ್ಧಾರಕ್ಕಾಗಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ. ಅಲ್ಲಿನ ಸರ್ಕಾರವು ಒಂದು ತಿಂಗಳೊಳಗೆ ಸ್ಥಳವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ಇನ್ನು ಮುಖ್ಯವಾಗಿ ವಿಮಾನ ನಿಲ್ದಾಣವು ತಮಿಳುನಾಡಿನಲ್ಲಿ ಮುಂಬರುವ ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ (STRR) ಸಮೀಪದಲ್ಲೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಈ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಭಿವೃದ್ಧಿಪಡಿಸುತ್ತಿದೆ. ಈ ಯೋಜನೆಯು ಬೆಂಗಳೂರು ಹಾಗೂ ನೆರೆಯ ಪ್ರಮುಖ ಪ್ರದೇಶಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಹೇಳಲಾಗಿದೆ. ಈ ರೀತಿ ತಮಿಳುನಾಡು ಹೊಸೂರು ವಿಮಾನ ನಿಲ್ದಾಣದ ವಿಚಾರದಲ್ಲಿ ವೇಗವಾಗಿ ಯೋಜನೆ ರೂಪಿಸಿಕೊಳ್ಳುತ್ತಿದೆ. ಆದರೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಾಥಮಿಕ ಹಂತದ ಪ್ರಕ್ರಿಯೆಗಳಲ್ಲೇ ವಿಳಂಬವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications