Air India: ಬೆಂಗಳೂರು-ಸಿಂಗಾಪುರಗೆ ತಡೆ ರಹಿತ ಕಾರ್ಯಾಚರಣೆ, ಯಾವಾಗ, ಸಮಯ, ಟಿಕೆಟ್ ಬುಕ್ಕಿಂಗ್ ಬಗ್ಗೆ ತಿಳಿಯಿರಿ
ಬೆಂಗಳೂರು, ಅಕ್ಟೋಬರ್ 24: ವಿಮಾನಯಾನ ಪ್ರಯಾಣಿಕರಿಗೆ ಏರ್ ಇಂಡಿಯಾ (Air India) ತಡೆ ರಹಿತ ವಿಮಾನ ಸೇವೆ ನೀಡುವ ಮೂಲಕ ಸಂತಸದ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಸಿಂಗಾಪುರ ದೇಶಕ್ಕೆ ನೇರ ಸಂಪರ್ಕ ಹೊಂದಿರುವ ಏರ್ ಇಂಡಿಯಾವು ತಡೆರಹಿತ ಸೇವೆ ನೀಡಲು ಸಜ್ಜಾಗಿದೆ.
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಬೆಂಗಳೂರಿನಿಂದ ಸಿಂಗಾಪುರಗೆ ತಡೆರಸಹಿ ನೇರ ಸೇವೆ ನೀಡಲು ಹೊಸ ವಿಮಾನ (AI392) ಕಾರ್ಯಾಚರಣೆ ಆರಂಭಿಸಿದೆ. ಈ ವಿಮಾನವು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ದಿಂದ ರಾತ್ರಿ 10.30ಕ್ಕೆ ಹೊರಟು ಮರುದಿನ ನಸುಕಿನ ಜಾವ ಸಿಂಗಾಪುರ ತಲುಪಲಿದೆ.

ಈ ನೇರ ಸಂಪರ್ಕ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದರಿಂದ ಸಮಯವು ಉಳಿತಾಯವಾಗಲಿದೆ. ಇನ್ನೂ ಸಿಂಗಾಪುರದಿಂದ ಟರ್ನ್ ಏರ್ ಇಂಡಿಯಾ ವಿಮಾನ (AI393) ಬೆಳಗ್ಗೆ ಬೆಳಗ್ಗೆ 6.40ಕ್ಕೆ ಹೊರಟು ರಾತ್ರಿ 8 ಗಂಟೆ ಸುಮಾರಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಯಾವ ದಿನ ವಿಮಾನ ಹಾರಾಟ
ಪ್ರಯಾಣಿಕರಿಗೆ ಈ ಏರ್ ಇಂಡಿಯಾ ವಿಮಾನವು 170 ಎಕಾನಮಿ ಸೀಟು, 12 ಐಷಾರಾಮಿ ಬಿಸಿನೆಸ್ ಕ್ಲಾಸ್ ಸೀಟುಗಳ ವ್ಯವಸ್ಥೆ ಒದಗಿಸಿದೆ. ಬೆಂಗಳೂರು-ಸಿಂಗಾಪುರ ಏರ್ ಇಂಡಿಯಾವು ಸೋಮವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಕಾರ್ಯಾಚರಣೆ ನಡೆಸಲಿದೆ.

ಮುಂಬರುವ ದಿನಗಳಲ್ಲಿ ಈ ಏರ್ ಇಂಡಿಯಾ ನೇರ ಸಂಪರ್ಕ ಸೇವೆ ಪ್ರತಿ ದಿನವು ಲಭ್ಯವಾಗಲಿದೆ. ಆದರೆ ಯಾವಾಗಿನಿಂದ ಆರಂಭ ಎಂಬುದರ ಬಗ್ಗೆ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ. ಸಂಸ್ಥೆಯ ಈ ತೀರ್ಮಾನದಿಂದ ಎರಡು ನಗರಗಳ ಪ್ರವಾಸೋದ್ಯಮ ಹಾಗೂ ವ್ಯಾಪಾರ ಹೆಚ್ಚುವ ನಿರೀಕ್ಷೆ ಇದೆ.
ವಿವಿಧೆಡೆಯಿಂದ ವಿಮಾನ ಸೇವೆ
ಮುಂದಿನ ಭಾನುವಾರದಿಂದ ಮುಂಬೈನಿಂದ ಸಿಂಗಾಪುರಕ್ಕೆ ವಾರಕ್ಕೆ ಏಳು ದಿನವೂ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಏರ್ ಇಂಡಿಯಾ ಘೋಷಿಸಿದೆ. ಸದ್ಯ ದೇಶದಲ್ಲಿ ಏರ್ ಇಂಡಿಯಾ ವಿಮಾನಗಳ ಪೈಕಿ ದೆಹಲಿಯಿಂದ- 14 ವಿಮಾನಗಳು, ಮುಂಬೈನಿಂದ -13, ಚೆನ್ನೈನಿಂದ -7 ಮತ್ತು ಬೆಂಗಳೂರಿಂದ - 4 ವಿಮಾನಗಳು ಸಿಂಗಾಪುರಕ್ಕೆ ತಡೆ ರಹಿತ ಸೇವೆ ನೀಡುತ್ತಿವೆ.
ಬೆಂಗಳೂರು- ಸಿಂಗಾಪುರ್ ಅಥವಾ ಬೇರೆಡೆಯಿಂದ ಸಿಂಗಾಪುರಗ ಏರ್ ಇಂಡಿಯಾ ವೆಬ್ಸೈಟ್ www.airindia.com ವೆಬ್ಸೈಟ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಲಾಗುವುದು ಎಂದು ಟವಿ ನೈನ್ ಕನ್ನಡ ವರದಿ ಮಾಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications