ಮಾಜಿ ಪ್ರಿಯಕರನ ಒಲಿಸಿಕೊಳ್ಳಲು 'ಮಾಟ ಮಂತ್ರ'ದ ಮೊರೆ ಹೋಗಿ ₹8.2 ಲಕ್ಷ ಕಳೆದುಕೊಂಡ ಮಹಿಳೆ
ಬೆಂಗಳೂರಿನ 25 ವರ್ಷದ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನೊಂದಿಗೆ ರಾಜಿ ಮಾಡಿಕೊಳ್ಳಲು ಮತ್ತು ಇಬ್ಬರ ಸಂಬಂಧವನ್ನು ಒಪ್ಪಿಕೊಳ್ಳುವಂತೆ ಪೋಷಕರಿಗೆ ಸಹಾಯ ಮಾಡಲು ಮಾಟಮಂತ್ರದ ಮೊರೆ ಹೋಗಿದ್ದು ಬರೋಬ್ಬರಿ 8.2 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜಾಲಹಳ್ಳಿಯ ನಿವಾಸಿ ಫಾತಿಮಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆ ಪೊಲೀಸರಿಗೆ ತಿಳಿಸಿದ್ದು, ಇತ್ತೀಚೆಗೆ ತನ್ನ ಗೆಳೆಯನೊಂದಿಗೆ ಇರಲು ಬಯಸಿದ್ದರೂ ಸಹ ಸಂಬಂಧ ಮುರಿದುಬಿದ್ದಿದ್ದರಿಂದ ವಿಚಲಿತರಾಗಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋಸ ಹೋದ ಮಹಿಳೆ ಅನೇಕ ವೈಯಕ್ತಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆದ್ದರಿಂದ ಆಕೆ ಇಂಟರ್ನೆಟ್ನಲ್ಲಿ ಜ್ಯೋತಿಷಿಗಾಗಿ ಹುಡುಕಾಟ ನಡೆಸಿದ್ದರು. ಡಿಸೆಂಬರ್ 9 ರಂದು ಅಹ್ಮದ್ ಮತ್ತು ಅವನ ಸಹಚರರಾದ ಅಬ್ದುಲ್ ಮತ್ತು ಲಿಯಾಖತುಲ್ಲಾ ಎನ್ನುವವರ ಪರಿಚಯವಾಗಿದೆ.
ಮಾಟ ಮಾಂತ್ರ ನೆಪದಲ್ಲಿ ವಂಚನೆ
ಯಾರೋ ಅವಳ ಸ್ನೇಹಿತ ಮತ್ತು ಅವಳ ಕುಟುಂಬ ಸದಸ್ಯರ ಮೇಲೆ ಜೀವನದಲ್ಲಿ ಸಮಸ್ಯೆಗಳಿಗೆ ಕಾರಣವಾಗುವಂತೆ ಮಾಟಮಂತ್ರ ಮಾಡಿದ್ದಾರೆ ಎಂದು ಅಹ್ಮದ್ ಮಹಿಳೆಗೆ ನಂಬಿಸಿದ್ದಾರೆ. ಅದರಿಂದ ಆಕೆಯನ್ನು ಮುಕ್ತಗೊಳಿಸಲು ಕೆಲವು ಕಾರ್ಯವಿಧಾನಗಳನ್ನು ಮಾಡಬೇಕು ಎಂದು ಕೇಳಿದ್ದಾರೆ. ಅದಕ್ಕಾಗಿ 501 ರೂ.ಗಳನ್ನು ಕೇಳಿದ್ದಾರೆ, ಫಾತಿಮಾ 500 ರೂಪಾಯಿಯನ್ನು ಡಿಜಿಟಲ್ ವರ್ಗಾವಣೆ ಮಾಡಿದ ನಂತರ, ಅಹ್ಮದ್ ಅವಳ, ಅವಳ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಫೋಟೋಗಳನ್ನು ಕೇಳಿದ್ದಾರೆ.
ಅಷ್ಟಕ್ಕೆ ಸುಮ್ಮನಾಗದೆ ಫಾತಿಮಾ ಮತ್ತು ಆಕೆಯ ಮಾಜಿ ಗೆಳೆಯನ ನಡುವಿನ ಸಂಬಂಧವನ್ನು ಪೋಷಕರು ವಿರೋಧಸಿದೇ ಇರಲು ಹಲವು ಮಾಟ, ಮಂತ್ರಗಳನ್ನು ಮಾಡಬೇಕು ಎಂದು ಹೇಳಿದ್ದು ಅದಕ್ಕಾಗಿ 2.4 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಫಾತಿಮಾ ಒಪ್ಪಿಕೊಂಡರು ಮತ್ತು ಡಿಸೆಂಬರ್ 22 ರಂದು ಅಹ್ಮದ್ ಅವರ ಸಹಚರರಿಗೆ ಒಂದೆರಡು ದಿನಗಳ ನಂತರ 1.7 ಲಕ್ಷ ರೂ.ಹಣವನ್ನು ನಗದು ರೂಪದಲ್ಲಿ ಪಾವತಿಸಿದ್ದಾರೆ ಎಂದು ವರದಿಯಾಗಿದೆ.
ಫಾತಿಮಾಗೆ ಅನುಮಾನ ಬರುವವರೆಗೂ ಇದೇ ರೀತಿ ಹಣ ನೀಡುವುದನ್ನು ಮುಂದುವರೆಸಿದ್ದಾರೆ. ಆದರೆ ಬಳಿಕ ಅನುಮಾನ ಬಂದು ಹಣ ಕೊಡಲು ನಿರಾಕರಿಸಿದ್ದಾರೆ. ಆದರೆ ಅಹ್ಮದ್ ಆಕೆಗೆ ನಿಂದಿಸಿದ್ದು, ಆಕೆಯ ಮಾಜಿ ಗೆಳೆಯನ ಜೊತೆಗಿನ ಫೋಟೋಗಳನ್ನು ಆಕೆಯ ಪೋಷಕರಿಗೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಜನವರಿ 10 ರವರೆಗೆ ಬಹು ಡಿಜಿಟಲ್ ವಹಿವಾಟುಗಳಲ್ಲಿ 4.1 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.
ಸ್ವಲ್ಪ ಸಮಯದ ನಂತರ, ಆಕೆಯ ಪೋಷಕರು ಘಟನೆಯ ಬಗ್ಗೆ ತಿಳಿದುಕೊಂಡು ಪೊಲೀಸರನ್ನು ಸಂಪರ್ಕಿಸುವಂತೆ ಒತ್ತಾಯಿಸಿದರು. ನಂತರ ಜಾಲಹಳ್ಳಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದರು. ತನಿಖೆಯ ವೇಳೆ ಅಹ್ಮದ್ ಸಹಚರ ಲಿಯಾಖತುಲ್ಲಾ ಖಾತೆಗೆ ಹಣ ವರ್ಗಾವಣೆಯಾಗಿರುವುದು ಪೊಲೀಸರಿಗೆ ಪತ್ತೆಯಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications