ಕೋಲಾರದ ಕರ್ಮಚಾರಿಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ
ನವದೆಹಲಿ, ಜುಲೈ, 27: ಕರ್ನಾಟಕದ ಒಬ್ಬರು ಸೇರಿದಂತೆ ಭಾರತದ ಇಬ್ಬರು ಸಾಧಕರಿಗೆ 2016ನೇ ಸಾಲಿನ ಪ್ರತಿಷ್ಠಿತ ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿ ಸಂದಿದೆ. ಸಾಮಾಜಿಕ ಕಾರ್ಯಕರ್ತ ಕರ್ನಾಟಕದ ಬೇಜವಾಡಾ ವಿಲ್ಸನ್, ಸಂಗೀತ ಸಾಧಕ ಟಿ ಎಂ ಕೃಷ್ಣ ಗೌರವಕ್ಕೆ ಪಾತ್ರರಾಗಿದ್ದಾರೆ.
ಕರ್ನಾಟದಕದ ಕೋಲಾರದ ಸಾಧಕ:
ಬೇಜವಾಡಾ ವಿಲ್ಸನ್ ಕರ್ನಾಟಕದ ಕೋಲಾರದ ದಲಿತ ಕುಟುಂಬದಲ್ಲಿ 1966ರಲ್ಲಿ ಜನಿಸಿದವರು. ಸಫಾಯಿ ಕರ್ಮಚಾರಿಗಳ ಪರವಾಗಿ ಆಂದೋಲನದಲ್ಲಿ ತೊಡಗಿಕೊಂಡು ಅವರ ಹಕ್ಕುಗಳಿಗೆ ಹೋರಾಟ ಮಾಡುತ್ತ ಬಂದಿದ್ದಾರೆ. [ಕನ್ನಡಿಗ ಹರೀಶ್ ಹಂದೆಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ]

ಆಂಧ್ರಪ್ರದೇಶವನ್ನು ತಮ್ಮ ಕಾರ್ಯಕ್ಷೇತ್ರ ಮಾಡುಕೊಂಡ ವಿಲ್ಸನ್ ಇಡೀ ದೇಶಾದ್ಯಂತ ಸಫಾಯಿ ಕರ್ಮಚಾರಿಗಳ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ.
ಟಿಎಂ ಕೃಷ್ಣ ಅವರು ಚೆನ್ನೈಅನ್ನು ತಮ್ಮ ಕಾರ್ಯಕ್ಷೇತ್ರ ಮಾಡಿಕೊಂಡವರು. ಕರ್ನಾಟಕ ಸಂಗೀತದಲ್ಲಿ ಸಾಧನೆ ಮಾಡಿರುವ ಕೃಷ್ಣ ಅವರಿಗೂ ಗೌರವ ಸಂದಿದೆ. ವಿವಿಧ ವಿಶ್ವವಿದ್ಯಾಲಯಗಳಿಗೆ ತೆರಳುವ ಕೃಷ್ಣ ಸಂಗೀತ ಸಾಧನೆ ಬಗ್ಗೆ ಉಪನ್ಯಾಸ ನೀಡುತ್ತಾರೆ. ಮದ್ರಾಸ್ ಮ್ಯೂಸಿಕ್ ಸ್ಕೂಲ್ ಮೂಲಕ ನೂರಾರು ಜನರಿಗೆ ಸಂಗೀತ ತರಬೇತಿ ಹೇಳಿಕೊಡುತ್ತಿದ್ದಾರೆ. [ಭಾರತದ ಇಬ್ಬರು ಸಾಧಕರಿಗೆ ಮ್ಯಾಗ್ಸೆಸ್ಸೆ ಪುರಸ್ಕಾರ]

ಮ್ಯಾಗ್ಸೆಸೆ ಪಡೆದ ಇತರ ಕನ್ನಡಿಗರು : ಕರ್ನಾಟಕದ ಹರೀಶ್ ಹಂದೆ (2011), ಆರ್ ಕೆ ಲಕ್ಷ್ಮಣ (1984), ಕೆ ವಿ ಸುಬ್ಬಣ್ಣ (1991) ಅವರಿಗೂ ಮ್ಯಾಗ್ಸೆಸೆ ಪ್ರಶಸ್ತಿ ಸಂದಿತ್ತು. ಇದೀಗ ಈ ಸಾಧಕರ ಸಾಲಿಗೆ ಬೇಜವಾಡಾ ವಿಲ್ಸನ್ ಸಹ ಸೇರಿಕೊಂಡಿದ್ದಾರೆ.
ಪ್ರಶಸ್ತಿಯ ಬಗ್ಗೆ
ರಾಮೋನ್ ಮ್ಯಾಗ್ಸೆಸ್ಸೆ ಪ್ರಶಸ್ತಿಯನ್ನು 1957 ರಲ್ಲಿ ಸ್ಥಾಪನೆ ಮಾಡಲಾಯಿತು. ಫಿಲಿಪ್ಪೀನ್ಸ್ ಸರ್ಕಾರದ ಅನುಮತಿಯೊಂದಿಗೆ ಈ ಪ್ರಶಸ್ತಿಗೆ ರಾಮೋನ್ ಮ್ಯಾಗ್ಸೆಸ್ಸೆ ಇವರ ಹೆಸರನ್ನಿಡಲು ನಿರ್ಧರಿಸಲಾಯಿತು. ಫಿಲಿಪೈನ್ಸ್ ನ ಅಧ್ಯಕ್ಷರಾಗಿದ್ದ ರಾಮೋನ್ ಮ್ಯಾಗ್ಸೆಸೆ ಇವರ ಗಣತಂತ್ರ ವ್ಯವಸ್ಥೆಯಲ್ಲಿ ತಂದ ಬದಲಾವಣೆಗಳ ಆಧಾರವನ್ನಿಟ್ಟುಕೊಂಡು ಪ್ರಶಸ್ತಿಗೆ ಅವರ ಹೆಸರನ್ನು ಇಡಲಾಯಿತು. ಇದನ್ನು ಏಷ್ಯಾ ಖಂಡದ ನೊಬೆಲ್ ಪ್ರಶಸ್ತಿಯೆಂದು ಪರಿಗಣಿಸಲಾಗುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications