ಕ್ರಾಂತಿಕಿಡಿ ಭಗತ್ ಸಿಂಗ್ ಹುಟ್ಟು ಹಬ್ಬ ನೆನಪಿಸಿಕೊಂಡ ಟ್ವಿಟ್ಟಿಗರು
ನವದೆಹಲಿ ಸೆಪ್ಟೆಂಬರ್ 28: ಕ್ರಾಂತಿಕಾರಿ ಹೋರಾಟಗಾರ ಎಂದರೆ ಥಟ್ಟಂಥ ನೆನಪಾಗುವ ಹೆಸರು ಭಗತ್ ಸಿಂಗ್! 1907 ಸೆಪ್ಟೆಂಬರ್ 28 ರಂದು ಜನಿಸಿದ ಭಗತ್ ಸಿಂಗ್ ಬದುಕಿದ್ದು ಕೇವಲ 24 ವರ್ಷವಾದರೂ ಶತಮಾನದ ನಂತರೂ ಅವರು ಭಾರತೀಯ ಯುವಜನಾಂಗದ ಸ್ಫೂರ್ತಿ ಚಿಲುಮೆಯಾಗಿ ನೆನಪಿನಲ್ಲುಳಿದಿದ್ದಾರೆ. ಉಳಿಯುತ್ತಾರೆ ಕೂಡ.
ಇಂದು ಅವರ 110 ನೇ ಜನ್ಮದಿನ. ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಭಾಷ್ಯ ಬರೆದ ಭಗತ್ ಸಿಂಗ್ ಅವರನ್ನು ದೇಶದ ಹಲವು ಗಣ್ಯರು ನೆನಪಿಸಿಕೊಂಡಿದ್ದಾರೆ. ಭಗತ್ ಸಿಂಗ್ ಆದರ್ಶವನ್ನು ಪ್ರತಿ ಭಾರತೀಯರೂ ಪಾಲಿಸುವಂತಾಗಲಿ ಎಂದು ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸಹ ಭಗತ್ ಸಿಂಗ್ ಅವರ ಶೌರ್ಯ ಭಾರತೀಯ ಯುವಪೀಳಿಗೆಗೆ ಸ್ಫೂರ್ತಿ ಎಂದು ಟ್ವೀಟ್ ಮಾಡಿದ್ದಾರೆ.
|
ಭಗತ್ ಸಿಂಗ್ ಶೌರ್ಯ ಸ್ಫೂರ್ತಿಯಾಗಲಿ.
"ನಾನು, ವೀರ ಹುತಾತ್ಮ ಭಗತ್ ಸಿಂಗ್ ಅವರ ಜಯಂತಿಯಂದು ಅವರಿಗೆ ತಲೆ ಬಾಗುತ್ತೇನೆ. ಅವರ ಶ್ರೇಷ್ಠತೆ ಮತ್ತು ಅಪ್ರತಿಮ ಶೌರ್ಯ ಭಾರತೀಯ ಪೀಳಿಗೆಗಳಿಗೆ ಸ್ಫೂರ್ತಿಯಾಗಿದೆ", ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
|
ನಮನಗಳು
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹುತಾತ್ಮ ಭಗತ್ ಸಿಂಗ್ ಅವರಿಗೆ, ಜನ್ಮದಿನದಂದು ನಮ್ಮ ನಮನಗಳು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಅವರ ತ್ಯಾಗ ಮರೆಯುವುದಕ್ಕೆ ಸಾಧ್ಯವಿಲ್ಲ
ಕ್ರಾಂತಿಕಾರಿ ಭಗತ್ ಸಿಂಗ್ ಅವರಿಗೆ ನಮ್ಮ ನಮನಗಳು. ಅವರ ಮಹಾನ್ ತ್ಯಾಗವನ್ನು ಜಗತ್ತು ಎಂದಿಗೂ ಮರೆಯುವುದಿಲ್ಲ ಎಂದು ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಟ್ವೀಟ್ ಮಾಡಿದ್ದಾರೆ.
|
ಅನುಪಮ್ ಖೇರ್
ಭಗತ್ ಸಿಂಗ್ ಅವರಿಗೆ ಅವರ ಜನ್ಮ ದಿನದಂದು ನನ್ನ ಸೆಲ್ಯೂಟ್! ಜಗತ್ತಿನ ತುಂಬೆಲ್ಲ ಇರುವ ಭಾರತೀಯರಿಗೆ ಅವರ ಋಣತೀರಿಸುವುದಕ್ಕೆ ಇಂದಿಗೂ ಸಾಧ್ಯವಾಗಿಲ್ಲ.
|
ಜನ್ಮಭೂಮಿಗಾಗಿ ತ್ಯಾಗ ಮಾಡಿದ ಭಗತ್ ಸಿಂಗ್
ತಮ್ಮ ಜನ್ಮಭೂಮಿಗಾಗಿ ಮಹಾನ್ ತ್ಯಾಗ ಮಾಡಿದ ಭಗತ್ ಸಿಂಗ್ ಅವರಿಗೆ ಅವರ ಜನ್ಮದಿನದಂದು ನಮನಗಳು ಎಂದು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಟ್ವೀಟ್ ಮಾಡಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications