ಬೆಂಗಳೂರಿನಲ್ಲಿ ಭಗತ್ ಕನಸಿನ ಭಾರತ ಬಿಚ್ಚಿಟ್ಟ ಮೊಮ್ಮಗ
ಬೆಂಗಳೂರು, ಅಕ್ಟೋಬರ್. 27: ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡಲು ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಸಿದ್ಧಾಂತಗಳಿಂದ ಮಾತ್ರ ಸಾಧ್ಯ ಎಂದು ಭಗತ್ ಸಿಂಗ್ ಅಣ್ಣನ ಮೊಮ್ಮಗ ಅಭಿತೇಜ್ ಸಿಂಗ್ ಹೇಳಿದರು.
ಪತ್ರಕರ್ತರ ಅಧ್ಯಯನ ಕೇಂದ್ರದ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿ ಅನೇಕ ಹೊಸ ಹೊಸ ವಿಚಾರಗಳನ್ನು ತೆರೆದಿಟ್ಟರು. ಭಗತ್ ಸಿಂಗ್ ಕನಸಿನ ಭಾರತ ಹೇಗಿರಬೇಕು ಎಂಬುದರ ಬಗ್ಗೆಯೂ ತಮ್ಮ ವಿಚಾರಗಳನ್ನು ಹೇಳಿದರು.[ಭಗತ್ ಸಿಂಗ್ ಜನ್ಮ ಸ್ಥಳ ಕಾಪಾಡುತ್ತೇವೆ]
ಸಾಹಿತಿ ಎಂ ಎಂ ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಖೇದ ವ್ಯಕ್ತಪಡಿಸಿದ ಸಿಂಗ್ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣದಂಥ ಪ್ರಕರಣ ಹೆಚಚ್ಚಿರುವುದು ದುರ್ದೈವ ಎಂದು ಆತಂಕ ವ್ಯಕ್ತಪಡಿಸಿದರು. ನಾವು ಇಂದು ಡಿಜಿಟಲ್ ಇಂಡಿಯಾ ಬಗ್ಗೆ ಮಾತನಾಡುತ್ತೇವೆ. ಆದರೆ ದೇಶದ ಸಮಗ್ರ ನಾಗರಿಕರಿಗೆ ಹೊಟ್ಟೆ ಮತ್ತು ಬಟ್ಟೆ ಮೂಲ ಸೌಕರ್ಯ ದೊರೆತಿದೆಯೇ ಎಂದು ಚಿಂತನೆ ಮಾಡುತ್ತಿಲ್ಲ. ದೇಶದ ಎಲ್ಲ ಜನರಿಗೆ ಮೂಲ ಸೌಕರ್ಯ ಒದಗಿಸಿಕೊಟ್ಟರೆ ಅಭಿವೃದ್ಧಿ ತನ್ನಿಂದ ತಾನೇ ಸಾಧ್ಯ ಎಂದು ಹೇಳಿದರು.
ಡೆಮೊಕ್ರೆಟಿಕ್ ಯುತ್ ಫೆಡರೇಷನ್ ಆಫ್ ಇಂಡಿಯಾದ ರಾಜಶೇಖರ ಮೂರ್ತಿ, ಸ್ವಾತಂತ್ರ್ಯ ಹೋರಾಟಗಾರರಾದ ಎನ್. ಆರ್. ಮಾತಾಡ್ ಅಭಿತೇಜ್ ಸಿಂಗ್ ಹಾಜರಿದ್ದರು . ಅಭಿತೇಜ್ ಸಿಂಗ್ ಅವರ ಸಂವಾದದ ಹೈ ಲೈಟ್ಸ್ ಇಲ್ಲಿದೆ...

ಎಲ್ಲ ರಾಜ್ಯಗಳಲ್ಲಿ ಪ್ರವಾಸ
ಭಗತ್ ಸಿಂಗ್ ಅವರ ವಿಚಾರಗಳು ಪ್ರಚಾರಕ್ಕೆ ಬಂದಿಲ್ಲ. ಅವರು ತಮ್ಮ 24 ನಾಏ ವರ್ಷದಲ್ಲೇ ದೇಶಕ್ಕೆ ಪ್ರಾಣ ತ್ಯಾಗ ಮಾಡಿದರು. ಅಷ್ಟು ಕಡಿಮೆ ವಯಸ್ಸಿನಲ್ಲಿಯೇ ದೇಶದ ಬೆಳವಣಿಗೆ ಬಗ್ಗೆಕನಸು ಕಂಡಿದ್ದರು, ತಮ್ಮದೇ ಆದ ಧ್ಯೇಯಗಳನ್ನು ಹೊಂದಿದ್ದರು. ಅದನ್ನು ಪ್ರಚಾರ ಮಾಡಲು ಎಲ್ಲ ರಾಜ್ಯಗಳಲ್ಲಿ ಪ್ರವಾಶ ಮಾಡುತ್ತಿದ್ದೇನೆ ಎಂದು ಹೇಳಿದರು.

ಯಾವ ರಾಜಕೀಯ ಪಕ್ಷಕ್ಕೂ ಸೇರಿಲ್ಲ
ನಮ್ಮ ವಿಚಾರಗಳು ಯಾವ ರಾಜಕೀಯ ಪಕ್ಷಗಳಿಗೂ ಸಂಬಂಧಿಸಿಲ್ಲ. ಅವರ ವಿಚಾರಧಾರೆಗಳು ಬೇರ ಎ ನಮ್ಮ ವಿಚಾರಧಾರೆಗಳು ಬೇರೆ. ದೇಶದ ಅಭಿವೃದ್ಧಿ, ಜನರ ಹಿತಾಸಕ್ತಿ ಇರುವ ಎಲ್ಲ ವಿಚಾರಗಳನ್ನು ಒಪ್ಪಿಕೊಳ್ಳುತ್ತೇವೆ, ಅದು ಬಿಜೆಪಿಯದ್ದಾಗಿರಬಹುದು ಇಲ್ಲವೇ ಕಮ್ಯೂನಿಷ್ಟ್ ಅವರದ್ದು ಆಗಿರಬಹುದು ಎಂದು ಹೇಳಿದರು.

ಸಾಹಿತಿಗಳ ಮೇಲೆ ಹಲ್ಲೆ ಸಲ್ಲ
ವಿಮರ್ಶಕರ ಮೇಲೆ, ಸಂಶೋಧಕರ ಮೇಲೆ ನಡೆದ ಹಲ್ಲೆ ಪ್ರಕರಣಗಳು, ದಾದ್ರಿ ಪ್ರಕರಣದ ಸತ್ಯಾಸತ್ಯೆ ಕಂಡುಹಿಡಿಯಲು ಆಯಾ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದೊಂದಿಗೆ ಒಂದು ಗೂಡಿ ಶ್ರಮಿಸಬೇಕು. ಇಲ್ಲಿ ರಾಜಕಾರಣ ಬೆರೆಸಬಾರದು ಎಂದು ಹೇಳಿದರು

ಹೊಸ ನಾಯಕರು ಹುಟ್ಟಿಕೊಳ್ಳಬೇಕಿದೆ
ದೇಶದಲ್ಲಿ ಯುವ ನಾಯಕತ್ವದ ಕೊರತೆ ಇದೆ. ಯುವಕರು ರಾಜಕಾರನದಿಂದ ಹಿಂದೆ ಸರಿಯುತ್ತಿದ್ದಾರೆ. ವ್ಯವಸ್ಥೆ ಸಹ ಅವರಿಗೆ ಅಸಹ್ಯ ಬರುವಂತೆ ಮಾಡಿದೆ. ಇದೆಲ್ಲವನ್ನು ಮೀರಿಸಿ ದೇಶ ಮುಂದಕ್ಕೆ ಸಾಗಬೇಕು ಎಂದಾದರೆ ಯುವಕರು ರಾಜಾಕಾರಣದಲ್ಲಿ ಭಾಗವಹಿಸಲೇಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಡತ ಬಹಿರಂಗ ಸ್ವಾಗತಾರ್ಹ
ಸುಭಾಷ್ ಚಂದ್ರಬೋಸ್ ಸಾವಿನ ಕುರಿತಾದ ಕಡತಗಳನ್ನು ಬಹಿರಂಗ ಮಾಡಿರುವ ಪಶ್ಚಿಮ ಬಂಗಾಳ ಸರ್ಕಾರದ ಕ್ರಮವನ್ನು ಸ್ವಾಗತ ಮಾಡುತ್ತೇನೆ. ಇದರಲ್ಲಿ ಮುಚ್ಚಿ ಇಡುವಂಥದ್ದು ಏನಿದೆ? ಕೇಂದ್ರ ಸರ್ಕಾರವೂ ಕಡತ ಬಹಿರಂಗ ಮಾಡಿದರೆ ಉತ್ತಮ ಎಂದು ಹೇಳಿದರು.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications