ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ 100 ರೂ. ಬೆಳ್ಳಿ ನಾಣ್ಯ ಬಿಡುಗಡೆ
ನವದೆಹಲಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವದ ಭಾಗವಾಗಿ ಕೇಂದ್ರ ಸರ್ಕಾರವು 100 ರೂಪಾಯಿಯ ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿಯೇ ಅವರ ಭಕ್ತರಿಗೆ ವಿಶೇಷ ನಾಣ್ಯಗಳ ಬಿಡುಗಡೆ ಮಾಡುವ ಮೂಲಕ ಕೇಂದ್ರ ಹಣಕಾಸು ಸಚಿವಾಲಯವು ಗುಡ್ನ್ಯೂಸ್ ಕೊಟ್ಟಿದೆ.
ಆನ್ಲೈನ್ನ ಮೂಲಕ ಈ ನಾಣ್ಯವನ್ನು ಪಡೆದುಕೊಳ್ಳಬಹುದಾಗಿದೆ. 100 ರೂಪಾಯಿ ನಾಣ್ಯದಲ್ಲಿ ಒಂದು ಕಡೆ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ ಎಂದು ಬರೆಯಲಾಗಿದ್ದು. ಮತ್ತೊಂದು ಕಡೆ ಸತ್ಯಸಾಯಿ ಬಾಬಾ ಅವರ ಫೋಟೋ ಇದೆ. ಇದರ ಮೂಲ ಬೆಲೆಯು ಒಂದು ನಾಣ್ಯಕ್ಕೆ 6,460 ರೂಪಾಯಿ ಇದೆ. ಇನ್ನು ಗ್ರಾಹಕರು ತಮ್ಮ ಡೇಟಾದಲ್ಲಿ (ಮಾಹಿತಿ) ಯಾವುದೇ ಬದಲಾವಣೆಗಳನ್ನು ಆರ್ಡರ್ ಮಾಡಿದ 48 ಗಂಟೆಗಳ ಒಳಗೆ ಇಮೇಲ್ ಮೂಲಕ ತಿಳಿಸಬೇಕು ([email protected]). ಆರ್ಡರ್ ಕಳುಹಿಸಿದ ನಂತರ ಶಿಪ್ಪಿಂಗ್ ವಿಳಾಸದಲ್ಲಿನ ಬದಲಾವಣೆಗಳು ಇರುವುದಿಲ್ಲ. ಇದು ಮುಂಗಡ ಬುಕಿಂಗ್ ವ್ಯವಸ್ಥೆ ಆಗಿದ್ದು, ನಾಣ್ಯ ಸಿಗಲು 30 ದಿನಗಳು ಆಗಲಿವೆ.

ಭಾರತೀಯ ಸ್ಪೀಡ್ ಪೋಸ್ಟ್ ಮೂಲಕ ಈ ನಾಣ್ಯಗಳು ಸಿಗಲಿವೆ. ಆರ್ಡರ್ಗಳನ್ನು ಅವು ಬರುವ ಅನುಕ್ರಮದಲ್ಲಿ ಪ್ರಕ್ರಿಯೆಗೊಳಿಸಲಾಗುತ್ತದೆ. ಅಂದರೆ ಮೊದಲು ಬಂದವರಿಗೆ ಮೊದಲ ಆದ್ಯತೆ. ಆರ್ಡರ್(ಗಳನ್ನು) ತ್ವರಿತವಾಗಿ ಟ್ರ್ಯಾಕ್ ಮಾಡುವ ಯಾವುದೇ ವಿನಂತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಹಣಕಾಸು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ
ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರು ನವೆಂಬರ್ 23, 1926 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದರು. 14ನೇ ವಯಸ್ಸಿನಲ್ಲೇ ಅವರು ತಮ್ಮ ದೈವಿಕ ಧ್ಯೇಯವನ್ನು ಪ್ರಾರಂಭಿಸಿದರು.
ಶ್ರೀ ಸತ್ಯ ಸಾಯಿ ಬಾಬಾ ಎಲ್ಲಾ ಧರ್ಮಗಳ ಏಕತೆಯನ್ನು ಒತ್ತಿ ಹೇಳಿದ್ದರು. ಸತ್ಯ, ಸರಿಯಾದ ನಡವಳಿಕೆ, ಶಾಂತಿ, ಪ್ರೀತಿ ಮತ್ತು ಅಹಿಂಸೆಯ ಮಾನವೀಯ ಮೌಲ್ಯಗಳನ್ನು ಬೋಧಿಸಿದರು. ಅವರ ಸರಳ ಹಾಗೂ ಆಳವಾದ ಬೋಧನೆಗಳಲ್ಲಿ "ಎಲ್ಲರನ್ನೂ ಪ್ರೀತಿಸಿ, ಎಲ್ಲರಿಗೂ ಸೇವೆ ಮಾಡಿ" ಮತ್ತು "ಎಂದಿಗೂ ಸಹಾಯ ಮಾಡಿ, ಎಂದಿಗೂ ನೋಯಿಸಬೇಡಿ" ಎಂಬ ಧ್ಯೇಯವಾಕ್ಯ ಸೇರಿತ್ತು. ಇದನ್ನೇ ಅವರು ಎಲ್ಲರಿಗೂ ಹೇಳಿದರು.
ಶ್ರೀ ಸತ್ಯಸಾಯಿ ಬಾಬಾ ಅವರು ಅವರ ಜೀವಮಾನದ ಪೂರ್ತಿ ಬಡವರಿಗೆ ಸಹಾಯ ಮಾಡುವುದರಲ್ಲೇ ಕಳೆದರು. ಸರ್ಕಾರವೊಂದು ಮಾಡಬೇಕಾದ ಕೆಲಸಗಳನ್ನು ಮಾಡಿ ಜನಸಾಮಾನ್ಯರು ಹಾಗೂ ಬಡವರಿಗೆ ಸಹಾಯ ಮಾಡಿದರು. ಶಿಕ್ಷಣ, ಆರೋಗ್ಯ ಹಾಗೂ ಅನ್ನಸಂತರ್ಪಣೆ ವಿಚಾರದಲ್ಲಿ ಅವರು ಮಾಡಿರುವ ಸೇವೆಗಳನ್ನು ಜನ ಇಂದಿಗೂ ಸ್ಮರಿಸುತ್ತಾರೆ. ಉಚಿತ ಆಸ್ಪತ್ರೆಗಳು, ಉಚಿತ ಶಿಕ್ಷಣ ಸಂಸ್ಥೆಗಳು ಮತ್ತು ಲಕ್ಷಾಂತರ ಜನರಿಗೆ ಪ್ರಯೋಜನವನ್ನು ನೀಡುವ ಬೃಹತ್ ಕುಡಿಯುವ ನೀರಿನ ಯೋಜನೆಗಳಂತಹ ಹಲವಾರು ಸಾಮಾಜಿಕ ಸೇವೆಗಳನ್ನು ಅವರು ಸಲ್ಲಿಸಿದ್ದಾರೆ.
ಮುಂದುವರಿದು ಬಡವರು ಮತ್ತು ನಿರ್ಗತಿಕರಿಗಾಗಿ ಬಾಬಾ ಅವರ ಹೃದಯ ಯಾವಾಗಲೂ ಮಿಡಿಯುತ್ತಿತ್ತು. ಯಾರೂ ಹಿಂದೆ ಉಳಿಯದಂತೆ ನೋಡಿಕೊಳ್ಳಲು ಅವರು ಅವಿಶ್ರಾಂತವಾಗಿ ಕೆಲಸ ಮಾಡಿದರು. ಶ್ರೀ ಸತ್ಯ ಸಾಯಿ ಅವರನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಅವತಾರವೆಂದು ಪೂಜಿಸುತ್ತಾರೆ ಮತ್ತು ಅವರ ದೈವಿಕ ಬೋಧನೆಗಳು ತಮ್ಮ ಜೀವನಕ್ಕೆ ದಿಕ್ಕನ್ನು ಕಂಡುಕೊಂಡ ಅನೇಕರನ್ನು ಸ್ಪರ್ಶಿಸಿದವು, ಪ್ರೇರೇಪಿಸಿದವು ಮತ್ತು ಮಾರ್ಗದರ್ಶನ ಮಾಡಿದವು ಎಂದರೆ ತಪ್ಪಾಗಲಾರದು.
ಶ್ರೀ ಸತ್ಯ ಸಾಯಿ ಬಾಬಾ ಅವರ ಮಹಾಸಮಾಧಿಯ ನಂತರವೂ, ಅವರ ಭಕ್ತರು ಮತ್ತು ಅನುಯಾಯಿಗಳು ಅವರ ಬೋಧನೆಗಳನ್ನು ಅಭ್ಯಾಸ ಮಾಡುವುದನ್ನು ಮತ್ತು ಸಮುದಾಯ ಮತ್ತು ಸಮಾಜದ ಸೇವೆಯಲ್ಲಿ ತಮ್ಮನ್ನು ತಾವು ಅರ್ಪಿಸಿಕೊಳ್ಳುವುದನ್ನು ಮುಂದುವರಿಸುತ್ತಿದ್ದಾರೆ. ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರು ಪ್ರಾರಂಭಿಸಿದ ಧ್ಯೇಯವನ್ನು ನಿರ್ವಹಿಸುತ್ತವೆ. ಅವರ ನಿಸ್ವಾರ್ಥ ಪ್ರೀತಿ ಮತ್ತು ಸಾರ್ವತ್ರಿಕ ಆಧ್ಯಾತ್ಮಿಕ ಬೋಧನೆಗಳು ಲಕ್ಷಾಂತರ ಜನರನ್ನು ಸಾಮಾಜಿಕ ಸೇವೆಯ ಹಾದಿಯಲ್ಲಿ ಪ್ರೇರೇಪಿಸಿವೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications