ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Bharat Bandh Updates: ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ ಬಂದ್

|
Google Oneindia Kannada News

ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಇಂದು ಭಾರತ ಬಂದ್‌ಗೆ ಕರೆ ನೀಡಿದ್ದಾರೆ. ಕಳೆದ 11 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಕರೆ ನೀಡಿರುವ ಭಾರತ ಬಂದ್‌ಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಕಾಂಗ್ರೆಸ್ ತೆಲಂಗಾಣ ರಾಷ್ಟ್ರಸಮಿತಿ, ಡಿಎಂಕೆ ಹಾಗೂ ಆಮ್ ಆದ್ಮಿ ಪಕ್ಷ ಸೇರಿ 15 ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಭಾರತ ಬಂದ್ ಗೆ ಹತ್ತು ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ನೈತಿಕ ಬೆಂಬಲ ಘೋಷಿಸಿದೆ. ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಇಳಿಯುವುದಿಲ್ಲ ಮತ್ತು ಕೆಲಸದಿಂದ ದೂರವಿರುವುದಿಲ್ಲ.

ಡಿಸೆಂಬರ್ 8ರ ಭಾರತ್ ಬಂದ್; ಏನಿರುತ್ತೆ, ಏನಿರಲ್ಲ?ಡಿಸೆಂಬರ್ 8ರ ಭಾರತ್ ಬಂದ್; ಏನಿರುತ್ತೆ, ಏನಿರಲ್ಲ?

ಆದರೆ ರೈತರ ಆಂದೋಲನವನ್ನು ಬೆಂಬಲಿಸುತ್ತವೆ ಎಂದು ಹಿಂದ್ ಮಜ್ದೂರ್ ಸಭಾ ಪ್ರಧಾನ ಕಾರ್ಯದರ್ಶಿ ಹರ್ಭಜನ್ ಸಿಂಗ್ ಸಿಧು ಅವರು ತಿಳಿಸಿದ್ದಾರೆ.

Bharat Bandh And Farmers Protest Live Updates In Kannada

 ಭಾರತ್ ಬಂದ್: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಸೂಚನೆ ಭಾರತ್ ಬಂದ್: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಸೂಚನೆ

ಕಾರ್ಮಿಕರು ಭಾರತ ಬಂದ್ ಬೆಂಬಲಿಸಿ ಕರ್ತವ್ಯದಲ್ಲಿರುವಾಗ ಕಪ್ಪು ಪಟ್ಟಿಗಳನ್ನು ಧರಿಸಲಿದ್ದಾರೆ ಮತ್ತು ಕೆಲಸದ ಸಮಯದ ನಂತರ ಅಥವಾ ಮೊದಲು ವೇದಿಕೆಯು ಪ್ರತಿಭಟನೆ ಮತ್ತು ಮೆರವಣಿಗೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಭಾರತ ಬಂದ್‌ನ ಕ್ಷಣ ಕ್ಷಣದ ಮಾಹಿತಿ 'ಒನ್‌ ಇಂಡಿಯಾ'ದಲ್ಲಿ ನೀಡಲಿದ್ದೇವೆ ನಿರೀಕ್ಷಿಸಿ.

Newest FirstOldest First
6:39 PM, 8 Dec

ಕೃಷಿ ಸಂಬಂಧಿತ ಮಸೂದೆಗಳ ತಿದ್ದುಪಡಿ ವಿರೋಧಿಸಿ, ದೇಶವ್ಯಾಪಿ ಕರೆ ನೀಡಿರುವ ಭಾರತ್ ಬಂದ್‍ಗೆ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಎಡಪಕ್ಷಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ರಸ್ತೆ ತಡೆ ಚಳವಳಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಂದ್ ನಿಂದ ನಗರ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆಯಲಿಲ್ಲ. ಯಾವುದೇ ವಹಿವಾಟು ನಡೆಯಲಿಲ್ಲ. ನಗರದ ವಿವಿಧ ಬಡಾವಣೆಗಳಲ್ಲಿ ಅಲ್ಲಲ್ಲಿ ಅಂಗಡಿಗಳನ್ನು ತೆರೆಯಲಾಗಿತ್ತು.
3:47 PM, 8 Dec

ಕೃಷಿ ವಲಯವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದರೆ ರಾಜ್ಯಗಳನ್ನು ಕೇಂದ್ರ ಸರ್ಕಾರ (ಒಕ್ಕೂಟ ಸರ್ಕಾರ) ಗಣನೆಗೇ ತೆಗೆದುಕೊಳ್ಳದೇ ಕಾಲು ಕಸ ಮಾಡಿಕೊಂಡಿದೆ. ಇದು ಕೆಟ್ಟ ಬೆಳವಣಿಗೆ ಎಂದು ಸಾಹಿತಿ ದೇವನೂರ ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು.
3:29 PM, 8 Dec

ಕೃಷಿ ನೀತಿ ವಿರೋಧಿಸಿ ರೈತರ ಪ್ರತಿಭಟನೆ, ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರ ಜೊತೆ ಮಾತುಕತೆಗೆ ಕೇಂದ್ರ ಸರ್ಕಾರದ ತೀರ್ಮಾನ ಮಾಡಿದೆ. ಗೃಹ ಸಚಿವ ಅಮಿತ್ ಶಾ ಅವರು ಮಾತುಕತೆಗೆ ರೈತರನ್ನು ಆಹ್ವಾನಿಸಿದ್ದಾರೆ. ಇಂದು ಸಂಜೆ ಸಂಜೆ 7 ಗಂಟೆಗೆ ರೈತರ ಜೊತೆ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ.
3:11 PM, 8 Dec

ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಉಪಾಧ್ಯಕ್ಷ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.
3:10 PM, 8 Dec

ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನದ ಮೂಲಕ ರೈತರ ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿ ಪ್ರತಿಭಟನೆ ನಡೆಸಲಾಯಿತು. ರೈತ ಸಂಘಟನೆ, ಪ್ರಗತಿಪರ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರು ಆಕ್ರೋಶ ಹೊರ ಹಾಕಿದರು.
2:56 PM, 8 Dec

ಇವತ್ತಿನದು ಕೇವಲ ರೈತರ ಬಂದ್ ಅಲ್ಲ, ರೈತರನ್ನು ದಿಕ್ಕು ತಪ್ಪಿಸುವಂತಹ ರಾಜಕೀಯ ಪಕ್ಷಗಳ ಬಂದ್ ಆಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಇದು ರೈತರ ವಿರೋಧವಾಗಿ ಉಳಿದಿಲ್ಲ, ಮೋದಿ ಸರ್ಕಾರದ ವಿರೋಧದ ಬಂದ್ ಆಗಿದೆ ಚಿಕ್ಕಮಗಳೂರಿನಲ್ಲಿ ಸಂಸದೆ ಹೇಳಿಕೆ.
2:13 PM, 8 Dec

ಭಾರತ್ ಬಂದ್‌ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂದಿನಂತೆ ಬೆಳಿಗ್ಗಿನಿಂದಲೇ ಉಡುಪಿ ನಗರದ ಜನ ತಮ್ಮ‌ ಮಾಮೂಲಿ ಕೆಲಸ ಕಾರ್ಯಗಳಿಗೆ ತೆರಳಿದರು. ಅಂಗಡಿ‌ ಮುಂಗಟ್ಟುಗಳು, ಬಸ್ ಗಳು ಎಂದಿನಂತೆ ಕಾರ್ಯಾಚರಿಸುತ್ತಿವೆ. ಇನ್ನು ವಿರೋಧ ಪಕ್ಷಗಳೂ ಮಧ್ಯಾಹ್ನದ ತನಕ ಯಾವುದೇ ಪ್ರತಿಭಟನೆಗಳನ್ನು ಮಾಡಿದ ವರದಿಗಳಿಲ್ಲ.
Advertisement
1:35 PM, 8 Dec

ಶಿವಮೊಗ್ಗದಲ್ಲಿ ಭಾರತ್ ಬಂದ್'ಗೆ ನೀರಸ ಪ್ರತಿಕ್ರಿಯೆ ಎಂದಿನಂತೆ ಜನ ಜೀವನ. ಎಪಿಎಂಸಿ ತಿದ್ದುಪಡಿ, ಭೂಸುಧಾರಣಾ ಕಾಯ್ದೆಯನ್ನು ವಿರೋಧಿಸಿ ರೈತ ಸಂಘ ವಿವಿಧ ರೈತಪರ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ಶಿವಮೊಗ್ಗ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
12:49 PM, 8 Dec

ಕೇಂದ್ರ ಸರ್ಕಾರದ ರೈತ ವಿರೋಧಿ ನಡೆಯನ್ನು ಖಂಡಿಸಿ, ರೈತರು ಕರೆ ನೀಡಿರುವ "ಭಾರತ್ ಬಂದ್' ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡ ಪರ ಸಂಘಟನೆಗಳು ಮಳೆಯಲ್ಲೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದವು. ರಾಮನಗರದ ಐಜೂರು ವೃತ್ತದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದ ರೈತ ಸಂಘ ಮತ್ತು ಕನ್ನಡ ಪರ ಸಂಘಟನೆಗಳು, ಮಳೆ ಬಂದರೂ ಲೆಕ್ಕಿಸದೇ ರಸ್ತೆಯಲ್ಲಿ ಕುಳಿತು "ಭಾರತ್ ಬಂದ್' ನ್ನು ಬೆಂಬಲಿಸಿದರು.
12:34 PM, 8 Dec

ಕೃಷಿ ಕಾಯ್ದೆ ವಿರೋಧಿಸಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಜೆಡಿಎಸ್ ಶಾಸಕರಿಂದ ಪ್ರತಿಭಟನೆ. ಸಚಿವ ಸುಧಾಕರ್, ಬಿಡಿಎ ಅಧ್ಯಕ್ಷ ವಿಶ್ವನಾಥ್, ವೇದವ್ಯಾಸ್ ಕಾಮಥ್ ಅವರನ್ನು ಪ್ರತಿಭಟನೆಗೆ ಆಹ್ವಾನಿಸಿದ ಜೆಡಿಎಸ್ ಸದಸ್ಯರು. ಜೆಡಿಎಸ್ ಶಾಸಕ, ಮಾಜಿ ಸಚಿವ ಪುಟ್ಟರಾಜು ಅವರಿಂದ ಬಿಜೆಪಿ ಶಾಸಕರಿಗೆ ಆಹ್ವಾನ.
12:22 PM, 8 Dec

ಭಾರತ್ ಬಂದ್ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರಿಂದ ಮಾನವ ಸರಪಳಿ ರಚಿಸಲಾಯಿತು. ಮಂಡ್ಯದ ಸಂಜಯ ವೃತ್ತದ ಬಳಿ ರೈತರ ಪ್ರತಿಭಟನೆ ನಡೆಯುತ್ತಿದೆ. ತ ಸಂಘ ಜಿಲ್ಲಾಧ್ಯಕ್ಷ ಕೆಂಪೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರೈತರ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳ ವಾಪಸ್ ಪಡೆಯುವಂತೆ ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
12:19 PM, 8 Dec

ಕೇಂದ್ರ ಸರ್ಕಾರ ರೈತ ನೀತಿ ವಿರೋಧಿಸಿ- ರೈತ ಮುಖಂಡರಿಂದ ವಿಧಾನಸೌಧ ರಸ್ತೆಯಲ್ಲೇ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಬೆಂಗಳೂರಿನ ವಿಧಾನಸೌಧದ ರಸ್ತೆಯಲ್ಲಿ ರೈತ ಮುಖಂಡರ ಜೊತೆ ರಸ್ತೆಯಲ್ಲೇ ಟಯರ್‌ಗೆ ಬೆಂಕಿ ಹಚ್ಚಿ, ಹಸಿರು ಬಾವುಟವನ್ನು ತೋರಿಸುವ ಮೂಲಕ ಕೇಂದ್ರ ಸರ್ಕಾರದ ಕೃಷಿ ನೀತಿ ಖಂಡಿಸಿ ಪ್ರತಿಭಟನೆ ಮಾಡಿದರು. ತೊಲಗಲಿ.. ತೊಲಗಲಿ ಕೇಂದ್ರ ಸರ್ಕಾರ ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
12:10 PM, 8 Dec

ಪ್ರತಿಭಟನೆ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಕೇಂದ್ರ ಸರ್ಕಾರ ಕಾರ್ಪೋರೇಟ್ ವಲಯದ ಕೈ ವಶವಾಗಿದೆ ರೈತ ವಿರೋಧಿ, ಕೃಷಿ ವಿರೋಧಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು, ಇಂದು ನಾವು ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ .ತಕ್ಷಣ ಕಾಯ್ದೆಗಳನ್ನ ಹಿಂಪಡೆಯಬೇಕು ಸದನ ಒಳಗೆ ಧರಣಿ ನಡೆಸಲ್ಲ ಪ್ರತಿಭಟನೆ ಮಾಡಲ್ಲ ಆದರೆ ಕಪ್ಪು ಪಟ್ಟಿ ಧರಿಸಿ ಸದನದಲ್ಲಿ ಪಾಳ್ಗೊಳ್ಳುತ್ತೇವೆ .ಸಾಂಕೇತಿಕವಾಗಿ ನಮ್ಮ ಪ್ರತಿಭಟನೆಯನ್ನ ಕಪ್ಪು ಪಟ್ಟಿ ಧರಿಸುವ ಮೂಲಕ ಸದನದಲ್ಲಿ ವ್ಯಕ್ತಪಡಿಸ್ತೇವೆ ವ್ಯಕ್ತಪಡಿಸುತ್ತೇವೆ.
11:04 AM, 8 Dec

ಟೌನ್‌ಹಾಲ್‌ ಎದುರು ಆರಂಭವಾದ ಪ್ರತಿಭಟನೆ , ರೈತ, ಕಾರ್ಮಿಕ, ಕನ್ನಡಪರ ಸೇರಿದಂತೆ ವಿವಿಧ ಸಂಘಟನೆಗಳು ಭಾಗಿ, ಕೋಡಿಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿ ಚಂದ್ರು, ಸಿಐಟಿಯು ವರಲಕ್ಷ್ಮಿ ಸೇರಿದಂತೆ ಹಲವರು ಭಾಗಿ ,ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ,ಎತ್ತಿನ ಗಾಡಿ ಮೂಲಕ ಆಗಮಿಸಿದ ರೈತರು ,ಟೌನ್ ಹಾಲ್ ಮುಂಭಾಗಕ್ಕೆ ಬಂದ ಗಾಡಿ , ತಾವು ಬೆಳೆದ ಬೆಳೆಯನ್ನ ಹೊತ್ತು ತಂದ ರೈತರು ಸೊಪ್ಪು, ತರಕಾರಿ, ಹಣ್ಣು ಹಿಡಿದು ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
10:53 AM, 8 Dec

ರೈತವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
10:46 AM, 8 Dec

ದೆಹಲಿ: ದೆಹಲಿ ಗಡಿಗೆ ತೆರಳಿ ರೈತರನ್ನು ಭೇಟಿ ಮಾಡಿರುವ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ.
10:42 AM, 8 Dec

ಭಾರತ ಬಂದ್ : ಬಸ್ ನಿಲ್ದಾಣದಲ್ಲಿ ನಿತ್ರಾಣಗೊಂಡು ಕುಸಿದು ಬಿದ್ದ ಮಹಿಳೆ. ಮೈಸೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ. ಬನ್ನೂರಿಗೆ ತೆರಳಲು ಮಗಳ ಜೊತೆ ಬಂದಿದ್ದ ಮಹಿಳೆ. ಈ ವೇಳೆ ಕುಸಿದು ಬಿದ್ದ ಮಹಿಳೆ. ನೆರವಿಗೆ ಪೊಲೀಸರು ಮತ್ತು ಸಾರಿಗೆ ಸಿಬ್ಬಂದಿ. ಆಟೋದಲ್ಲಿ ಕೆ‌ಆರ್ ಆಸ್ಪತ್ರೆಗೆ. ಅಸ್ವಸ್ಥ ಮಹಿಳೆಯನ್ನ ರವಾನಿಸಿದ ಪೊಲೀಸರು. ಆಟೋಗೆ ದುಡ್ಡು ಕೊಟ್ಟು ಮಾನವೀಯತೆ ಮೆರೆದ ಎ.ಎಸ್.ಐ ದೀಪಕ್ ಪ್ರಸಾದ್
10:32 AM, 8 Dec

ಮುಖ್ಯ ಮಂತ್ರಿ ಚಂದ್ರು ಹೇಳಿಕೆ. ನೂತನ ಕೃಷಿ ಮಸೂದೆ ರೈತರಿಗೆ ಮಣ್ಣೆರೆಚುವ ಕೆಲಸ, ಬಂಡವಾಳ ಶಾಹಿಗಳ ಹಿಡಿತಕ್ಕೆ ಸಿಕ್ಕ ಸರ್ಕಾರ ಅವರ ಪರ ನಿಂತಿದೆ, ಇದು ಪೂರಕವಾಗಿಲ್ಲ ಮಾರಕವಾಗಿದೆ. ಚರ್ಚೆ ಮಾಡದೇ ಪ್ರಧಾನಿ ಸುಗ್ರೀವಾಜ್ಞೆ ತಂದಿದ್ದಾರೆ. ರೈತರು ಸ್ವಾಭಿಮಾನಿಗಳು.. ನಿಮ್ಮ ಊಟವನ್ನು ನಿರಾಕರಣೆ ಮಾಡಿದ್ರು. ಈ ಕಾಯ್ದೆಯನ್ನು ಸಂಪೂರ್ಣ ಹಿಂಪಡೆಯಬೇಕು..
10:14 AM, 8 Dec

ಭಾರತ್ ಬಂದ್; ಹಲವು ರಾಜ್ಯಗಳಲ್ಲಿ ರೈಲು ಸಂಚಾರಕ್ಕೆ ತಡೆ

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ರೈತರು ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಜೊತೆಗಿನ 5 ಸುತ್ತಿನ ಮಾತುಕತೆಗಳ ವಿಫಲವಾಗಿದೆ. ಮಂಗಳವಾರ ಭಾರತ್ ಬಂದ್ಗೆ ಸಹ ಕರೆ ನೀಡಲಾಗಿದೆ.
10:12 AM, 8 Dec

ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ಇಂದು ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಹಿರಿಯ ನಾಯಕರಾದ ಡಾ.ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
10:01 AM, 8 Dec

ಭಾರತ ಬಂದ್ ಹಿನ್ನೆಲೆ , ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಭದ್ರತೆಯ ಬಗ್ಗೆ ಮಾಹಿತಿ ಪಡೆದ ಡಿಸಿಪಿ ಅನುಚೇತ್ ಎಂದಿನಂತೆ ಗೃಹ ಕಚೇರಿ ಕೃಷ್ಣಾ ಬಳಿ 15 ಪೊಲೀಸ್ ಸಿಬ್ಬಂದಿ , ಹಾಗೆ ಸಿಎಂ ನಿವಾಸ ಕಾವೇರಿ ಬಳಿ 15 ಪೊಲೀಸ್ ಸಿಬ್ಬಂದಿ ನಿಯೋಜನೆ ಭದ್ರತೆಯ ದೃಷ್ಟಿಯಿಂದ ಕಾವೇರಿ, ಕೃಷ್ಣಾ ಬಳಿ ಬ್ಯಾರಿಕ್ಯಾಡ್ ಗಳನ್ನು ಸ್ಥಳದಲ್ಲಿ ಇರಿಸಿಕೊಳ್ಳಲಾಗಿದೆ.
9:45 AM, 8 Dec

ವಿಭಿನ್ನ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರೈತರು, ಮೈಸೂರು ಬ್ಯಾಂಕ್ ವೃತ್ತದ ಮಧ್ಯ ರಸ್ತೆಯಲ್ಲಿ‌ ಕೂತು ಕುರುಬೂರು ಶಾಂತಕುಮಾರ್ ಹಾಗೂ ಬೆಂಬಲಿಗರಿಂದ ಪ್ರತಿಭಟನೆ, ಅನ್ನದ ತಟ್ಟೆ ಹಿಡಿದು ತಿನ್ನಲು ಕೂತವನ ಬಾಯಿ & ಕಣ್ಣು ಮುಚ್ಚಿ ಪ್ರತಿಭಟನೆ, 'ಅನ್ನ ಕಿತ್ತು ಕೊಳ್ಳುವ ಸರ್ಕಾರಕ್ಕೆ ಧಿಕ್ಕಾರ' ಎಂದು ಕೂಗಿ ಪ್ರತಿಭಟನೆ
9:38 AM, 8 Dec

ಭಾರತ್ ಬಂದ್; ಎರಡು ದೊಡ್ಡ ರೈಲ್ವೆ ಒಕ್ಕೂಟದ ಬೆಂಬಲ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಭಾರತ್ ಬಂದ್‌ಗೆ ಸಹ ಕರೆ ನೀಡಲಾಗಿದೆ. ಹಲವಾರು ಸಂಘಟನೆಗಳು ಬಂದ್‌ ಬೆಂಬಲಿಸಿವೆ.
9:35 AM, 8 Dec

ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ಕಾಯ್ದೆ ವಿರೋಧಿಸಿ ಭಾರತ ಬಂದ್ , ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ಸಾಧ್ಯತೆ, ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ವಿವಿಧ ಕಾರ್ಮಿಕ ಒಕ್ಕೂಟ, ರಸ್ತೆ ಬದಿ ತರಕಾರಿ ವ್ಯಾಪಾರಿಗಳ ಸಂಘ, ಸೇರಿ ಹಲವು ಪ್ರಮುಖ ಸಂಘಟನೆಗಳಿಂದ ಬಂದ್‌ಗೆ ಸಂಪೂರ್ಣ ಬೆಂಬಲ.
9:16 AM, 8 Dec

ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡದಂತೆ ಮುಂಜಾಗ್ರತಾ ಕ್ರಮ ಕಾನೂನು ಸುವ್ಯವಸ್ಥೆ ಹದಗೆಡದಂತೆ ತೀವ್ರ ಕಟ್ಟೆಚ್ಚರ ವಹಿಸಿರುವ ಪೊಲೀಸರು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಕಟ್ಟುನಿಟ್ಟಿನ ನಿರ್ದೇಶನ, ಆಯಾ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತರು, ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚನೆ
9:11 AM, 8 Dec

ಯಾವುದೇ ಅಹಿತಕರ ಘಟನೆ ನಡೆಯಂದತೆ ಕ್ರಮ , 15 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ , 5 ಜನ ಅಡಿಷನ್ ಸಿಪಿಗಳು, ನಗರದ ಎಲ್ಲಾ ವಿಭಾಗಗಳ ಡಿಸಿಪಿಗಳು ಎಸಿಪಿಗಳ ನೇತೃತ್ವ, 35 ಕೆಎಸ್‌ಆರ್‌ಪಿ, 32 ಸಿಎಆರ್ ತುಕಡಿಗಳ ನಿಯೋಜನೆ , ಈಗಾಗಲೇ ಪ್ರಮುಖ ರಸ್ತೆಗಳು ಕ್ಲೋಸ್ ಮೈಸೂರು ಬ್ಯಾಂಕ್ ರಸ್ತೆ , ಟೌನ್ ಹಾಲ್‌, ಫ್ರೀಡಂಪಾರ್ಕ್ ಬಳಿ ಬಿಗಿ ಬಂದೋಬಸ್ತ್ ವಿಧ ರೈತ ಸಂಘಟನೆಗಳಿಂದ ಪ್ರತಿಭಟನೆ ಹಿನ್ನಲೆ ಪೊಲೀಸರಿಂದ ಮುಂಜಾಗ್ರತ ಕ್ರಮ
9:10 AM, 8 Dec

ಮೌರ್ಯ ಸರ್ಕಲ್ ಬಳಿಗೆ ಕೆಎಸ್ ಆರ್ ಪಿ ತುಕಡಿಗಳ ಆಗಮನ, ಸದ್ಯ ಎರಡು ಕೆಎಸ್ ಆರ್ ತುಕಡಿ ಭದ್ರತೆಗೆ ನಿಯೋಜನೆ, ರೈತ ಸಂಘಟನೆಗಳಿಂದ ಪ್ರತಿಭಟನೆ ಹಿನ್ನಲೆ, ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಬಿಗಿ ಬಂದೋಬಸ್ತ್.
8:59 AM, 8 Dec

ಈ ಹೋರಾಟವನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಅಪ್ರಜಾಸತ್ತಾತ್ಮಕ ನಡೆಯನ್ನು ನಮ್ಮ ಸಂಘಟನೆ ಬಲವಾಗಿ ಖಂಡಿಸುತ್ತದೆ. ರೈತ ವಿರೋಧಿ ಕಾನೂನುಗಳನ್ನು ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಅಂಗನವಾಡಿ ನೌಕರರ ಸಂಘ ಆಗ್ರಹ. ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಹೇಳಿಕೆ.
8:59 AM, 8 Dec

ಭಾರತ್ ಬಂದ್ ಗೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ಬೆಂಬಲ. ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ ಕಾರ್ಪೊರೇಟ್ ಪರವಾದ ಕಾಯ್ದೆಗಳನ್ನು ಮತ್ತು ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಹಿಂಪಡೆಯಬೇಕೆಂಬ ಬೇಡಿಕೆಯನ್ನು ಮುಂದಿಟ್ಟು ನವದೆಹಲಿಯಲ್ಲಿ ರೈತರ ಹೋರಾಟ ನಡೆಯುತ್ತಿದೆ.
8:56 AM, 8 Dec

ಭಾರತ್ ಬಂದ್ ಗೆ ಕರೆ ನೀಡಿದರೂ ಮೆಜೆಸ್ಟಿಕ್ ನಲ್ಲಿ ವಾಹನ ಸಂಚಾರ ಎಂದಿನಂತೆ ಮುಂದುವರೆದಿದೆ. ಬಿಎಂಟಿಸಿ ಬಸ್ ಗಳು ಸಂಚರಿಸುತ್ತಿದ್ದು, ಆದ್ರೆ ಪ್ರಯಾಣಿಕರು ಇಲ್ಲ.
READ MORE

English summary
Bharat Bandh on 8 December Live Updates in Kannada: Check out Latest Breaking News, Pictures, Videos, and Special Reports here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X