2ನೇ ದಿನಕ್ಕೆ ಕಾಲಿಟ್ಟ ಭಾರತ್ ಬಂದ್: ಬ್ಯಾಂಕಿಂಗ್ ಸೇವೆ ಅಲಭ್ಯ
ಹೊಸದಿಲ್ಲಿ ಮಾರ್ಚ್ 29: ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರ (ಭಾರತ್ ಬಂದ್) ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾರಿಗೆ, ವಿದ್ಯುತ್ ಸೇವೆಗಳು ಮತ್ತು ಬ್ಯಾಂಕಿಂಗ್ ವಲಯ ಸೇರಿದಂತೆ ಹಲವು ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಕರೆ ನೀಡಲಾಗುತ್ತಿರುವ ಮೊದಲ ಪ್ರಮುಖ ಮುಷ್ಕರ ಇದಾಗಿದೆ. ಮುಷ್ಕರದ ಮೊದಲ ದಿನ ಕೇರಳದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಮುಚ್ಚಿದ್ದವು. ಕೆಲವೆಡೆ ಖಾಸಗಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಕೇರಳ ಮತ್ತು ಪಶ್ಚಿಮ ಬಂಗಾಳ ಜನರ ಓಡಾಟವಿಲ್ಲದೆ ಖಾಲಿ ಬೀದಿಗಳು ಕಂಡುಬಂದವು. ಜೊತೆಗೆ ಬಂಗಾಳದಲ್ಲಿ ಕೆಲ ಬೀದಿಗಳಲ್ಲಿ ಪ್ರದರ್ಶನಗಳನ್ನ ಮಾಡಲಾಯಿತು. ಮಾತ್ರವಲ್ಲದೆ ಸೋಮವಾರ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಲ್ಲಿ ಬ್ಯಾಂಕಿಂಗ್ ಸೇವೆಗಳು ಸ್ಥಗಿತಗೊಂಡಿದ್ದವು. ಜಾದವ್ಪುರದಲ್ಲಿ ಪ್ರತಿಭಟನಾಕಾರರು ರೈಲುಗಳನ್ನು ತಡೆದು ಕೇಂದ್ರದ ಕಾರ್ಮಿಕ ನೀತಿಗಳನ್ನು ವಿರೋಧಿಸಿದರು.
ಸರ್ಕಾರದ ನೀತಿಗಳನ್ನು ವಿರೋಧಿಸಿ (ಮಾರ್ಚ್ 28 ಮತ್ತು 29) ನಡೆಯುವ ಮುಷ್ಕರದಲ್ಲಿ ದೇಶಾದ್ಯಂತ 20 ಕೋಟಿಗೂ ಹೆಚ್ಚು ಕಾರ್ಮಿಕರು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಭಾಗವಹಿಸಿದ್ದಾರೆ ಎಂದು ಆಲ್ ಇಂಡಿಯನ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್ಜೀತ್ ಕೌರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪ್ರಾದೇಶಿಕ ಮತ್ತು ರಾಜ್ಯ ಪೊಲೀಸರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದೇ ಇರಲು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.

ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯುತ್ ಸಚಿವಾಲಯದಿಂದ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ವಿದ್ಯುತ್ ಅಧಿಕಾರಿಗಳಿಗೆ ಸಲಹೆಯನ್ನು ನೀಡಲಾಗಿದೆ. ಸಂಬಂಧಪಟ್ಟ ಎಲ್ಲರಿಗೂ ತಮ್ಮ ಪ್ರಾದೇಶಿಕ ನೆಟ್ವರ್ಕ್/ನಿಯಂತ್ರಣ ಪ್ರದೇಶದಲ್ಲಿ ಮೇಲ್ವಿಚಾರಣೆಯನ್ನು ಮಾಡಲು ಸಲಹೆ ನೀಡಲಾಗಿದೆ ಮತ್ತು ಯಾವುದೇ ಅನಿಶ್ಚಿತತೆಯ ಸಂದರ್ಭದಲ್ಲಿ ಸಂಬಂಧಪಟ್ಟ SLDC/ RLDC ಮತ್ತು NLDC ಗೆ ವರದಿ ಮಾಡಬೇಕು ಎಂದು ವಿದ್ಯುತ್ ಸಚಿವಾಲಯ ತಿಳಿಸಿದೆ. ಆಸ್ಪತ್ರೆಗಳು, ರಕ್ಷಣೆ, ರೈಲ್ವೇ ಮುಂತಾದ ಅಗತ್ಯ ಸೇವೆಗಳಿಗೆ ವಿದ್ಯುತ್ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ವಿದ್ಯುತ್ ಸಚಿವಾಲಯ ತಮ್ಮ ಸಿಬ್ಬಂದಿಗಳಿಗೆ ಎಚ್ಚರ ವಹಿಸಲು ಸಲಹೆ ನೀಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications