ಬೆಂಗಳೂರು, ಜನವರಿ 08: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಮತ್ತು ಬುಧವಾರ(ಜ.8-9), ಕಾರ್ಮಿಕ ಸಂಘಟನೆಗಳು ಕರೆನೀಡಿರುವ 'ಭಾರತ್ ಬಂದ್' ಗೆ ವ್ಯಾಪಕ ಬೆಂಬಲ ವ್ಯಕ್ತವಾಗುವ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವೂ ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿದ್ದು, ಉಬರ್ ಮತ್ತು ಓಲಾ ಕ್ಯಾಬ್ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ.
ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬುಲೆನ್ಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಭಾರತ್ ಬಂದ್ ಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
Newest FirstOldest First
1:52 PM, 8 Jan
ಪರಿಸ್ಥತಿ ಗಮನಿಸಿ ನಾಳೆಯೂ ಶಾಲೆ-ಕಾಲೇಜುಗಳಿಗೆ ರಜೆ ನೀಡಬೇಕೋ ಬೇಡವೋ ಎಂಬ ಬಗ್ಗೆ ಆಯಾ ಶಾಲಾ-ಕಾಲೇಜುಗಳ ಅಡಳಿತ ಮಂಡಳಿ ನಿರ್ಧರಿಸಲಿದೆ .
1:46 PM, 8 Jan
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಂದ್ ಬಿಸಿ ತಟ್ಟಿಲ್ಲ. ಎಂದಿನಂತೆ ಕಾರ್ಯ ನಿರ್ವಹಿಸುತ್ತಿರುವ ಸಾರ್ವಜನಿಕ ಸಾರಿಗೆ
1:44 PM, 8 Jan
ಬೆಂಗಳೂರಿನಲ್ಲಿ ಕೆಲವೆಡೆ ಸಂಚರಿಸುತ್ತಿರುವ ಕೆ ಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು.
11:54 AM, 8 Jan
ಹಲವೆಡೆ ಚಲನಚಿತ್ರ ಪ್ರದರ್ಶನ ರದ್ದು
11:52 AM, 8 Jan
ವಿಜಯಪುರದಿಂದ ಬೆಂಗಳೂರಿಗೆ ಮಗುವಿನ ಕಣ್ಣಿನ ಚಿಕಿತ್ಸೆಗೆಂದು ಬಂದಿದ್ದ ದಂಪತಿ, ನಾರಾಯಣ ನೇತ್ರಾಲಯಕ್ಕೆ ತೆರಳಲು ವಾಹನವಿಲ್ಲದೆ ಪರದಾಡಿದ ಘಟನೆ ವರದಿಯಾಗಿದೆ.
11:51 AM, 8 Jan
ಬಳ್ಳಾರಿಯ ರಾಯಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶಾಂತಿಯುತ ಪ್ರತಿಭಟನೆ
11:01 AM, 8 Jan
ಬೃಹನ್ಮುಂಬೈ ಇಲೆಕ್ಟ್ರಿಸಿಟಿ ಸಪ್ಲೈ ಮತ್ತು ಟ್ರಾನ್ಸ್ ಪೋರ್ಟ್ ಬಸ್ ಗಳು ಮುಷ್ಕರಕ್ಕೆ ಬೆಂಬಲ ನೀಡಿರುವುದರಿಂದ ಮುಂಬೈಯಲ್ಲಿ ಸಾರಿಗೆ ಸಂಚಾರ ಸ್ತಬ್ಧವಾಗಿದೆ.
10:42 AM, 8 Jan
ರಾಜ್ಯದಲ್ಲಿ ಕೆಲೆವೆಡೆ ಒತ್ತಾಯ ಪೂರ್ವಕವಾಗಿ ಬಂದ್ ಆಚರಿಸಲು ಒತ್ತಾಯಿಸುತ್ತಿರುವ ಪ್ರತಿಭಟನಕಾರರು.
10:34 AM, 8 Jan
ಮಾಲ್ ಗಳೆಲ್ಲ ಖಾಲಿ ಖಾಲಿ. ಬಂದ್ ಭಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮನೆಯಿಂದ ಹೊರ ಸುಳಿಯದ ಜನ
10:14 AM, 8 Jan
ಯಾದಗಿರಿಯಲ್ಲಿ ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
9:50 AM, 8 Jan
ಬಂದ್ ಹಿನ್ನೆಲೆಯಲ್ಲಿಪ್ರಯಾಣಿಕರಿಂದ ಹೆಚ್ಚು ಹಣ ವಸೂಲು ಮಾಡುತ್ತಿರುವ ಆಟೋ, ಕ್ಯಾಬ್ ಚಾಲಕರು
9:45 AM, 8 Jan
ಪರಿಸ್ಥಿತಿ ನೋಡಿಕೊಂಡು ಸಾರಿಗೆ ಸಂಚಾರವನ್ನು ಆರಂಭಿಸಲು ಪ್ರಯತ್ನಿಸುತ್ತೇವೆ: ಡಿಸಿ ತಮ್ಮಣ್ಣ, ಸಾರಿಗೆ ಸಚಿವ
9:30 AM, 8 Jan
ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ, ದಾವಣಗೆರೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿದ ಕೆಎಸ್ ಆರ್ ಟಿಸಿ
9:15 AM, 8 Jan
ಬಣಗುಡುತ್ತಿರುವ ಬಸ್ ನಿಲ್ದಾಣಗಳಲ್ಲಿ ಕ್ರಿಕೆಟ್ ಆಡುತ್ತಿರುವ ಯುವಕರು!
9:04 AM, 8 Jan
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಸ್ ಗಳಿಲ್ಲದೆ ಪರದಾಟ
8:57 AM, 8 Jan
#Karnataka: 48-hour nationwide strike called by Central Trade Unions demanding minimum wages, social security schemes & against privatisation of public and government sector; Visuals from Hubli pic.twitter.com/Gr6so1MwTJ
ಹುಬ್ಬಳ್ಳಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಬಂದ್ ಬೆಂಬಲಿಸುತ್ತಿರುವ ಕಾರ್ಮಿಕ ಸಂಘಟನೆಗಳು
8:29 AM, 8 Jan
ಎಂದಿನಂತೆ ತೆರೆದಿರುವ ಇಂದಿರಾ ಕ್ಯಾಂಟೀನ್
8:26 AM, 8 Jan
ಬಲವಂತವಾಗಿ ಬಂದ್ ಮಾಡಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಡಿಜಿಪಿ & ಐಜಿ ನೀಲಮಣಿ ರಾಜು ಎಚ್ಚರಿಕೆ
8:22 AM, 8 Jan
ಕೆಎಸ್ ಆರ್ ಟಿಸಿ ಡಿಪೋ ಬಳಿ ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ
8:21 AM, 8 Jan
ಧಾರವಾಡದಲ್ಲಿ ಬಸ್ ಘಟಕ 1ರಲ್ಲಿ ಧರಣಿ
8:20 AM, 8 Jan
ಮಲ್ಲೇಶ್ವರದಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
7:57 AM, 8 Jan
ಬೆಂಗಳೂರಿನಾದ್ಯಂತ ಬಿಗಿ ಭದ್ರತೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಕಟ್ಟೆಚ್ಚರ
7:29 AM, 8 Jan
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಕಾರ್ಮಿಕರ ಪ್ರತಿಭಟನೆ
7:28 AM, 8 Jan
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
7:27 AM, 8 Jan
ಅರಿಶಿನಕುಂಟೆಯಲ್ಲಿ ಬಿ ಎಂಟಿಸಿ ಬಸ್ ಮೇಲೆ ಕಲ್ಲುತೂರಾಟ
7:27 AM, 8 Jan
ರಾಜ್ಯದ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧ. ಮನೆಯಿಂದ ಆಚೆ ಹೋಗುವವರು ಸ್ವಂತ ವಾಹನ ಬಳಸುವುದು ಉತ್ತಮ
7:26 AM, 8 Jan
ಪ್ರತಿಭಟನಕಾರರು ಹೊಸ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕಾರ್ಮಿಕರ ವೇತನ ಹೆಚ್ಚಳ, ಸಾರ್ವಜನಿಕ ಮತ್ತು ಸರ್ಕಾರಿ ವಿಭಾಗಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿಯೂ ಬಂದ್ ನಡೆಯುತ್ತಿದೆ.
7:22 AM, 8 Jan
ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
7:21 AM, 8 Jan
ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಲ್ಪಿಎಫ್ ಸೇರಿದಂತೆ ಇತರೆ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ರಾಷ್ಟ್ರವ್ಯಾಪ್ತಿ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಂಡಿವೆ.
7:20 AM, 8 Jan
ಆಂಬುಲೆನ್ಸ್ ಗೆ ದಾರಿ ಬಿಡದಿರುವುದಕ್ಕೆ ರೂ.10 ಸಾವಿರ ದಂಡ ಮತ್ತು 6 ತಿಂಗಳ ಜೈಲು ವಿಧಿಸಲಾಗುತ್ತದೆ. ವಿಮೆ ಇಲ್ಲದೆ ಚಾಲನೆಗೆ ರೂ.2 ಸಾವಿರ ದಂಡ ಮತ್ತು ಆರು ತಿಂಗಳ ಜೈಲು ವಿಧಿಸಲಾಗುತ್ತದೆ ಇದಕ್ಕೆ ಮುಷ್ಕರನಿರತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
READ MORE
7:19 AM, 8 Jan
ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಬಂದ್ ನಡೆಯುತ್ತಿದೆ.
7:20 AM, 8 Jan
ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಮಸೂದೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ರೂ.100ರಿಂದ ಕನಿಷ್ಠ ರೂ.500 ಹಾಗೂ ಗರಿಷ್ಠ 500, ಅತಿವೇಗಕ್ಕೆ ರೂ.400 ರಿಂದ ರೂ.1000, ನಿರ್ಲಕ್ಷ್ಯದ ಚಾಲನೆಗೆ ರೂ.1000 ರಿಂದ ರೂ.5000 ಹೆಚ್ಚಿಸಲಾಗಿದೆ ಇದನ್ನು ವಿರೋಧಿಸಿ ಬಂದ್ ನಡೆಯಗುತ್ತಿದೆ.
7:20 AM, 8 Jan
ಆಂಬುಲೆನ್ಸ್ ಗೆ ದಾರಿ ಬಿಡದಿರುವುದಕ್ಕೆ ರೂ.10 ಸಾವಿರ ದಂಡ ಮತ್ತು 6 ತಿಂಗಳ ಜೈಲು ವಿಧಿಸಲಾಗುತ್ತದೆ. ವಿಮೆ ಇಲ್ಲದೆ ಚಾಲನೆಗೆ ರೂ.2 ಸಾವಿರ ದಂಡ ಮತ್ತು ಆರು ತಿಂಗಳ ಜೈಲು ವಿಧಿಸಲಾಗುತ್ತದೆ ಇದಕ್ಕೆ ಮುಷ್ಕರನಿರತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
7:21 AM, 8 Jan
ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಲ್ಪಿಎಫ್ ಸೇರಿದಂತೆ ಇತರೆ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ರಾಷ್ಟ್ರವ್ಯಾಪ್ತಿ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಂಡಿವೆ.
7:22 AM, 8 Jan
ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
7:26 AM, 8 Jan
ಪ್ರತಿಭಟನಕಾರರು ಹೊಸ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕಾರ್ಮಿಕರ ವೇತನ ಹೆಚ್ಚಳ, ಸಾರ್ವಜನಿಕ ಮತ್ತು ಸರ್ಕಾರಿ ವಿಭಾಗಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿಯೂ ಬಂದ್ ನಡೆಯುತ್ತಿದೆ.
7:27 AM, 8 Jan
ರಾಜ್ಯದ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧ. ಮನೆಯಿಂದ ಆಚೆ ಹೋಗುವವರು ಸ್ವಂತ ವಾಹನ ಬಳಸುವುದು ಉತ್ತಮ
7:27 AM, 8 Jan
ಅರಿಶಿನಕುಂಟೆಯಲ್ಲಿ ಬಿ ಎಂಟಿಸಿ ಬಸ್ ಮೇಲೆ ಕಲ್ಲುತೂರಾಟ
7:28 AM, 8 Jan
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
7:29 AM, 8 Jan
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಕಾರ್ಮಿಕರ ಪ್ರತಿಭಟನೆ
7:57 AM, 8 Jan
ಬೆಂಗಳೂರಿನಾದ್ಯಂತ ಬಿಗಿ ಭದ್ರತೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಕಟ್ಟೆಚ್ಚರ
8:20 AM, 8 Jan
ಮಲ್ಲೇಶ್ವರದಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
8:21 AM, 8 Jan
ಧಾರವಾಡದಲ್ಲಿ ಬಸ್ ಘಟಕ 1ರಲ್ಲಿ ಧರಣಿ
8:22 AM, 8 Jan
ಕೆಎಸ್ ಆರ್ ಟಿಸಿ ಡಿಪೋ ಬಳಿ ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ
8:26 AM, 8 Jan
ಬಲವಂತವಾಗಿ ಬಂದ್ ಮಾಡಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಡಿಜಿಪಿ & ಐಜಿ ನೀಲಮಣಿ ರಾಜು ಎಚ್ಚರಿಕೆ
8:29 AM, 8 Jan
ಎಂದಿನಂತೆ ತೆರೆದಿರುವ ಇಂದಿರಾ ಕ್ಯಾಂಟೀನ್
8:57 AM, 8 Jan
#Karnataka: 48-hour nationwide strike called by Central Trade Unions demanding minimum wages, social security schemes & against privatisation of public and government sector; Visuals from Hubli pic.twitter.com/Gr6so1MwTJ
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more