ಇಂದು ಭಾರತ್ ಬಂದ್: ಉತ್ತರ ಭಾರತದಲ್ಲಿ ಪ್ರಕ್ಷುಬ್ದ ವಾತಾವರಣ
ಲುಧಿಯಾನಾ/ ಪಾಟ್ನಾ/ಆಗ್ರಾ, ಏಪ್ರಿಲ್ 02: ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ಇತ್ತಿಚೆಗೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ವಿರೋಧಿಸಿ ದಲಿತ ಸಂಘಟನೆಗಳು ಇಂದು(ಏ. 02) ಕರೆ ನೀಡಿರುವ 'ಭಾರತ್ ಬಂದ್' ಉತ್ತರ ಭಾರತದಾದ್ಯಂತ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
1989 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಬಂದ್ ನಡೆಯುತ್ತಿದ್ದು, ಪಂಜಾಬಿನ ಲುಧಿಯಾನಾ, ಬಿಹಾರದ ಪಾಟ್ನಾ, ಉತ್ತರ ಪ್ರದೇಶದ ಆಗ್ರಾ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನದ ಹಲವು ಸ್ಥಳಗಳಲ್ಲಿ ಗಲಭೆ ಎಬ್ಬಿಸಿವೆ.
#WATCH #BharatBandh over SC/ST protection act: Clash between protesters and Police in Ranchi. Several people injured #Jharkhand pic.twitter.com/nYc19J6oUu
— ANI (@ANI) April 2, 2018
ಈ ಕಾಯ್ದೆಯನ್ವಯ ಎಸ್ಸಿ ಮತ್ತು ಎಸ್ಟಿ ಪಂಗಡಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯದ ದೂರು ಬಂದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಈ ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ತಪ್ಪಿಸುವ ಸಲುವಾಗಿ ಸುಪ್ರೀಂ ಕೋರ್ಟ್, ಯಾವುದೇ ದೂರು ಬಂದರೂ ಪ್ರಾಥಮಿಕ ಡಿಎಸ್ ಪಿ ತನಿಖೆಯ ನಂತರವೇ ಕ್ರಮ ಕೈಗೊಳ್ಳುವಂತೆ ತೀರ್ಪು ನೀಡಿತ್ತು.

ಈ ತೀರ್ಪಿನಿಂದ ಎಸ್ಟಿ, ಎಸ್ಟಿಗಳ ಹಕ್ಕನ್ನು ಕಸಿದಂತಾಗುತ್ತದೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತವೆ ಎಂದು ದೂರಿ ವಿವಿಧ ದಲಿತಪರ ಸಂಘಟನೆಗಳು ಏ.2 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು.












Click it and Unblock the Notifications