ತಿಳಿಯಾಗಿಲ್ಲ ಉತ್ತರ ಭಾರತ, ಶಾಲಾ ಕಾಲೇಜುಗಳಿಗೆ ಇಂದು ಸಹ ರಜೆ
ಆಗ್ರಾ, ಏಪ್ರಿಲ್ 03: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ವಿವಿಧ ದಲಿತ ಸಂಘಟನೆಗಳು ನಿನ್ನೆ(ಏ.2) ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಇಂದು ಸಹ ಉತ್ತರ ಭಾರತದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಉತ್ತರ ಭಾರತದಾದ್ಯಂತ ನಿನ್ನೆ ಪ್ರಕ್ಷುಬ್ದ ವಾತಾವರಣ ತಲೆದೋರಿದ್ದರಿದ್ದ 10 ಜನ ಸಾವಿಗೀಡಾಗಿದ್ದರು. ಪ್ರತಿಭಟನೆಯ ಕಾವು ಇನ್ನೂ ಆರಿರದ ಕಾರಣ, ಅಹಿತಕರ ಘಟನೆಗಳನ್ನು ತಪ್ಪಿಸಲು ಆಗ್ರಾ, ಹಾಪುರ, ಘಾಜಿಯಾಬಾದ್, ಮೀರತ್ ನ ಶಾಲಾ ಕಾಲೇಜುಗಳಿಗೆ ಮಂಗಳಚಾರ ಸಹ ರಜಾ ಘೋಷಿಸಿರುವುದಾಗಿ ಸರ್ಕಾರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಏ.2 ರ ಭಾರತ ಬಂದ್: ತಿಳಿಯಬೇಕಾದ 10 ಸಂಗತಿ
1989 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಬಂದ್ ನಡೆದಿತ್ತು, ಪಂಜಾಬ್, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನದ ಹಲವು ಸ್ಥಳಗಳಲ್ಲಿ ಗಲಭೆ ಎದ್ದಿತ್ತು.
ಈ ಕಾಯ್ದೆಯನ್ವಯ ಎಸ್ಸಿ ಮತ್ತು ಎಸ್ಟಿ ಪಂಗಡಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯದ ದೂರು ಬಂದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಈ ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ತಪ್ಪಿಸುವ ಸಲುವಾಗಿ ಸುಪ್ರೀಂ ಕೋರ್ಟ್, ಯಾವುದೇ ದೂರು ಬಂದರೂ ಪ್ರಾಥಮಿಕ ಡಿಎಸ್ ಪಿ ತನಿಖೆಯ ನಂತರವೇ ಕ್ರಮ ಕೈಗೊಳ್ಳುವಂತೆ ತೀರ್ಪು ನೀಡಿತ್ತು. ಮತ್ತು ಆರೋಪಿಗೆ ಜಾಮೀನು ಪಡೆಯುವುದಕ್ಕೂ ಅವಕಾಶ ನೀಡಿತ್ತು.. ಈ ಕ್ರಮದಿಂದ ದಲಿತರ ಹಕ್ಕನ್ನು ಕಸಿದಂತಾಗುತ್ತದೆ ಎಂದು ಪ್ರತಿಭಟನೆ ನಡೆಯುತ್ತಿದೆ.