ಭಾರತ್ ಬಂದ್: ಎಲ್ಲಿಯೂ ಪ್ರತಿಭಟನೆಯ ಬಿಸಿ ತಟ್ಟಿಲ್ಲ!
ಬೆಂಗಳೂರು, ಜನವರಿ 09: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಮತ್ತು ಬುಧವಾರ(ಜ.8-9), ಕಾರ್ಮಿಕ ಸಂಘಟನೆಗಳು ಕರೆನೀಡಿದ್ದ 'ಭಾರತ್ ಬಂದ್' ಗೆ ಮಂಗಳವಾರ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಒಟ್ಟು 12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶವ್ಯಾಪಿ ಮುಷ್ಕರ ನಡೆಸಲಾಗುತ್ತಿದ್ದು, ಜನವರಿ 8 ರ ಬೆಳಿಗ್ಗೆ 6 ರಿಂದ ಮುಷ್ಕರ ಆರಂಭವಾಗಿದ್ದು, ಜನವರಿ 9 ರ ಸಂಜೆ 5 ರವರೆಗೂ ಮುಂದುವರಿಯಲಿದೆ.
ಚಿತ್ರಗಳು : ಕಾರ್ಮಿಕ ಸಂಘಟನೆಗಳ ಭಾರತ್ ಬಂದ್ ಹೇಗಿತ್ತು

ಬಂದ್ ಕಾರಣ ಇಂದು ಸಹ ಕರ್ನಾಟಕದ ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿದ್ದು, ಉಬರ್ ಮತ್ತು ಓಲಾ ಕ್ಯಾಬ್ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ.
ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬುಲೆನ್ಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಭಾರತ್ ಬಂದ್ ಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕರ ಪ್ರತಿಭಟನೆ. ರಸ್ತೆಯಲ್ಲೇ ಕೂತು ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು
ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ಮೆಟ್ರೋ ಮೊರೆಹೋಗಿದ್ದಾರೆ
ಬೆಂಗಳೂರಿನ ಟೌನ್ ಹಾಲ್ ಬಳಿ ಕಾರ್ಮಿಕರ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿಬಂದೋಬಸ್ತ್
ಹುಬ್ಬಳ್ಳಿಯಲ್ಲಿ ಎಂದಿನಂತೇ ಶಾಲಾ-ಕಾಲೇಜ್, ಹೊಟೇಲ್, ಪೆಟ್ರೋಲ್ ಬಂಕ್ ತೆರೆದಿದ್ದು, ಬಸ್ ಸಂಚಾರವೂ ಆರಂಭವಾಗಿದೆ.
ಕೊಪ್ಪಳದ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ರಜೆ ನೀಡದಿದ್ದರೂ ಜಿಲ್ಲಾಧಿಕಾರಿ ಆದೇಶಕ್ಕೂ ಕ್ಯಾರೇ ಎನ್ನದೆ ಕಾಲೇಜಿಗೆ ಹಾಜರಾಗದ ಉಪನ್ಯಾಸಕರು
ಏರ್ ಪೂರ್ಟ್ ರಸ್ತೆ, ಸುಂಕದಕಟ್ಟೆ ಮುಂತಾದ ಕಡೆಗಳಲ್ಲಿ ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲುತೂರಾಟ
ಹುಬ್ಬಳ್ಳಿಯಲ್ಲಿ ಬಂದ್ ಬಿಸಿ ತಟ್ಟಿದ ಕುರುಹುಗಳು ಕಂಡುಬರುತ್ತಿಲ್ಲ. ಜನಜೀವನ ಸಹಜ ಸ್ಥಿತಿಗೆ ಮರಳಿದೆ.
ಬಿಎಂಟಿಸಿ ಬಸ್ ಸಂಚಾರ ಆರಂಭಿಸಿದ್ದವಾದರೂ, ಕೆಲವೆಡೆ ಬಸ್ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಗಳು ಕೇಳಿಬಂದ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ
ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಬಂದ್ ನಡೆಯುತ್ತಿದೆ.
ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಮಸೂದೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ರೂ.100ರಿಂದ ಕನಿಷ್ಠ ರೂ.500 ಹಾಗೂ ಗರಿಷ್ಠ 500, ಅತಿವೇಗಕ್ಕೆ ರೂ.400 ರಿಂದ ರೂ.1000, ನಿರ್ಲಕ್ಷ್ಯದ ಚಾಲನೆಗೆ ರೂ.1000 ರಿಂದ ರೂ.5000 ಹೆಚ್ಚಿಸಲಾಗಿದೆ ಇದನ್ನು ವಿರೋಧಿಸಿ ಬಂದ್ ನಡೆಯಗುತ್ತಿದೆ.
ಆಂಬುಲೆನ್ಸ್ ಗೆ ದಾರಿ ಬಿಡದಿರುವುದಕ್ಕೆ ರೂ.10 ಸಾವಿರ ದಂಡ ಮತ್ತು 6 ತಿಂಗಳ ಜೈಲು ವಿಧಿಸಲಾಗುತ್ತದೆ. ವಿಮೆ ಇಲ್ಲದೆ ಚಾಲನೆಗೆ ರೂ.2 ಸಾವಿರ ದಂಡ ಮತ್ತು ಆರು ತಿಂಗಳ ಜೈಲು ವಿಧಿಸಲಾಗುತ್ತದೆ ಇದಕ್ಕೆ ಮುಷ್ಕರನಿರತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಲ್ಪಿಎಫ್ ಸೇರಿದಂತೆ ಇತರೆ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ರಾಷ್ಟ್ರವ್ಯಾಪ್ತಿ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಂಡಿವೆ.












Click it and Unblock the Notifications