Bharat Bandh: ಭಾರತ್ ಬಂದ್- ಶಾಲಾ ಮಕ್ಕಳಿದ್ದ ಬಸ್ಗೆ ಬೆಂಕಿ ಹಚ್ಚಲು ಯತ್ನ!
ಬಿಹಾರ ಆಗಸ್ಟ್ 22: ಎಸ್ಸಿ/ಎಸ್ಟಿ ಮೀಸಲಾತಿ ವಿರೋಧಿಸಿ ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಬಿಹಾರದ ಗೋಪಾಲ್ಗಂಜ್ನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ನಗರದ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲು ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಈ ವೇಳೆ ಉರಿಯುತ್ತಿರುವ ಟೈರ್ಗಳ ಮೇಲೆ ಶಾಲಾ ಬಸ್ಸುವೊಂದು ಹಾದು ಹೋಗಿದೆ.
ಬಸ್ನಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದರು. ಬಸ್ಗೆ ಬೆಂಕಿ ತಗುಲುವ ಮುನ್ನವೇ ಮುಂದಕ್ಕೆ ಚಲಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಆದರೆ ಪ್ರತಿಭಟನಾಕಾರರು ಶಾಲಾ ಬಸ್ಗೆ ಬೆಂಕಿ ಹಚ್ಚಲು ಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಗೋಪಾಲಗಂಜ್ನಲ್ಲಿ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಅರಾರ್ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕೆಲ ಪ್ರತಿಭಟನಾಕಾರರು ಸಂಚಾರ ಸ್ಥಗಿತಗೊಳಿಸಿದರು. ಅಷ್ಟರಲ್ಲಿ ಮಕ್ಕಳಿಂದ ತುಂಬಿದ ಶಾಲಾ ಬಸ್ಸು ಹಾದು ಹೋಗುತ್ತಿತ್ತು.
ಬಸ್ಸನ ಹಿಂದಿನ ಒಂದು ಚಕ್ರ ಉರಿಯುತ್ತಿರುವ ಟೈರ್ ಮೇಲಿಂದ ಸಾಗಿದೆ. ಇದರಿಂದ ಬಸ್ನ ಟೈರ್ಗೆ ಬೆಂಕಿ ಹೊತ್ತಿದೆ. ಸ್ಥಳದಲ್ಲಿದ್ದ ಕೆಲವರು ಬೆಂಕಿ ಹಚ್ಚಿದ ಟೈರ್ ಅನ್ನು ಕಟ್ಟಿಗೆಯಿಂದ ತೆಗೆಯಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ಆದರೆ ಚಾಲಕ ಬಸ್ ಅನ್ನು ಮುಂದಕ್ಕೆ ಚಲಿಸಿದ್ದರಿಂದ ಬೆಂಕಿ ಹೊತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಭಾರೀ ಅನಾಹುತ ತಪ್ಪಿದೆ. ಆದರೆ ಪ್ರತಿಭಟನಾಕಾರರು ಬಸ್ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಹೀಗಾಗಿ ಡ್ರೋನ್ ಕ್ಯಾಮೆರಾ ಬಳಸಿ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಗುರುತಿಸಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಜೈಲಿಗೆ ಕಳುಹಿಸುವಂತೆ ಗೋಪಾಲಗಂಜ್ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ದುಷ್ಕರ್ಮಿಗಳು ಬಸ್ ಸುಡಲು ಯತ್ನಿಸಿದರು: ಪೊಲೀಸರು
ದೃಶ್ಯದ ವೀಡಿಯೊದಲ್ಲಿ ಪ್ರತಿಭಟನಾಕಾರರು ಬಸ್ಗೆ ಬೆಂಕಿ ಹಚ್ಚಲು ಪ್ರಯತ್ನಿಸುತ್ತಿರುವುದು ಕಂಡುಬಂದಿಲ್ಲ. ಆದರೆ ಅವರು ಹಾಗೆಯೇ ಮಾಡಿದ್ದಾರೆ ಎಂದು ಪೊಲೀಸರು ಹೇಳುತ್ತಾರೆ.
बड़ा हादसा टला..
— NDTV India (@ndtvindia) August 21, 2024
बिहार में भारत बंद के दौरान चलते हुए टायरों पर से गुजरी बच्चों से भरी स्कूल बस. गोपालगंज में प्रदर्शनकारियों ने सड़क पर टायर जलाकर आवागमन ठप किया, लोगों से बदसलूकी करते हुए नजर आए आंदोलनकारी.#Bihar । #BharatBandh pic.twitter.com/Eu4N1djut7
ಈ ಬಗ್ಗೆ ಮಾತನಾಡಿದ ಗೋಪಾಲಗಂಜ್ ಎಸ್ಪಿ ಸ್ವರ್ಣ್ ಪ್ರಭಾತ್, ಭಾರತ್ ಬಂದ್ ಕುರಿತು ಗೋಪಾಲಗಂಜ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳು ಮತ್ತು ಮ್ಯಾಜಿಸ್ಟ್ರೇಟ್ಗಳನ್ನು ನಿಯೋಜಿಸಲಾಗಿದೆ. ನಗರದ ಅರಾರ್ ತಿರುವಿನಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಡ್ರೋನ್ ಕ್ಯಾಮರಾ ಮೂಲಕ ಕೆಲವರನ್ನು ಗುರುತಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಬಸ್ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ಕಿಡಿಗೇಡಿಗಳನ್ನು ಗುರುತಿಸಿ ಎಫ್ಐಆರ್ ದಾಖಲಿಸುವಂತೆ ನಗರ ಠಾಣೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹಿರಿಯ ನಾಗರಿಕರಿಗೆ ಬೆಂಗಳೂರಲ್ಲಿ ಉದ್ಯೋಗ ಮೇಳ
ಪ್ರತಿಭಟನಾಕಾರರಿಂದ ಪಾದಚಾರಿಗಳಿಗೆ ಕಿರುಕುಳ:
ದೃಶ್ಯದ ಇತರ ವೀಡಿಯೊಗಳಲ್ಲಿ, ಪ್ರತಿಭಟನಾಕಾರರು ಸಾಮಾನ್ಯ ಜನರನ್ನು ರಸ್ತೆಯಲ್ಲಿ ಹಾದುಹೋಗದಂತೆ ತಡೆಯುವುದನ್ನು ಕಾಣಬಹುದು. ಕೋಲುಗಳಿಂದ ಜನರನ್ನು ಬೆದರಿಸುವ ದೃಶ್ಯವೂ ಕಂಡು ಬಂದಿದೆ. ವೀಡಿಯೋದಲ್ಲಿ ಅವರು ಬೈಕು ಸವಾರಿ ಮಾಡುತ್ತಿರುವ ಪುರುಷ ಮತ್ತು ಮಹಿಳೆಯನ್ನು ಸುತ್ತುವರೆದು ಅವರನ್ನು ಬೆದರಿಸಿ ಬೈಕು ಹಿಂದಕ್ಕೆ ತಳ್ಳುತ್ತಿರುವುದು ಕಂಡು ಬಂದಿದೆ. ದ್ವಿಚಕ್ರ ವಾಹನ ಸವಾರರಿಗೂ ಅಲ್ಲಿಂದ ವಾಪಸ್ ತೆರಳುವಂತೆ ಒತ್ತಾಯಿಸಿರುವುದನ್ನು ಕಾಣಬಹುದು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications