ಭಾರತ ಬಂದ್: ರೈತರ ಪ್ರತಿಭಟನೆ ಕುರಿತು ಸಚಿವ ತೋಮರ್ ಹೇಳಿದ್ದೇನು?
ಗ್ವಾಲಿಯರ್, ಸೆಪ್ಟೆಂಬರ್ 27: ರೈತರು ಪ್ರತಿಭಟನೆಯನ್ನು ಬಿಟ್ಟು ಮಾತುಕತೆಗೆ ಬರಲಿ ಎಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಮೂರು ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈಲು ಇಂದು( ಸೆ.27) ಭಾರತ ಬಂದ್ಗೆ ಕರೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು ರೈತರು ಪ್ರತಿಭಟನೆ ಹಾದಿ ಬಿಟ್ಟು ಮಾತುಕತೆಗೆ ಬಂದರೆ ಉತ್ತಮ ಎಂದಿದ್ದಾರೆ.
ಈ ಬೆಳವಣಿಗೆ ಕುರಿತು ಗ್ವಾಲಿಯರ್ ನ ಕೃಷಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ತೋಮರ್ ಅವರು, ಪ್ರತಿಭಟನಾ ಹಾದಿ ಬಿಡುವಂತೆ ರೈತರ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ.

ರೈತರು ಎತ್ತಿರುವ ವಿರೋಧಗಳನ್ನು ಪರಿಗಣಿಸಲು ಸರ್ಕಾರ ಸಿದ್ಧವಿದೆ. ಈ ಹಿಂದೆ ಕೂಡ ಸಾಕಷ್ಟು ಬಾರಿ ಮಾತುಕತೆಗಳು ನಡೆದಿವೆ. ಇನ್ನೂ ಮಾತುಕತೆ ನಡೆಸಬೇಕೆಂದಿದ್ದರೆ, ಮಾತುಕತೆಗೆ ಸರ್ಕಾರ ಸಿದ್ಧವಿದೆ. ರೈತರ ಪ್ರತಿಭಟನೆ ರಾಜಕೀಯ ವಿಚಾರವಾಗಬಾರದು ಎಂದು ಹೇಳಿದ್ದಾರೆ.
ರೈತರ ಪ್ರತಿಭಟನೆ ರಾಜಕೀಯದೊಂದಿಗೆ ಮಿಶ್ರಿತಗೊಳ್ಳಬಾರದು. ರೈತರು ಎಲ್ಲರಿಗೂ ಸೇರಿದವರಾಗಿದ್ದಾರೆ. ಸರ್ಕಾರವು ರೈತರ ಒಕ್ಕೂಟದೊಂದಿಗೆ ಬಹಳ ಸೂಕ್ಷ್ಮವಾಗಿ ಮಾತುಕತೆ ನಡೆಸಿದೆ ಮತ್ತು ಭವಿಷ್ಯದಲ್ಲಿಯೂ ಇದನ್ನು ಮಾಡಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿರುವ ರೈತರು ಇಂದು ದೇಶಾದ್ಯಂತ ಭಾರತ ಬಂದ್ ಗೆ ಕರೆ ನೀಡಿದ್ದಾರೆ. ಏತನ್ಮಧ್ಯೆ, ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟೀಕಾಯತ್ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
ಕಳೆದ ಹತ್ತು ತಿಂಗಳಿನಿಂದ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತರು ಹತ್ತು ವರ್ಷಗಳ ಕಾಲ ಆಂದೋಲನ ಮಾಡಲು ಸಿದ್ಧರಿದ್ದಾರೆ, ಆದರೆ ಈ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತರಲು ಅನುಮತಿಸುವುದಿಲ್ಲ ಎಂದು ರಾಕೇಶ್ ಟಿಕೈಟ್ ಹೇಳಿದರು.
ಪಂಜಾಬ್ , ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶಾದ್ಯಂತ ಸಾವಿರಾರು ರೈತರು ಕಳೆದ ಹತ್ತು ತಿಂಗಳುಗಳಿಂದ ದೆಹಲಿಯ ಗಡಿಯಲ್ಲಿ ಧರಣಿ ಕುಳಿತಿದ್ದಾರೆ ಮತ್ತು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಜಾರಿಗೊಳಿಸಿದ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ನಾವು ಹತ್ತು ವರ್ಷಗಳ ಕಾಲ ಆಂದೋಲನ ನಡೆಸಬೇಕಾದರೂ ನಾವು ಸಿದ್ಧರಿದ್ದೇವೆ ಎಂಬುದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರವು ಈ ಕಾನೂನುಗಳನ್ನು ಹಿಂಪಡೆಯಬೇಕು ಎಂದರು.
ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಭಾಗಶಃ ಬಂದ್ ಆಗುವ ಸಾಧ್ಯತೆ ಇದೆ. ರಾಜ್ಯ ರೈತ ಸಂಘ ಬಹುತೇಕ ರಾಜ್ಯದ ಎಲ್ಲ ಕಡೆ ರಸ್ತೆ ಚಳವಳಿ ನಡೆಸುವ ಕಾರಣ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಬೆಂಗಳೂರು ವಿವಿ ಸೇರಿದಂತೆ ನಾಳೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಒಂದೂವರೆ ವರ್ಷದಿಂದ ಶಾಲಾ-ಕಾಲೇಜು ತೆರೆದಿಲ್ಲ. ಇದೀಗ ಶಾಲಾ- ಕಾಲೇಜು ಆರಂಭವಾಗಿವೆ. ಭಾರತ ಬಂದ್ ಗೆ ನೈತಿಕ ಬೆಂಬಲ ನೀಡಲಾಗುವುದು. ಎಂದಿನಂತೆ ಶಾಲಾ-ಕಾಲೇಜು ಓಪನ್ ಇರಲಿದೆ ಎಂದು ರುಪ್ಸಾ ಹಾಗೂ ಕ್ಯಾಮ್ಸ್ ಖಾಸಗಿ ಶಾಲಾ ಸಂಘಟನೆಗಳು ಸ್ಪಷ್ಟನೆ ನೀಡಿದೆ.
ರಾಜ್ಯದಲ್ಲಿ ಎಂದಿನಂತೆ ಹೋಟೆಲ್ ಮತ್ತು ರೆಸ್ಟೋರೆಂಟ್ ಸೇವೆ ಇರುತ್ತದೆ. ಭಾರತ ಬಂದ್ಗೆ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳು ನೈತಿಕ ಬೆಂಬಲ ನೀಡಿವೆ. ಹೋಟೆಲ್ ಹಾಗೂ ರೆಸ್ಟೋರೆಂಟ್ ಮುಚ್ಚಿದರೆ ತೊಂದರೆ ಆಗುತ್ತೆ. ಸೋಮವಾರ ರಾಜ್ಯಾದ್ಯಂತ ಹೋಟೆಲ್ ಹಾಗೂ ರೆಸ್ಟೋರೆಂಟ್ ಓತೆರೆದಿರುತ್ತದೆ ಎಂದು ಕರ್ನಾಟಕ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಇಂದು ಲಾರಿಗಳು, ಸರ್ಕಾರಿ ಬಸ್ಸುಗಳು, ಓಲಾ- ಊಬರ್ ಟ್ಯಾಕ್ಸಿಗಳು ಎಂದಿನಂತೆ ಸಂಚಾರ ಮಾಡಲಿವೆ. ಇವುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಆದರೆ, ರಸ್ತೆ ತಡೆ ನಡೆಸುವುದರಿಂದ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಪರಿಸ್ಥಿತಿ ನೋಡಿಕೊಂಡು ಅಲ್ಲಿನ ಜಿಲ್ಲಾಧಿಕಾರಿಗಳು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications