ಬೆತ್ತಲಾಗಿ ತಿರುಗಾಡಿ ಎಂದು ರಾಹುಲ್ ಬೆಂಬಲಿಗರಿಗೆ ಹೇಳಿದ ಬಿಜೆಪಿ ನಾಯಕ
ನವದೆಹಲಿ, ಡಿಸೆಂಬರ್ 27: ರಾಹುಲ್ ಗಾಂಧಿಯನ್ನು ರಾಮನಿಗೆ ಹೋಲಿಸಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ವಿಚಾರವಾಗಿ ಮಾತನಾಡಿರುವ ಬಿಜೆಪಿ ನಾಯಕ ದುಷ್ಯಂತ್ ಗೌತಮ್, 'ರಾಹುಲ್ ಗಾಂಧಿ ರಾಮನ ಅವತಾರವಾಗಿದ್ದಾರೆಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಚಳಿಯಲ್ಲೂ ತಣ್ಣಗಾಗದಂತೆ ಇರಲು ಅವರು ಏನು ತಿನ್ನುತ್ತಾರೆಂದು ತಮ್ಮ ಸೇನೆಗೆ(ಬೆಂಬಲಿಗರು) ತಿಳಿಸಲಿ. ಅವರ ಸೇನೆ ಏಕೆ ಬಟ್ಟೆಯಿಲ್ಲದೆ ತಿರುಗುವುದಿಲ್ಲ. ಕಾಂಗ್ರೆಸ್ಸಿಗರು ಭಗವಂತನಂತೆ ಬೆತ್ತಲೆಯಾಗಿ ತಿರುಗಬೇಕು' ಎಂದು ಹೇಳಿದ್ದಾರೆ.
'ನಾವು ಚಳಿಯಲ್ಲಿ ಹೆಪ್ಪುಗಟ್ಟುತ್ತಿದ್ದೇವೆ. ಜಾಕೆಟ್ ಅನ್ನು ಧರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಟೀ-ಶರ್ಟ್ಗಳಲ್ಲಿ ಹೊರಗೆ ಹೋಗುತ್ತಿದ್ದಾರೆ. ತಪಸ್ಸು ಮಾಡುವ ಯೋಗಿಯಂತೆ ಭಾಸವಾಗುತ್ತಿದ್ದಾರೆ' ಎಂದು ಸಲ್ಮಾನ್ ಖುರ್ಷಿದ್ ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಶನಿವಾರ ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಿದೆ. ದೆಹಲಿಯಲ್ಲಿ ಈಗ ವಿಪರೀತ ಚಳಿ ಇದೆ. ತಾಪಮಾನವನ್ನು ಐದು ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಇಂತಹ ಸಂದರ್ಭದಲ್ಲಿಯೂ ರಾಹುಲ್ ಗಾಂಧಿ ಕೇವಲ ಟೀ ಶರ್ಟ್ ತೊಟ್ಟು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆಗೆ ಪಾತ್ರವಾಗಿತ್ತು.
ಈ ವಿಚಾರವಾಗಿ ಮಾತನಾಡಿದ್ದ ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ಸುಪ್ರಿಯಾ ಶ್ರಿನೇಟ್ 'ಬಿಜೆಪಿ ನಾಯಕರು ಕಂಬಳಿಯಲ್ಲಿ ಅವಿತುಕೊಂಡಿದ್ದಾರೆ. ರಾಷ್ಟ್ರವನ್ನು ವಿಭಜಿಸಲು ಸಂಚು ಹೂಡುತ್ತಿದ್ದಾರೆ' ಎಂಬ ಟೀಕಿಸಿದ್ದರು.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಿದೆ. ಈ ಯಾತ್ರೆಯಲ್ಲಿ ಖ್ಯಾತ ನಟ ಕಮಲ್ ಹಾಸನ್ ಅವರು ಭಾಗವಹಿಸಿದ್ದರು. ಕೊರೆಯುವ ಚಳಿಯಲ್ಲಿಯೂ ರಾಹುಲ್ ಗಾಂಧಿ ಟೀ ಶರ್ಟ್ ತೊಟ್ಟು, ರಾಜಘಾಟ್ಗೆ ಭೇಟಿ ನೀಡಿ ಪ್ರಾರ್ಥಿಸಿದ್ದರು. ಮಹಾತ್ಮ ಗಾಂಧಿ, ಪಂಡಿತ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಜಿ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದರು.
ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆಯು ಈಗಾಗಲೇ ಸುಮಾರು 2800 ಕಿ.ಮೀ ದೂರ ಕ್ರಮಿಸಿದೆ. ತಮಿಳು ನಾಡು, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಹಾಗೂ ದೆಹಲಿಯಲ್ಲಿ ಕ್ರಮಿಸಿದೆ. ಜನವರಿ ಮೊದಲ ವಾರದಲ್ಲಿ ಉತ್ತರ ಪ್ರದೇಶವನ್ನು ಪ್ರವೇಶಿಸಲಿದೆ. ಉತ್ತರ ಪ್ರದೇಶದ ರಾಜಕೀಯ ನಾಯಕರಾದ ಅಖಿಲೇಶ್ ಯಾದವ್, ಮಾಯಾವತಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅವರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆ ಕೊನೆಗಳ್ಳಲಿದೆ. ಯಾತ್ರೆಗೆ ಅಪಾರ ಜನಬೆಂಬಲ ದೊರೆತಿದೆ ಎಂದು ವರದಿಯಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications