ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರಿಂದ 'ಭಾರತ್ ಜೋಡೋ ಯಾತ್ರೆ' ನಡಿಗೆ ಆರಂಭ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಹಲವಾರು ನಾಯಕರೊಂದಿಗೆ ಗುರುವಾರ (ಸೆಪ್ಟೆಂಬರ್ 08) ಕನ್ಯಾಕುಮಾರಿಯಿಂದ 'ಭಾರತ್ ಜೋಡೋ ಯಾತ್ರೆ' ಆರಂಭಿಸಿದರು. ಇದು ಸವಾಲಿನ ಪ್ರಯಾಣದ ಆರಂಭವನ್ನು ಗುರುತಿಸುತ್ತಿದ್ದು ಇದರ ಮೂಲಕ ಜನರನ್ನು ತಲುಪಲು ಮತ್ತು ಸಂಘಟನೆಯನ್ನು ಪುನಶ್ಚೇತನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಪಾದಯಾತ್ರೆಯ ಆರಂಭದ ಮೊದಲು, ಭಾರತ್ ಯಾತ್ರಿಗಳ ಶಿಬಿರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,570 ಕಿಮೀ ರಾಹುಲ್ ಗಾಂಧಿ ನಡೆಯಲಿದ್ದಾರೆ.

118 'ಭಾರತ ಯಾತ್ರಿಗಳು' ಮತ್ತು ದೇಶದಾದ್ಯಂತದ ಇತರ ಪಕ್ಷದ ನಾಯಕರೊಂದಿಗೆ ಗಾಂಧಿಯವರು ಕನ್ಯಾಕುಮಾರಿಯ ಅಗಸ್ತೇಶ್ವರಂನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು. ದ್ವೇಷದಿಂದ ತನ್ನ ದೇಶವನ್ನು ಕಳೆದುಕೊಳ್ಳುವುದಿಲ್ಲ ಎಂಬ ಪ್ರತಿಪಾದನೆಯೊಂದಿಗೆ ಪಕ್ಷದ ಮಹತ್ವಾಕಾಂಕ್ಷೆಯ 'ಭಾರತ್ ಜೋಡೋ' ಯಾತ್ರೆಗೆ ರಾಹುಲ್ ಗಾಂಧಿ ಬುಧವಾರ ಚಾಲನೆ ನೀಡಿದ್ದರು ಮತ್ತು ಬಿಜೆಪಿ-ಆರ್‌ಎಸ್‌ಎಸ್ ದೇಶವನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

Bharat Jodo Yatra started by Rahul Gandhi, Congress leaders

ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ

ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಕ್ಕಟ್ಟಿನಿಂದ ಬಳಲುತ್ತಿರುವ ಪಕ್ಷದ ಪುನರುಜ್ಜೀವನದ ಮೇಲೆ ಕಣ್ಣಿಟ್ಟಿರುವ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಈ ಮೆರವಣಿಗೆಯನ್ನು "ಒಗ್ಗೂಡಿಸುವ ಸಂದರ್ಭ" ಎಂದು ಕರೆದಿದ್ದಾರೆ. ಈ ಮೆರವಣಿಗೆಯು ಹಳೆಯ ಪಕ್ಷವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂದು ಆಶಿಸಿದರು. ಮೆರವಣಿಗೆಯು ಸುಮಾರು ಐದು ತಿಂಗಳಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲಿದೆ.

50,000 ನಾಗರಿಕರು ಯಾತ್ರೆಯಲ್ಲಿ ಭಾಗಿ

50,000 ನಾಗರಿಕರು ಯಾತ್ರೆಯಲ್ಲಿ ಭಾಗಿ

ಬೆಳಿಗ್ಗೆ 7 ರಿಂದ 10:30 ರವರೆಗೆ ಮತ್ತು ಮಧ್ಯಾಹ್ನ 3:30 ರಿಂದ 6:30 ರವರೆಗೆ ಎರಡು ಬ್ಯಾಚ್‌ಗಳಲ್ಲಿ ಮೆರವಣಿಗೆ ಸಾಗಲಿದೆ. ಬೆಳಗಿನ ಅಧಿವೇಶನವು ಕಡಿಮೆ ಭಾಗವಹಿಸುವವರನ್ನು ಒಳಗೊಂಡಿರುತ್ತದೆ. ಸಂಜೆಯ ಅಧಿವೇಶನವು ಅಧಿಕ ಸಂಖ್ಯೆಯ ಜನರನ್ನು ಒಳಗೊಂಡಿರುತ್ತದೆ. ಭಾಗವಹಿಸುವವರು ಪ್ರತಿದಿನ 22-23 ಕಿ.ಮೀ ಸುತ್ತಲು ನಡೆಯುತ್ತಾರೆ. ಇದರಲ್ಲಿ 30ರಷ್ಟು 'ಭಾರತ ಯಾತ್ರಿಗಳು' ಮಹಿಳೆಯರಿದ್ದಾರೆ. ಭಾರತ ಯಾತ್ರಿಗಳ ಸರಾಸರಿ ವಯಸ್ಸು 38. ಸುಮಾರು 50,000 ನಾಗರಿಕರು ಕೂಡ ಯಾತ್ರೆಯಲ್ಲಿ ಭಾಗವಹಿಸಲು ನೋಂದಾಯಿಸಿಕೊಂಡಿದ್ದಾರೆ.

ಯಾತ್ರೆ ಎಲ್ಲಿಂದ ಎಲ್ಲಿಗೆ ಸಾಗಲಿದೆ?

ಯಾತ್ರೆ ಎಲ್ಲಿಂದ ಎಲ್ಲಿಗೆ ಸಾಗಲಿದೆ?

ಸೆಪ್ಟೆಂಬರ್ 11 ರಂದು ಕೇರಳ ತಲುಪಿದ ನಂತರ, ಯಾತ್ರೆಯು ಮುಂದಿನ 18 ದಿನಗಳ ಕಾಲ ರಾಜ್ಯದ ಮೂಲಕ ಸಂಚರಿಸಲಿದ್ದು, ಸೆಪ್ಟೆಂಬರ್ 30 ರಂದು ಕರ್ನಾಟಕವನ್ನು ತಲುಪಲಿದೆ. ಇದು ಉತ್ತರಕ್ಕೆ ಚಲಿಸುವ ಮೊದಲು 21 ದಿನಗಳ ಕಾಲ ಕರ್ನಾಟಕದಲ್ಲಿರಲಿದೆ. ತಿರುವನಂತಪುರಂ, ಕೊಚ್ಚಿ, ನಿಲಂಬೂರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಲಗಾಂವ್, ಇಂದೋರ್, ಕೋಟಾ, ದೌಸಾ, ಅಲ್ವಾರ್, ಬುಲಂದ್‌ಶಹರ್, ದೆಹಲಿ, ಅಂಬಾಲಾ, ಪಠಾಣ್‌ಕೋಟ್ ಮೂಲಕ ಸಾಗಿ ಕೊನೆಗೆ ಜಮ್ಮು ಮತ್ತು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.

ದೇಶದ ಮೂಲೆ ಮೂಲೆಗಳಲ್ಲಿ ಜನರನ್ನು ತಲುಪುವ ಗುರಿ

ದೇಶದ ಮೂಲೆ ಮೂಲೆಗಳಲ್ಲಿ ಜನರನ್ನು ತಲುಪುವ ಗುರಿ

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಧ್ರುವೀಕರಣ ವಿಷಯಗಳನ್ನಿಟ್ಟುಕೊಂಡು ಕಾಂಗ್ರೆಸ್ ಈ ಯಾತ್ರೆಯನ್ನು ಹಮ್ಮಿಕೊಂಡಿದ್ದು ಅಕ್ಟೋಬರ್ 17ರಂದು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮುನ್ನ ಪಕ್ಷದೊಳಗೆ ಆಂತರಿಕ ಭಿನ್ನಾಭಿಪ್ರಾಯದ ಹೊತ್ತಿನಲ್ಲಿ ಈ ಯಾತ್ರೆಯನ್ನು ಹಮ್ಮಿಕೊಂಡಿದೆ. 12 ರಾಜ್ಯಗಳಲ್ಲಿ 5 ತಿಂಗಳ ಕಾಲ ನಡೆಯಲಿರುವ ಈ ಯಾತ್ರೆಯ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ಜನರನ್ನು ತಲುಪುವುದು ಪಕ್ಷದ ಗುರಿಯಾಗಿದೆ. ದೇಶದಲ್ಲಿ ರಾಜಕೀಯ ಸ್ಥಿತಿಗತಿ ಋಣಾತ್ಮಕತೆಯತ್ತ ಸಾಗುತ್ತಿದ್ದು, ಜನರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ, ಬೆಲೆ ಏರಿಕೆಯಂತಹ ಜನರ ಸಮಸ್ಯೆಗಳತ್ತ ಗಮನಹರಿಸುವುದರಿಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಪ್ರಿಯಾಂಕಾ ವಿಡಿಯೋ ಸಂದೇಶದಲ್ಲಿ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+