Operation Sindoor: ಭಾರತ ಮಾತೆಗೆ ಜಯವಾಗಲಿ... ಪಾಕಿಸ್ತಾನದ ಮೇಲೆ ದಾಳಿ ಮಾಡಿದ ನಂತರ ರಾಜನಾಥ್ ಉತ್ತರ!
ಪಾಕಿಸ್ತಾನದ ವಿರುದ್ಧ ಮತ್ತೊಮ್ಮೆ ಭಾರತೀಯ ಸೇನೆ ಗುಡುಗಿದೆ, ಹಾಗೇ ಭಾರತೀಯ ಸೇನೆ ಕೊಟ್ಟಿರುವ ಪೆಟ್ಟಿಗೆ ಪಾಕಿಸ್ತಾನ ಮಂಕಾಗಿ ಹೋಗಿದೆ. ಕಣಿವೆ ರಾಜ್ಯ ಕಾಶ್ಮೀರಕ್ಕೆ ನುಗ್ಗಿದ್ದ ಪಾಪಿ ಉಗ್ರರು ಮಾರಣಹೋಮ ನಡೆಸಿದ್ದರು. ಅಮಾಯಕ ಪ್ರವಾಸಿಗರ ಮೇಲೆ ದಾಳಿ ಮಾಡಿ, ಈ ರೀತಿ ರಕ್ತಪಾತ ನಡೆಸಿದ್ದರು ಪಾಪಿ ಉಗ್ರರು. ಇದಕ್ಕೆ ಇದೀಗ ರಿವೇಂಜ್ ತೆಗೆದುಕೊಂಡಿರುವ, ಆ ಮೂಲಕ ಸೂಕ್ತ ಉತ್ತರ ನೀಡಿರುವ ಭಾರತೀಯ ಸೇನೆ ತನ್ನ ಶಕ್ತಿ ತೋರಿಸಿದೆ. ಹೀಗಿದ್ದಾಗ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿರುವುದು ಏನು ಗೊತ್ತೆ?
ಪಾಕಿಸ್ತಾನ ಉದ್ಧಾರ ಆಗುವ ಕೆಲಸಕ್ಕಿಂತ ಹಾಳು ಮಾಡುವ ಕೆಲಸವನ್ನೇ ಹೆಚ್ಚಿಸಿದೆ. ಪಾಕಿಸ್ತಾನ ಉಗ್ರರ ಕಾರ್ಖಾನೆ ಆಗಿ, ಪದೇ ಪದೇ ಅಲ್ಲಿಂದಲೇ ಉಗ್ರರು ನುಸುಳಿ ಬರ್ತಾ ಇದ್ದಾರೆ. ಈಗಲೂ ಪಾಕಿಸ್ತಾನದ ಮೂಲಕ ನುಗ್ಗಿ ಬಂದಿದ್ದ ಉಗ್ರರು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ದಾಳಿಯ ನಡೆಸಿ 26 ಜನರನ್ನ ಕೊಲೆ ಮಾಡಿದ್ದರು. ಏಪ್ರಿಲ್ 22ರ ಮಂಗಳವಾರ ಉಗ್ರರ ದಾಳಿಯಲ್ಲಿ 26 ಭಾರತೀಯರು ಬಲಿಯಾದ ಹಿನ್ನೆಲೆ ಭಾರತ ಸೇಡು ತೀರಿಸಿಕೊಳ್ಳಲು ಸಜ್ಜಾಗಿತ್ತು. ಆ ಸೇಡು ಇಂದು ಪೂರ್ಣಗೊಂಡಿದೆ. ಇದೇ ಸಮಯದಲ್ಲಿ ರಕ್ಷಣಾ ಸಚಿವರು ಕೂಡ ಮಹತ್ವದ ಹೇಳಿಕೆ ನೀಡಿದ್ದಾರೆ!

ಭಾರತ ಮಾತೆಗೆ ಜಯವಾಗಲಿ...
ಹೌದು, ಇದೀಗ ಭಾರತದ ಸೇನೆಯಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅಂದ್ರೆ ಪಿಒಕೆ ಮೇಲೆ ದಾಳಿ ನಡೆಸಲಾಗಿದೆ. ಉಗ್ರರ ಫ್ಯಾಕ್ಟರಿಯಂತೆ ಆಗಿರುವ ಪಾಕಿಸ್ತಾನದ ಗಡಿ ಭಾಗದಲ್ಲಿ ಹೀಗೆ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಪಾಪಿ ಪಾಕಿಸ್ತಾನ ಗಡಿಭಾಗದಲ್ಲಿ ಇರುವ ಉಗ್ರರ ಶಿಬಿರಗಳನ್ನ ಉಡಾಯಿಸಲಾಗಿದ್ದು, ಉಗ್ರರಿಗೆ ತಕ್ಕಪಾಠ ಕಲಿಸಿದ್ದಾರೆ ಭಾರತದ ಯೋಧರು. 'ಆಪರೇಷನ್ ಸಿಂಧೂರ್' ಹೆಸರಲ್ಲಿ ಪಾಕಿಸ್ತಾನದ 9 ಪ್ರದೇಶಗಳ ಮೇಲೆ ಈ ರೀತಿಯಾಗಿ ಭಾರಿ ದೊಡ್ಡ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ನಡೆಸಿ ಉಗ್ರರ ಬಿಡಾರಗಳನ್ನು ಉಡೀಸ್ ಮಾಡಿಬಿಟ್ಟಿದೆ ಭಾರತೀಯ ಸೇನೆ. ಹೀಗಿದ್ದಾಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ.
ಪಾಕಿಸ್ತಾನಕ್ಕೆ ಸಿಕ್ಕಿತು ತಕ್ಕ ಉತ್ತರ!
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಯ ಕಾರ್ಯಾಚರಣೆ ಕುರಿತು, ಮಹತ್ವದ ಪ್ರತಿಕ್ರಿಯೆ ನೀಡುತ್ತಾ 'ಭಾರತ ಮಾತೆಗೆ ಜಯವಾಗಲಿ...' ಎಂದಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂಡಿಯನ್ ಆರ್ಮಿಯ ಕಾರ್ಯಾಚರಣೆ ಬಗ್ಗೆ ರಿಯಾಕ್ಷನ್ ಕೊಟ್ಟಿದ್ದಾರೆ. ಭಾರತ ಸರ್ಕಾರ ಹಲವು ಸುತ್ತಿನ ಸಭೆಗಳನ್ನ ನಡೆಸಿ ಪಾಪಿ ಪಾಕಿಸ್ತಾನದ ಉಗ್ರರ ವಿರುದ್ದ ಕ್ರಮಕ್ಕೆ ಸಂಪೂರ್ಣ ಸ್ವತಂತ್ರವನ್ನ ಸೇನೆಗೆ ನೀಡಿತ್ತು. ಭಾರತೀಯ ಸೇನೆ ಯಾವುದೇ ರೀತಿಯ ಕ್ರಮ ಕೈಗೊಳ್ಳಬಹುದು ಎನ್ನುವ ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಭಾರತೀಯ ಸೇನೆ ಅದನ್ನ ಮಾಡಿ ತೋರಿಸಿದೆ.
ಒಟ್ನಲ್ಲಿ ಪಾಕಿಸ್ತಾನಕ್ಕೆ ಇದೀಗ ನೀಡಿರುವ ಏಟು ದೊಡ್ಡದಾಗಿದ್ದು, ಭಾರತೀಯ ಸೇನೆಯಿಂದ ಸಿಕ್ಕಿರುವ ಏಟಿಗೆ ಪಾಕಿಸ್ತಾನ ನಲುಗಿ ಹೋಗಿದೆ. ಅಲ್ಲದೆ ಯಾವುದೇ ಕ್ಷಣದಲ್ಲಿ ಪಾಕಿಸ್ತಾನದ ಕಡೆಯಿಂದ ಕೂಡ ದಾಳಿ ನಡೆಯುವ ಸಾಧ್ಯತೆ ಇದ್ದು, ಭಾರತೀಯ ಸೇನೆ ಅಲರ್ಟ್ ಆಗಿದೆ. ಅಲ್ಲದೆ ಗಡಿ ಭಾಗದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications