ವಾಜಪೇಯಿ, ಮಾಳವೀಯರಿಗೆ 'ಭಾರತರತ್ನ' ಘೋಷಣೆ
ನವದೆಹಲಿ, ಡಿ.24: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಶಿಕ್ಷಣ ತಜ್ಞ ಮದನ್ ಮೋಹನ್ ಮಾಳವೀಯ ಅವರಿಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕಚೇರಿಯಿಂದ ಅಧಿಕೃತವಾಗಿ ಈ ಬಗ್ಗೆ ಟ್ವೀಟ್ ಮಾಡಲಾಗಿದೆ.
ವಾಜಪೇಯಿ ಅವರ 90ನೇ ಹುಟ್ಟು ಹಬ್ಬ(ಡಿ.25ರಂದು)ಕ್ಕೆ ನರೇಂದ್ರ ಮೋದಿ ಅವರು ಭಾರಿ ಉಡುಗೊರೆಯನ್ನು ಈ ಮೂಲಕ ನೀಡಿದ್ದಾರೆ. ವಾಜಪೇಯಿ ಅವರ ಹುಟ್ಟುಹಬ್ಬ ದಿನವನ್ನು 'ಉತ್ತಮ ಆಡಳಿತ ದಿನ' ಎಂದು ಮೋದಿ ಘೋಷಿಸಿದ್ದಾರೆ. [ಅಟಲ್ ಬಿಹಾರಿ ವಾಜಪೇಯಿ ಪರಿಚಯ]
ಸಜ್ಜನ ರಾಜಕಾರಣಿ, ಅಜಾತಶತ್ರು ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ನೀಡಬೇಕು ಎಂಬುದು ಮೋದಿ ಅವರ ಬಹು ದಿನಗಳ ಕನಸಾಗಿದೆ. [ಸಿಎನ್ ಆರ್ ರಾವ್, ಸಚಿನ್ ಈಗ 'ಭಾರತ ರತ್ನ' ]

ನವದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. 1996ರಲ್ಲಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ 13 ದಿನಗಳ ಅಧಿಕಾರ ನಡೆಸಿತ್ತು. ವಾಜಪೇಯಿ ಅವರು ದೇಶದ 11ನೇ ಪ್ರಧಾನಿಯಾದರು. ನಂತರ 1998 ರಿಂದ 2004ರ ತನಕ ವಾಜಪೇಯಿ ಅವರು ಪೂರ್ಣ ಅಧಿಕಾರ ಅವಧಿ ಕಂಡ ಕಾಂಗ್ರೆಸ್ಸೇತರ ಪ್ರಥಮ ಪ್ರಧಾನಿ ಎನಿಸಿದರು. ['ಸಚಿನ್ ಗೆ ಭಾರತ ರತ್ನ ದೊಡ್ಡ ಜೋಕು']
ದೇಶದ ಅತ್ಯುನ್ನತ ಪ್ರಶಸ್ತಿ ಘೋಷಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
#PresidentMukherjee has been pleased to award Bharat Ratna to Pandit Madan Mohan Malaviya (posthumously) and to Shri Atal Bihari Vajpayee.
— President of India (@RashtrapatiBhvn) December 24, 2014 ಜನವರಿ 26ರ ಗಣರಾಜ್ಯೋತ್ಸವ ದಿನದಂದು ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆಯಿದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲೂ ವಾಜಪೇಯಿಗೆ ಭಾರತ ರತ್ನ ನೀಡಬೇಕೆಂದು ಬಿಜೆಪಿ ಆಗ್ರಹಿಸಿತ್ತು. [ಮದನ್ ಮೋಹನ್ ಮಾಳವೀಯ ಜೀವನ ಅವಲೋಕನ]
ಎನ್ ಡಿಎ ಅಧಿಕಾರ ಅವಧಿಯಲ್ಲಿ ಗಾಯಕಿ ಲತಾ ಮಂಗೇಷ್ಕರ್, ಉಸ್ತಾದ್ ಬಿಸ್ಮಿಲ್ಲಾ ಖಾನ್, ಅಮಾರ್ತ್ಯ ಸೇನ್, ಪಂಡಿತ್ ರವಿಶಂಕರ್, ಗೋಪಿನಾಥ್ ಬೊರ್ಡೊಲಾಯಿ, ಜಯಪ್ರಕಾಶ್ ನಾರಾಯಣ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ನೀಡಿತ್ತು.
#BharatRatna to Pandit Madan Mohan #Malaviya (posthumously)&to Shri Atal Bihari #Vajpayee, #PresidentMukherjee tweets pic.twitter.com/BIvISB82fo
— Doordarshan News (@DDNewsLive) December 24, 2014 ಯುಪಿಎ 2 ಸರ್ಕಾರ ತನ್ನ ಅವಧಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ವಿಜ್ಞಾನಿ, ಕನ್ನಡಿಗ ಪ್ರೊ.ಸಿ.ಎನ್ ಆರ್ ರಾವ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications