"ಕಲಂ 370ರದ್ದು; 'ಯುಗಪುರುಷ' ಮೋದಿಗೆ ಭಾರತರತ್ನ ಸಿಗಲಿ"
ನವದೆಹಲಿ, ಆಗಸ್ಟ್ 06: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ವಿಧೇಯಕ 370 ರದ್ದುಗೊಳಿಸುವ ಮೂಲಕ ಕಣಿವೆ ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸಂಸದರೊಬ್ಬರು ಆಗ್ರಹಿಸಿದ್ದಾರೆ.
ಮಧ್ಯಪ್ರದೇಶದ ರತ್ಲಂ ಲೋಕಸಭಾ ಕ್ಷೇತ್ರದ ಸಂಸದ ಗುಮಾನ್ಸಿಂಗ್ ಅವರು ಲೋಕಸಭಾ ಕಲಾಪದ ಶೂನ್ಯವೇಳೆಯಲ್ಲಿ ಮಾತನಾಡಿ, "ನರೇಂದ್ರ ಮೋದಿಯವರು ಯುಗಪುರುಷ. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಬೇಕು. ಆರ್ಟಿಕಲ್370 ರದ್ದುಗೊಳಿಸುವಂಥ ಕಠಿಣ ನಿರ್ಧಾರ ತೆಗೆದುಕೊಳ್ಳಲು ಅವರಿಂದ ಮಾತ್ರ ಸಾಧ್ಯ. ಅನೇಕ ದೇಶಗಳು ಈಗಾಗಲೇ ಮೋದಿಯವರನ್ನು ಗೌರವಿಸಿವೆ. ಜಮ್ಮುಕಾಶ್ಮೀರದ ವಿಚಾರದಲ್ಲಿ ಅವರು ಇಂದು ತೆಗೆದುಕೊಂಡ ನಿರ್ಧಾರದಿಂದ ನಮ್ಮ ದೇಶದ ಕೋಟ್ಯಂತರ ಜನರಿಗೆ ಸಂತೋಷವಾಗಿದೆ. ಹಾಗೇ ನಮ್ಮ ದೇಶದ ಅತ್ಯುನ್ನತ ಗೌರವವನ್ನು ಅವರಿಗೆ ನೀಡಬೇಕು" ಎಂದರು.
ಬಿಜೆಪಿ ಸಂಸದರ ಪೈಕಿ ರವಿ ಕಿಶನ್, ಪ್ರಜ್ಞಾ ಸಿಂಗ್ ಠಾಕೂರ್, ವಿಜಯ್ ಕುಮಾರ್ ದುಬೇ ಹಾಗೂ ವಿಷ್ಣು ದತ್ ಶರ್ಮ ಅವರು ಮಾತನಾಡಿ, ಸರ್ಕಾರದ ನಿರ್ಧಾರ ಐತಿಹಾಸಿಕವಾಗಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಹೊಸ ಮಾರ್ಗ ತೋರಿಸಿದ್ದಾರೆ ಎಂದರು.

ರಷ್ಯಾದ ಆರ್ಡರ್ ಆಫ್ ಸೈಂಟ್ ಆಂಡ್ರ್ಯೂ ಅಪೊಸ್ಲೆ ಗೌರವಕ್ಕೆ ಪಾತ್ರವಾಗಿರುವ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ ನೀಡುವ ಜಾಯೇದ್ ಪ್ರಶಸ್ತಿ, ಫಿಲಿಫ್ ಕೊಟ್ಲರ್ ಅಧ್ಯಕ್ಷೀಯ ಪ್ರಶಸ್ತಿ, ಸಿಯೋಲ್ ಶಾಂತಿ ಪುರುಸ್ಕಾರಗಳೂ ಮೋದಿ ಅವರಿಗೆ ಸಂದಿವೆ.
ಅಮಿತ್ ಶಾ ಮಂಡಿಸಿದ ವಿಧೇಯಕಗಳ ಪರ 125 ಹಾಗೂ ವಿರೋಧವಾಗಿ 61 ಧ್ವನಿ ಮತಗಳು ಬಿದ್ದವು. ಜಮ್ಮು ಮತ್ತು ಕಾಶ್ಮೀರ, ಲಡಾಕ್ ಪ್ರತ್ಯೇಕ ಕೇಂದ್ರಾಡಳಿತ ವಿಧೇಯಕ, ಕಾಶ್ಮೀರದಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಶೇ10ರಷ್ಟು ಮೀಸಲಾತಿ ನೀಡುವ Jammu and Kashmir Reservation Bill, 2019 ಬಿಲ್ ಕೂಡಾ ಪಾಸ್ ಆಗಿದೆ.
ಜಮ್ಮುಮತ್ತು ಕಾಶ್ಮೀರ ಹೊಸ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ವಿಧಾನಸಭೆ ಹೊಂದಲಿದೆ, ಲಡಾಕ್ ಹೊಸ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಯಾವುದೇ ವಿಧಾನಸಭೆ ಹೊಂದಿರುವುದಿಲ್ಲ. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಪುದುಚೇರಿಯಂತೆ ಚುನಾವಣೆ ಎದುರಿಸಿ ಜನಾದೇಶ ಪಡೆದ ಸರ್ಕಾರ ರಚನೆಯಾಗಿ ಹೊಸ ಮುಖ್ಯಮಂತ್ರಿ ಹೊಂದಬಹುದು. ಆದರೆ, ಲಡಾಕ್ ಮಾತ್ರ ಅಂಡಮಾನ್ ಮತ್ತು ನಿಕೋಬಾರ್ ಇನ್ನಿತರ ಕೇಂದ್ರಾಡಳಿತ ಪ್ರದೇಶಗಳಂತೆ ಉಳಿಯಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications