Bharat Rice: ಕೆಜಿಗೆ 29 ರೂಪಾಯಿ ಬೆಲೆಯ 'ಭಾರತ್ ರೈಸ್' ಆನ್ಲೈನ್ನಲ್ಲಿ ಲಭ್ಯವಿದೆಯೇ?
ನವದೆಹಲಿ, ಫೆಬ್ರವರಿ 09: ಕಳೆದ ವರ್ಷದಿಂದ ಚಿಲ್ಲರೆ ಅಕ್ಕಿ ಬೆಲೆಯಲ್ಲಿ 15% ಹೆಚ್ಚಳಕ್ಕೆ ಪ್ರತಿಕ್ರಿಯೆಯಾಗಿ ಮತ್ತು ಬೆಲೆ ಏರಿಕೆಯಿಂದ ತತ್ತರಿಸುವ ಜನರಿಗೆ ಪರಿಹಾರ ನೀಡಲು ಸರ್ಕಾರ 'ಭಾರತ್ ಅಕ್ಕಿ' ಪರಿಚಯಿಸಿದೆ. ಸರ್ಕಾರವು ಒಂದು ಕೆಜಿ ಅಕ್ಕಿಗೆ 29 ರೂಪಾಯಿ ಸಬ್ಸಿಡಿ ದರದಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಅಕ್ಕಿಯ ಬೆಲೆಯನ್ನು ಸ್ಥಿರಗೊಳಿಸಲು ಮತ್ತು ಆಹಾರದ ಮಾರುಕಟ್ಟೆ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.
ಭಾರತ್ ರೈಸ್ ಬೆಲೆ
ದೇಶದಲ್ಲಿ ಆಹಾರ ಧಾನ್ಯಗಳನ್ನು ಕಡಿಮೆ ಬೆಲೆಯಲ್ಲಿ ಜನ ಸಾಮಾನ್ಯರಿಗೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಭಾರತ್ ರೈಸ್ , ಭಾರತ್ ದಾಲ್, ಭಾರತ್ ಗೋಧಿ ಹಿಟ್ಟಿನ ಬಳಿಕ ಇದೀಗ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ಸಿಕ್ಕಿದೆ. ಆಹಾರ ಸಚಿವ ಪಿಯೂಷ್ ಗೋಯಲ್ ಅವರು ಫೆಬ್ರವರಿ 06 ರಿಂದ 'ಭಾರತ್' ಅಕ್ಕಿ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಮೊಬೈಲ್ ವ್ಯಾನ್ಗಳನ್ನು ಉದ್ಘಾಟಿಸಿದ್ದಾರೆ.

ಅಕ್ಕಿಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ನಿರ್ಧಾರವು ಬೃಹತ್ ಖರೀದಿದಾರರನ್ನೇ ಗುರಿಯಾಗಿಸಿಕೊಂಡು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಗೆ (OMSS) ಹೊಡೆತ ನೀಡಲಿದೆ. 'ಭಾರತ್ ರೈಸ್' ಎಂಬುದು ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಏರುತ್ತಿರುವ ಆಹಾರ ಬೆಲೆಗಳ ಪರಿಹಾರಕ್ಕೆ ಪರಿಚಯಿಸಿದ ಸಬ್ಸಿಡಿ ವಿಧವಾಗಿದೆ.
'ಭಾರತ್ ರೈಸ್' ಆರಂಭದಲ್ಲಿ, 5 ಕೆಜಿ ಅಕ್ಕಿಯನ್ನು ಆಹಾರ ನಿಗಮ ಆಫ್ ಇಂಡಿಯಾ (FCI) ಹೊರತುಪಡಿಸಿ NAFED, NCCF ಮತ್ತು ಕೇಂದ್ರೀಯ ಭಂಡಾರ್ ಮೂರು ಏಜೆನ್ಸಿಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಆರಂಭದಲ್ಲಿ, ಮೊಬೈಲ್ ವ್ಯಾನ್ಗಳು ಸೇರಿದಂತೆ ಕೇಂದ್ರೀಯ ಭಂಡಾರ್, NAFED ಮತ್ತು NCCF ಔಟ್ಲೆಟ್ಗಳಲ್ಲಿ ಭಾರತ್ ರೈಸ್ ಖರೀದಿಗೆ ಲಭ್ಯವಿರುತ್ತದೆ. ಇದಕ್ಕಾಗಿ 100 ಮೊಬೈಲ್ ವ್ಯಾನ್ಗಳನ್ನು ಬಿಡುಗಡೆ ಮಾಡಿದ್ದಾರೆ.

ಬುಕ್ಕಿಂಗ್ ವೆಬ್ಸೈಟ್ಗಳಲ್ಲಿ ಆನ್ಲೈನ್ನಲ್ಲಿ 'ಭಾರತ್ ರೈಸ್' ಲಭ್ಯವಿದೆಯೇ?
ಪ್ರಸ್ತುತ ಇದು ಯಾವುದೇ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಲ್ಲಿ 'ಭಾರತ್ ರೈಸ್' ಲಭ್ಯವಿಲ್ಲ. ಆದರೆ ಕೆಲವೇ ದಿನಗಳಲ್ಲಿ ಭಾರತ್ ರೈಸ್ ಚಿಲ್ಲರೆ ಸರಪಳಿಗಳು ಮತ್ತು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ಮೂಲಕವೂ ಲಭ್ಯವಾಗಲಿದೆ ಎಂಬ ಮಾಹಿತಿಯಿದೆ.
ಇತರೆ ಸಬ್ಸಿಡಿ ಸರಕುಗಳು
ಭಾರತ್ ರೈಸ್ ಜೊತೆಗೆ, ಗ್ರಾಹಕರಿಗೆ ಪರಿಹಾರ ನೀಡಲು ಸರ್ಕಾರವು ಇತರ ಸಬ್ಸಿಡಿ ವಸ್ತುಗಳನ್ನು ನೀಡುತ್ತದೆ. ಕಳೆದ ನವೆಂಬರ್ನಲ್ಲಿ, "ಭಾರತ್ ಅಟ್ಟಾ" ಎಂಬ ಸಬ್ಸಿಡಿ ಗೋಧಿಯನ್ನು ಪರಿಚಯಿಸಿದೆ. ಇದು ಕೂಡ NAFED, NCCF ಮತ್ತು ಕೇಂದ್ರೀಯ ಭಂಡಾರ್ನಂತಹ ಸಹಕಾರಿಗಳ ಮೂಲಕ ಲಭ್ಯವಿದೆ. ಇದಲ್ಲದೆ, ಸಹಕಾರಿ ಮಾರ್ಗಗಳ ಮೂಲಕ ಭಾರತ್ ದಾಲ್ ಅನ್ನು ಕೆಜಿಗೆ 60 ರೂ ಮತ್ತು ಈರುಳ್ಳಿ ಕೆಜಿಗೆ 25 ರೂಪಾಯಿಗೆ ನೀಡಲಾಗುತ್ತಿದೆ.
-
ಅಳೆದು ತೂಗಿ ಅನ್ನ ಮಾಡಬೇಡಿ,ತುಸು ಮಿಕ್ಕಲಿ: ಇದರ ಹಿಂದಿದೆ ಧಾರ್ಮಿಕ ಕಾರಣ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications