Breaking: 14 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ನವದೆಹಲಿ, ಸೆಪ್ಟೆಂಬರ್ 09: ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು 14 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಸ್ತುವಾರಿ ಹಾಗೂ ಸಹ ಪ್ರಭಾರಿಗಳನ್ನು ನೇಮಕಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಆದೇಶಿಸಿದ್ದಾರೆ.
ಬಿಜೆಪಿಯ ಸಾಂಸ್ಥಿಕ ಪುನರ್ ನಿರ್ಮಾಣದ ಉದ್ದೇಶದಿಂದ ನೂತನ ಸಾರಥಿಗಳನ್ನು ನೇಮಿಸಲಾಗಿದೆ. ಈ ಪಟ್ಟಿಯಲ್ಲಿ ಹರ್ಯಾಣಕ್ಕೆ ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇಬ್, ಕೇರಳಕ್ಕೆ ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮತ್ತು ಚಂಡೀಗಢಕ್ಕೆ ಗುಜರಾತ್ನ ಮಾಜಿ ಸಿಎಂ ವಿಜಯ ಭಾಯ್ ರೂಪಾನಿ ಇದ್ದಾರೆ.
ಬಿಜೆಪಿಯು ಸಂಸದೀಯ ಮಂಡಳಿಯ 11 ಸದಸ್ಯರ ಹೆಸರನ್ನು ಘೋಷಿಸಿದ ಒಂದು ತಿಂಗಳ ನಂತರದಲ್ಲಿ ಹೊಸ ರಾಜಕೀಯ ಬೆಳವಣಿಗೆ ನಡೆದಿದೆ. ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಸುಧಾ ಯಾದವ್, ಬಿಎಲ್ ಸಂತೋಷ್, ಸತ್ಯನಾರಾಯಣ್ ಜಟಿಯಾ, ಇಕ್ಬಾಲ್ ಸಿಂಗ್ ಲಾಲ್ಪುರ ಅವರಂತಹ ಹೊಸ ಸೇರ್ಪಡೆಗಳನ್ನು ಮಾಡಲಾಗಿದೆ. ಇದರ ಮಧ್ಯೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್ ಅವರನ್ನು ತೆಗೆದುಹಾಕಲಾಗಿತ್ತು.

ನೂತನ ಮಂಡಳಿಗೆ ಯಾರು ಸಾರಥಿ?
ಬಿಜೆಪಿಯಲ್ಲಿ ಹೊಸದಾಗಿ ರಚನೆಯಾದ ಮಂಡಳಿಯು ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನೇತೃತ್ವದಲ್ಲಿ ಇರುತ್ತದೆ. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಒಳಗೊಂಡಿರುತ್ತದೆ.

ಕೇಸರಿ ಪಕ್ಷವು 15 ಸದಸ್ಯರ ಕೇಂದ್ರ ಚುನಾವಣಾ ಸಮಿತಿಯನ್ನು ಸಹ ರಚಿಸಿದೆ. ಅದು ಜೆಪಿ ನಡ್ಡಾ ನೇತೃತ್ವದಲ್ಲಿ ಮತ್ತು ಪಿಎಂ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಸುಧಾ ಯಾದವ್, ಬಿಎಲ್ ಸಂತೋಷ್, ಸತ್ಯನಾರಾಯಣ್ ಜಟಿಯಾ, ಇಕ್ಬಾಲ್ ಸಿಂಗ್ ಲಾಲ್ಪುರ, ಭೂಪೇಂದ್ರ ಯಾದವ್, ದೇವೇಂದ್ರ ಫಡ್ನವಿಸ್, ಓಂ ಮಾಥುರ್ ಅವರನ್ನು ಒಳಗೊಂಡಿರುತ್ತದೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications