ಏ.6ರಂದು 42ನೇ ಭಾಜಪ ಸಂಸ್ಥಾಪನಾ ದಿನ; ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ
ನವದೆಹಲಿ, ಏಪ್ರಿಲ್ 5: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ನಾಳೆ (ಏಪ್ರಿಲ್ 6, ಬುಧವಾರ) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಹಿತಿ ನೀಡಿದ್ದು, ಪಕ್ಷದ ಸಂಸದರು, ಸಚಿವರು, ಶಾಸಕರು, ಕಾರ್ಯಕರ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ ಎಂದರು.
ಏಪ್ರಿಲ್ 7 ರಿಂದ 20ರ ವರೆಗೆ ದೇಶಾದ್ಯಂತ ಸಭೆ ಆಯೋಜನೆ ಮಾಡಲಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಸಭೆ, ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಹಿರಿಯ ನಾಯಕರೂ ಆಗಿರುವ ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.

ಭಾರತೀಯ ಜನತಾ ಪಕ್ಷವು ಏಪ್ರಿಲ್ 6ರ ಬುಧವಾರದಂದು ತನ್ನ 42ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಪ್ರಸ್ತುತ ಭಾರತದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿಯು 1980ರಲ್ಲಿ ಜನ್ಮ ತಾಳಿದೆ. 4 ದಶಕಗಳ ಹಿಂದೆ ಆರಂಭವಾದ ಪಕ್ಷವನ್ನು ಹಲವು ನಾಯಕರು ಕಾರ್ಯ ಮುನ್ನಡೆಸಿಕೊಂಡು ಬಂದಿದ್ದಾರೆ. ಹಲವು ಹಿರಿ- ಕಿರಿಯ ನಾಯಕರು ಸಂಘಟಿಸಿದ ಬಿಜೆಪಿ ಇದೀಗ ಪ್ರಮುಖ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದೆ.

ಬಿಜೆಪಿ ಪಕ್ಷವು ಹಲವಾರು ಅಡೆತಡೆಗಳು ಮತ್ತು ವೈಫಲ್ಯಗಳನ್ನು ಎದುರಿಸಿ, ಪ್ರಸ್ತುತ ಭಾರತೀಯ ರಾಜಕೀಯ ಸನ್ನಿವೇಶದಲ್ಲಿ ದೃಢವಾದ ನೆಲೆಯನ್ನು ಕಂಡುಕೊಂಡಿದೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ.
ಈ ಬಾರಿಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕೆರೆಗಳನ್ನು ಸ್ವಚ್ಛಗೊಳಿಸುವುದು, ರಕ್ತದಾನ ಶಿಬಿರಗಳು, ಆರೋಗ್ಯ ತಪಾಸಣೆ ಮತ್ತು ಲಸಿಕೆ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಕೆಲವು ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಕಾರ್ಯಕರ್ತರನ್ನು ಕೋರಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications